ಬ್ರೇಕಿಂಗ್ ನ್ಯೂಸ್
29-02-24 07:03 pm Mangalore Correspondent ಕರಾವಳಿ
ಮಂಗಳೂರು, ಫೆ.29: ದಕ್ಷಿಣ ಕನ್ನಡ ಲೋಕಸಭೆ ಚುನಾವಣೆಯಲ್ಲಿ ಅರುಣ್ ಪುತ್ತಿಲ ಪಕ್ಷೇತರ ಸ್ಪರ್ಧಿಸಲಿದ್ದಾರೆ ಎಂದು ಪುತ್ತಿಲ ಪರಿವಾರದ ಮುಖಂಡರು ಸುದ್ದಿಗೋಷ್ಟಿಯಲ್ಲಿ ಹೇಳಿದ್ದಾರೆ.
ಅರುಣ ಪುತ್ತಿಲ ಬಿಜೆಪಿ ಸೇರ್ಪಡೆಯ ಬಗ್ಗೆ ಹಲವು ಸುತ್ತಿನ ಮಾತುಕತೆಗಳು ನಡೆದಿದ್ದವು. ಆದರೆ ಪುತ್ತಿಲ ಪರಿವಾರ ಪುತ್ತೂರು ಮಂಡಲಾಧ್ಯಕ್ಷ ಸ್ಥಾನದ ಬೇಡಿಕೆ ಇರಿಸಿತ್ತು. ಆ ರೀತಿಯ ಬೇಡಿಕೆಗೆ ರಾಜ್ಯ ನಾಯಕರು ಮಣೆ ಹಾಕಿಲ್ಲ. ಇತ್ತೀಚೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಷರತ್ತಿಲ್ಲದೆ ಪಕ್ಷ ಸೇರುವಂತೆ ಸೂಚಿಸಿದ್ದರು.

ಈ ಹಿನ್ನೆಲೆಯಲ್ಲಿ ಪುತ್ತಿಲ ಪರಿವಾರದ ನಾಯಕರು ಸುದ್ದಿಗೋಷ್ಟಿ ನಡೆಸಿದ್ದು ನಾವು ಹಿಂದುತ್ವದ ರಕ್ಷಣೆಗಾಗಿ ಚುನಾವಣೆ ಸ್ಪರ್ಧೆ ಮಾಡುತ್ತೇವೆ. ಮುಂದಿನ ಲೋಕಸಭೆ ಸೇರಿದಂತೆ ಎಲ್ಲ ಚುನಾವಣೆಗೂ ಸ್ಪರ್ಧೆ ಮಾಡಲಿದ್ದೇವೆ. ಜಿಲ್ಲೆಯಾದ್ಯಂತ ಪುತ್ತಿಲ ಪರಿವಾರ ಸಂಘಟನೆಯನ್ನು ಬಲಪಡಿಸುತ್ತೇವೆ ಎಂದು ಹೇಳಿದ್ದಾರೆ.
ಆಮೂಲಕ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಅರುಣ್ ಪುತ್ತಿಲ ಬಂಡಾಯ ಸ್ಪರ್ಧಿಸುತ್ತಾರೆ ಅನ್ನುವ ಸುಳಿವನ್ನು ನೀಡಿದ್ದಾರೆ. ಅಲ್ಲದೆ, ಲೋಕಸಭೆ ಬಂಡಾಯ ಸಾರುವ ಸುಳಿವು ಕೊಟ್ಟು ಬಿಜೆಪಿ ನಾಯಕರಿಗೆ ಬಿಸಿ ಮುಟ್ಟಿಸುವ ಯತ್ನ ಮಾಡಿದ್ದಾರೆ. ಈಗಾಗಲೇ ಜಿಲ್ಲಾ ಬಿಜೆಪಿ ನಾಯಕರು ಪುತ್ತೂರು ಮಂಡಲದ ಅಧ್ಯಕ್ಷ ಸ್ಥಾನವನ್ನು ತುಂಬದೆ ಉಳಿಸಿದ್ದಾರೆ. ಪಕ್ಷಕ್ಕೆ ಪುತ್ತಿಲ ಸೇರ್ಪಡೆಯಾದರೆ ಅವರಿಗೇ ಆ ಸ್ಥಾನ ಉಳಿಸಿಟ್ಟಂತೆ ಕಂಡಿತ್ತು. ಆದರೆ, ಬೇಷರತ್ತಾಗಿ ಪಕ್ಷ ಸೇರ್ಪಡೆಯಾಗುವಂತೆ ಬಾಹ್ಯವಾಗಿ ಬಿಜೆಪಿ ನಾಯಕರು ಸೂಚಿಸಿದ್ದರು. ಪಕ್ಷಕ್ಕೆ ಬಂದ ಮೇಲೆ ನಾವು ಹುದ್ದೆ, ಜವಾಬ್ದಾರಿ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂಬ ನಿರ್ಧಾರಕ್ಕೂ ಬಂದಿದ್ದಾರೆ. ಆದರೆ ಪುತ್ತಿಲ ಪರಿವಾರ ಲೋಕಸಭೆ ಚುನಾವಣೆಯಲ್ಲೇ ತೊಡೆ ತಟ್ಟಲು ತಯಾರಿ ನಡೆಸಿದಂತೆ ಭಾಸವಾಗಿದೆ.
Dakshina Kannada Lok Sabha Constituency Arun Kumar Puthila Decided To Contest Election As Independent Candidate.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm