ಬ್ರೇಕಿಂಗ್ ನ್ಯೂಸ್
29-02-24 07:03 pm Mangalore Correspondent ಕರಾವಳಿ
ಮಂಗಳೂರು, ಫೆ.29: ದಕ್ಷಿಣ ಕನ್ನಡ ಲೋಕಸಭೆ ಚುನಾವಣೆಯಲ್ಲಿ ಅರುಣ್ ಪುತ್ತಿಲ ಪಕ್ಷೇತರ ಸ್ಪರ್ಧಿಸಲಿದ್ದಾರೆ ಎಂದು ಪುತ್ತಿಲ ಪರಿವಾರದ ಮುಖಂಡರು ಸುದ್ದಿಗೋಷ್ಟಿಯಲ್ಲಿ ಹೇಳಿದ್ದಾರೆ.
ಅರುಣ ಪುತ್ತಿಲ ಬಿಜೆಪಿ ಸೇರ್ಪಡೆಯ ಬಗ್ಗೆ ಹಲವು ಸುತ್ತಿನ ಮಾತುಕತೆಗಳು ನಡೆದಿದ್ದವು. ಆದರೆ ಪುತ್ತಿಲ ಪರಿವಾರ ಪುತ್ತೂರು ಮಂಡಲಾಧ್ಯಕ್ಷ ಸ್ಥಾನದ ಬೇಡಿಕೆ ಇರಿಸಿತ್ತು. ಆ ರೀತಿಯ ಬೇಡಿಕೆಗೆ ರಾಜ್ಯ ನಾಯಕರು ಮಣೆ ಹಾಕಿಲ್ಲ. ಇತ್ತೀಚೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಷರತ್ತಿಲ್ಲದೆ ಪಕ್ಷ ಸೇರುವಂತೆ ಸೂಚಿಸಿದ್ದರು.

ಈ ಹಿನ್ನೆಲೆಯಲ್ಲಿ ಪುತ್ತಿಲ ಪರಿವಾರದ ನಾಯಕರು ಸುದ್ದಿಗೋಷ್ಟಿ ನಡೆಸಿದ್ದು ನಾವು ಹಿಂದುತ್ವದ ರಕ್ಷಣೆಗಾಗಿ ಚುನಾವಣೆ ಸ್ಪರ್ಧೆ ಮಾಡುತ್ತೇವೆ. ಮುಂದಿನ ಲೋಕಸಭೆ ಸೇರಿದಂತೆ ಎಲ್ಲ ಚುನಾವಣೆಗೂ ಸ್ಪರ್ಧೆ ಮಾಡಲಿದ್ದೇವೆ. ಜಿಲ್ಲೆಯಾದ್ಯಂತ ಪುತ್ತಿಲ ಪರಿವಾರ ಸಂಘಟನೆಯನ್ನು ಬಲಪಡಿಸುತ್ತೇವೆ ಎಂದು ಹೇಳಿದ್ದಾರೆ.
ಆಮೂಲಕ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಅರುಣ್ ಪುತ್ತಿಲ ಬಂಡಾಯ ಸ್ಪರ್ಧಿಸುತ್ತಾರೆ ಅನ್ನುವ ಸುಳಿವನ್ನು ನೀಡಿದ್ದಾರೆ. ಅಲ್ಲದೆ, ಲೋಕಸಭೆ ಬಂಡಾಯ ಸಾರುವ ಸುಳಿವು ಕೊಟ್ಟು ಬಿಜೆಪಿ ನಾಯಕರಿಗೆ ಬಿಸಿ ಮುಟ್ಟಿಸುವ ಯತ್ನ ಮಾಡಿದ್ದಾರೆ. ಈಗಾಗಲೇ ಜಿಲ್ಲಾ ಬಿಜೆಪಿ ನಾಯಕರು ಪುತ್ತೂರು ಮಂಡಲದ ಅಧ್ಯಕ್ಷ ಸ್ಥಾನವನ್ನು ತುಂಬದೆ ಉಳಿಸಿದ್ದಾರೆ. ಪಕ್ಷಕ್ಕೆ ಪುತ್ತಿಲ ಸೇರ್ಪಡೆಯಾದರೆ ಅವರಿಗೇ ಆ ಸ್ಥಾನ ಉಳಿಸಿಟ್ಟಂತೆ ಕಂಡಿತ್ತು. ಆದರೆ, ಬೇಷರತ್ತಾಗಿ ಪಕ್ಷ ಸೇರ್ಪಡೆಯಾಗುವಂತೆ ಬಾಹ್ಯವಾಗಿ ಬಿಜೆಪಿ ನಾಯಕರು ಸೂಚಿಸಿದ್ದರು. ಪಕ್ಷಕ್ಕೆ ಬಂದ ಮೇಲೆ ನಾವು ಹುದ್ದೆ, ಜವಾಬ್ದಾರಿ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂಬ ನಿರ್ಧಾರಕ್ಕೂ ಬಂದಿದ್ದಾರೆ. ಆದರೆ ಪುತ್ತಿಲ ಪರಿವಾರ ಲೋಕಸಭೆ ಚುನಾವಣೆಯಲ್ಲೇ ತೊಡೆ ತಟ್ಟಲು ತಯಾರಿ ನಡೆಸಿದಂತೆ ಭಾಸವಾಗಿದೆ.
Dakshina Kannada Lok Sabha Constituency Arun Kumar Puthila Decided To Contest Election As Independent Candidate.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 03:04 pm
HK News Desk
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm