ಬ್ರೇಕಿಂಗ್ ನ್ಯೂಸ್
29-02-24 07:03 pm Mangalore Correspondent ಕರಾವಳಿ
ಮಂಗಳೂರು, ಫೆ.29: ದಕ್ಷಿಣ ಕನ್ನಡ ಲೋಕಸಭೆ ಚುನಾವಣೆಯಲ್ಲಿ ಅರುಣ್ ಪುತ್ತಿಲ ಪಕ್ಷೇತರ ಸ್ಪರ್ಧಿಸಲಿದ್ದಾರೆ ಎಂದು ಪುತ್ತಿಲ ಪರಿವಾರದ ಮುಖಂಡರು ಸುದ್ದಿಗೋಷ್ಟಿಯಲ್ಲಿ ಹೇಳಿದ್ದಾರೆ.
ಅರುಣ ಪುತ್ತಿಲ ಬಿಜೆಪಿ ಸೇರ್ಪಡೆಯ ಬಗ್ಗೆ ಹಲವು ಸುತ್ತಿನ ಮಾತುಕತೆಗಳು ನಡೆದಿದ್ದವು. ಆದರೆ ಪುತ್ತಿಲ ಪರಿವಾರ ಪುತ್ತೂರು ಮಂಡಲಾಧ್ಯಕ್ಷ ಸ್ಥಾನದ ಬೇಡಿಕೆ ಇರಿಸಿತ್ತು. ಆ ರೀತಿಯ ಬೇಡಿಕೆಗೆ ರಾಜ್ಯ ನಾಯಕರು ಮಣೆ ಹಾಕಿಲ್ಲ. ಇತ್ತೀಚೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಷರತ್ತಿಲ್ಲದೆ ಪಕ್ಷ ಸೇರುವಂತೆ ಸೂಚಿಸಿದ್ದರು.

ಈ ಹಿನ್ನೆಲೆಯಲ್ಲಿ ಪುತ್ತಿಲ ಪರಿವಾರದ ನಾಯಕರು ಸುದ್ದಿಗೋಷ್ಟಿ ನಡೆಸಿದ್ದು ನಾವು ಹಿಂದುತ್ವದ ರಕ್ಷಣೆಗಾಗಿ ಚುನಾವಣೆ ಸ್ಪರ್ಧೆ ಮಾಡುತ್ತೇವೆ. ಮುಂದಿನ ಲೋಕಸಭೆ ಸೇರಿದಂತೆ ಎಲ್ಲ ಚುನಾವಣೆಗೂ ಸ್ಪರ್ಧೆ ಮಾಡಲಿದ್ದೇವೆ. ಜಿಲ್ಲೆಯಾದ್ಯಂತ ಪುತ್ತಿಲ ಪರಿವಾರ ಸಂಘಟನೆಯನ್ನು ಬಲಪಡಿಸುತ್ತೇವೆ ಎಂದು ಹೇಳಿದ್ದಾರೆ.
ಆಮೂಲಕ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಅರುಣ್ ಪುತ್ತಿಲ ಬಂಡಾಯ ಸ್ಪರ್ಧಿಸುತ್ತಾರೆ ಅನ್ನುವ ಸುಳಿವನ್ನು ನೀಡಿದ್ದಾರೆ. ಅಲ್ಲದೆ, ಲೋಕಸಭೆ ಬಂಡಾಯ ಸಾರುವ ಸುಳಿವು ಕೊಟ್ಟು ಬಿಜೆಪಿ ನಾಯಕರಿಗೆ ಬಿಸಿ ಮುಟ್ಟಿಸುವ ಯತ್ನ ಮಾಡಿದ್ದಾರೆ. ಈಗಾಗಲೇ ಜಿಲ್ಲಾ ಬಿಜೆಪಿ ನಾಯಕರು ಪುತ್ತೂರು ಮಂಡಲದ ಅಧ್ಯಕ್ಷ ಸ್ಥಾನವನ್ನು ತುಂಬದೆ ಉಳಿಸಿದ್ದಾರೆ. ಪಕ್ಷಕ್ಕೆ ಪುತ್ತಿಲ ಸೇರ್ಪಡೆಯಾದರೆ ಅವರಿಗೇ ಆ ಸ್ಥಾನ ಉಳಿಸಿಟ್ಟಂತೆ ಕಂಡಿತ್ತು. ಆದರೆ, ಬೇಷರತ್ತಾಗಿ ಪಕ್ಷ ಸೇರ್ಪಡೆಯಾಗುವಂತೆ ಬಾಹ್ಯವಾಗಿ ಬಿಜೆಪಿ ನಾಯಕರು ಸೂಚಿಸಿದ್ದರು. ಪಕ್ಷಕ್ಕೆ ಬಂದ ಮೇಲೆ ನಾವು ಹುದ್ದೆ, ಜವಾಬ್ದಾರಿ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂಬ ನಿರ್ಧಾರಕ್ಕೂ ಬಂದಿದ್ದಾರೆ. ಆದರೆ ಪುತ್ತಿಲ ಪರಿವಾರ ಲೋಕಸಭೆ ಚುನಾವಣೆಯಲ್ಲೇ ತೊಡೆ ತಟ್ಟಲು ತಯಾರಿ ನಡೆಸಿದಂತೆ ಭಾಸವಾಗಿದೆ.
Dakshina Kannada Lok Sabha Constituency Arun Kumar Puthila Decided To Contest Election As Independent Candidate.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 06:20 pm
Mangalore Correspondent
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm