ಬ್ರೇಕಿಂಗ್ ನ್ಯೂಸ್
29-02-24 10:43 am Mangalore Correspondent ಕರಾವಳಿ
ಮಂಗಳೂರು, ಫೆ.28: ಈಗೆಲ್ಲಾ ದೈವ, ದೇವರುಗಳ ಬಗ್ಗೆ ಜನರು ನಂಬಿಕೆ ಕಳಕೊಳ್ಳುತ್ತಿದ್ದಾರೆ ಎನ್ನುವ ಟೀಕೆ ಕೇಳಿಬರುತ್ತಿರುವಾಗಲೇ ಮಂಗಳೂರಿನಲ್ಲಿ ದೈವ ಪವಾಡ ತೋರಿಸಿದೆ. ಮಂಗಳೂರು ನಗರದ ಯೆಯ್ಯಾಡಿ ಕೈಗಾರಿಕಾ ಸಂಕೀರ್ಣದ ಒಳಗಡೆ ಇರುವ ನಾಗ ರಕ್ತೇಶ್ವರಿ ದೈವ ಸಾನ್ನಿಧ್ಯದ ವಠಾರದಲ್ಲಿ ರಾತ್ರಿ ವೇಳೆ ದೈವದ ಸಂಚಾರ ಜನಸಾಮಾನ್ಯರ ಗಮನಕ್ಕೆ ಬಂದಿದೆ. ಅಷ್ಟೇ ಅಲ್ಲ, ಅದನ್ನು ಆಸ್ತಿಕ ಭಕ್ತರು ಕುತೂಹಲದಿಂದ ಮೊಬೈಲಿನಲ್ಲಿ ರೆಕಾರ್ಡ್ ಮಾಡಿದ್ದು ವಿಡಿಯೋ ವೈರಲ್ ಮಾಡಿದ್ದಾರೆ.
ಮಧ್ಯರಾತ್ರಿ ಗೆಜ್ಜೆ ಸದ್ದು ಹಾಗು ಬೆಂಕಿಯ ರೂಪದಲ್ಲಿ ದೈವದ ಸಂಚಾರ ಆಗುವ ವಿಸ್ಮಯಕಾರಿ ದೃಶ್ಯ ಸ್ಥಳೀಯ ನಿವಾಸಿಯ ಮೊಬೈಲ್ ನಲ್ಲಿ ಸೆರೆಯಾಗಿದೆ. ಮಂಗಳೂರಿನ ಯೆಯ್ಯಾಡಿ ಇಂಡಸ್ಟ್ರಿಯಲ್ ಏರಿಯಾದ ಲಿಯೋ ಕ್ರಾಸ್ತಾ ಕಾಂಪೌಂಡ್ ನಲ್ಲಿ ಕಳೆದ ನಾಲ್ಕೈದು ವರ್ಷಗಳಿಂದಲೂ ದೈವದ ಗೆಜ್ಜೆ ಸದ್ದು ಕೇಳಿಬರುತ್ತಿದೆ. ಮಧ್ಯರಾತ್ರಿ ಕಳೆದ ಬಳಿಕ ದೈವದ ಸಂಚಾರ ಆರಂಭವಾಗುತ್ತಿದ್ದು, ಅಲ್ಲಿನ ತುಸು ದೂರದ ಎರಡು ಮಾರ್ಗ ಜೋಡುವ ಸ್ಥಳದಿಂದ ದೈವ ಸಾನ್ನಿಧ್ಯ ಇರುವಲ್ಲಿ ವರೆಗೆ ಗೆಜ್ಜೆ ಸದ್ದು ಕೇಳಿಬರುತ್ತಿದೆ. ಇದನ್ನು ಸ್ಥಳೀಯ ಪರಿಸರದ ಹಲವಾರು ಮಂದಿ ಕೇಳಿಸಿಕೊಂಡಿದ್ದು ರಕ್ತೇಶ್ವರಿ ದೈವದ ಸಂಚಾರ ಎಂದು ನಂಬಿದ್ದರು. ಅಲ್ಲದೆ, ಆ ದೈವಕ್ಕೆ ಭಕ್ತಿಯಿಂದ ನಮಿಸುವುದನ್ನೂ ಮಾಡಿಕೊಂಡಿದ್ದರು.



ಮಂಗಳೂರಿನ ಸಾಮಾಜಿಕ ಕಾರ್ಯಕರ್ತ ದೀಪು ಶೆಟ್ಟಿಗಾರ್ ಕಳೆದ ಹಲವು ವರ್ಷಗಳಿಂದ ಇದೇ ಪ್ರದೇಶದಲ್ಲಿ ನೆಲೆಸಿದ್ದು ಕಳೆದ ಹತ್ತು ವರ್ಷಗಳಿಂದ ಸ್ಥಳೀಯ ನಾಗನ ಬನಕ್ಕೆ ದೀಪ ಇಟ್ಟು ಆರಾಧನೆ ಮಾಡುತ್ತಿದ್ದಾರೆ. ಮೊದಲಿಗೆ ನಾಗನಿಗೆ ಸಂಜೆ ದೀಪ ಇಡುತ್ತಿದ್ದ ಹೊತ್ತಿನಲ್ಲಿ ದೈವದ ಹೆಜ್ಜೆ ಸದ್ದು ಕೇಳಿಸಿತ್ತು. ಯಾರೋ ಗೆಜ್ಜೆ ಕಟ್ಟಿಕೊಂಡು ನಡೆದು ಹೋಗುವಂತೆ ಅನುಭವಕ್ಕೆ ಬಂದಿತ್ತು. ಈ ಬಗ್ಗೆ ಜ್ಯೋತಿಷ್ಯದಲ್ಲಿ ಕೇಳಿದಾಗ, ನಾಗ ಬನದ ಪಕ್ಕದಲ್ಲೇ ಇರುವ ರೆಂಜೆಯ ಮರದಲ್ಲಿ ರಕ್ತೇಶ್ವರಿ ದೈವದ ಸಾನಿಧ್ಯವಿರುವ ಸಾಧ್ಯೆತೆಯಿದೆ. ಅದಕ್ಕೂ ಒಂದು ದೀಪ ಇಡುವಂತೆ ಸೂಚಿಸಿದ್ದರು. ಅದರಂತೆ, ರಕ್ತೇಶ್ವರಿ ದೈವಕ್ಕೂ ದೀಪು ಶೆಟ್ಟಿಗಾರ್ ದೀಪ ಇಡಲು ಆರಂಭಿಸಿದ್ದರು.
ಆದರೆ ಗೆಜ್ಜೆ ಸದ್ದು ಕಡಿಮೆಯಾಗಿರಲಿಲ್ಲ. ಆಗೊಮ್ಮ ಈಗೊಮ್ಮೆ ಎಂಬಂತೆ ರಾತ್ರಿ ವೇಳೆ ಗೆಜ್ಜೆಯ ಸದ್ದಿನೊಂದಿಗೆ ದೈವ ನಡೆದುಕೊಂಡು ಹೋಗುವ ಅನುಭವ ಅಲ್ಲಿನ ಜನರಿಗೆ ಆಗುತ್ತಿದೆ. ರಾತ್ರಿ ವೇಳೆ ಗೆಜ್ಜೆ ಸದ್ದಿನೊಂದಿಗೆ ಸಾನ್ನಿಧ್ಯಕ್ಕೆ ಬರುವುದು, ಆ ಸಂದರ್ಭದಲ್ಲಿ ಬೆಂಕಿಯಂತೆ ಬೆಳಕು ಹರಿಯುವುದು ಇತ್ಯಾದಿ ಜನರ ಗೋಚರಕ್ಕೆ ಬರುತ್ತಿದೆ. ಇದರಿಂದ ಒಂದಷ್ಟು ಜನರು ಭಯಗೊಂಡಿದ್ದರೆ, ಮತ್ತೊಂದಷ್ಟು ಜನರು ಅದು ದೈವದ ಪವಾಡ, ಕಾರಣಿಕ ಎಂದು ಹೇಳಿಕೊಂಡಿದ್ದರು. ಈ ಬಗ್ಗೆ ದೈವ ಕಟ್ಟುವವರಲ್ಲಿ ಕೇಳಿ ತಿಳಿಯಬೇಕು ಎಂದುಕೊಂಡು ದೀಪು ಶೆಟ್ಟಿಗಾರ್ ಮತ್ತು ಅವರ ಸ್ನೇಹಿತರು ಅಲ್ಲಿನ ಕಟ್ಟಡ ಒಂದರ ಮರೆಯಲ್ಲಿ ನಿಂತು ರಾತ್ರಿ ಹೊತ್ತಿನಲ್ಲಿ ವಿಡಿಯೋ ಮಾಡಿದ್ದಾರೆ. ಅದೀಗ ಭಾರೀ ವೈರಲ್ ಆಗಿದ್ದು, ಆಧುನಿಕ ಕಾಲದಲ್ಲಿಯೂ ತುಳುನಾಡಿನ ದೈವಗಳು ಕಾರಣಿಕ ತೋರಿಸುತ್ತಿವೆ ಎನ್ನುವುದನ್ನು ಸಾಬೀತು ಮಾಡಿದೆ.
ಈ ರೀತಿ ವಿಚಿತ್ರ ಗೆಜ್ಜೆ ಸದ್ದು ಕೇಳುತ್ತಿದ್ದರೆ, ಸುತ್ತಮುತ್ತಲಿನ ನಾಯಿಗಳು ಬಾಲ ಅಲ್ಲಾಡಿಸಿಕೊಂಡು ಹೋಗುವುದನ್ನೂ ಕೆಲವರು ಕಂಡಿದ್ದಾರೆ. ದೂರದಲ್ಲಿ ಮನೆ ಒಳಗೆ ಕಟ್ಟಿದ್ದ ನಾಯಿ ತೀವ್ರವಾಗಿ ಬೊಗಳುವುದನ್ನೂ ಜನ ಕಂಡಿದ್ದಾರೆ. ಹೀಗಾಗಿ ಜನರಲ್ಲಿಯೂ ದೈವದ ಕಾರಣಿಕ, ಅದನ್ನು ಹಿಂಬಾಲಿಸುವ ನಾಯಿಗಳ ಬಗ್ಗೆಯೂ ಕುತೂಹಲ ಮನೆ ಮಾಡಿದೆ. ದೈವಗಳ ನಡೆಯನ್ನು ನಾಯಿಗಳು ಗುರುತು ಹಿಡಿಯುತ್ತಾ ಎನ್ನುವ ಕುತೂಹಲದಲ್ಲಿ ಜನ ಇದ್ದಾರೆ.
ಯೆಯ್ಯಾಡಿ ನಾಗ, ರಕ್ತೇಶ್ವರಿ ಹಾಗು ಪರಿವಾರ ದೈವಗಳ ಸಾನಿಧ್ಯದಲ್ಲಿ ಪ್ರತಿ ವರ್ಷ ಪರ್ವಾದಿಗಳು ನಡೆಯುತ್ತಿದ್ದು ಆ ಸಂದರ್ಭದಲ್ಲಿಯೂ ರಾತ್ರಿ ವೇಳೆ ಗೆಜ್ಜೆ ಸದ್ದು ಕೇಳಿಸಿದ್ಯಂತೆ. ಸದ್ಯಕ್ಕೆ ಆ ಜಾಗದಲ್ಲಿ ರೆಂಜೆ ಮರ ಮತ್ತು ದೀಪ ಇಡುವ ಜಾಗ ಬಿಟ್ಟರೆ ಅಲ್ಲಿ ಬೇರೇನೂ ಇಲ್ಲ. ಖಾಲಿ ಜಾಗವೇ ಆಗಿದ್ದರೂ ರಾತ್ರಿ ಹೊತ್ತಿನಲ್ಲಿ ವಿಚಿತ್ರ ದನಿಯೊಂದಿಗೆ ದೈವ ಸಂಚಾರ ಮಾಡುವುದು ಭಕ್ತರ ಕುತೂಹಲ ಮತ್ತು ನಾಸ್ತಿಕರಿಗೆ ಸವಾಲಿನ ಸಂಗತಿಯಾಗಿ ಪರಿಣಮಿಸಿದೆ. ಸದ್ಯ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದು, ದೈವದ ಕಾರಣಿಕಕ್ಕೆ ಸಾಕ್ಷಿ ಎಂದು ಆಸ್ತಿಕರು ಹೇಳುತ್ತಿದ್ದಾರೆ.
People in Yeyyadi Estate experience sound of daiva with stepa at raktheshwari daiva centre in Mangalore. The video of this has gone viral on social media.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 06:20 pm
Mangalore Correspondent
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm