ಬ್ರೇಕಿಂಗ್ ನ್ಯೂಸ್
29-02-24 08:00 pm Mangalore Correspondent ಕರಾವಳಿ
ಉಳ್ಳಾಲ, ಫೆ.29: ಸ್ವಂತ ಮನೆ ಪುನರ್ ನಿರ್ಮಾಣ ಹಂತದಲ್ಲಿದ್ದ ವೇಳೆಯಲ್ಲೇ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕುಂಪಲ ಸಮೀಪದ ಲಕ್ಷ್ಮಿ ಗುಡ್ಡೆ ಎಂಬಲ್ಲಿ ಗುರುವಾರ ಸಂಜೆ ನಡೆದಿದೆ.
ಮೂಲತಃ ಕುಂಪಲ ಆಶ್ರಯ ಕಾಲನಿ ನಿವಾಸಿ ಧನರಾಜ್ ಪಿ. ಪೂಜಾರಿ(32) ಆತ್ಮಹತ್ಯೆಗೈದ ಯುವಕ. ಆಶ್ರಯ ಕಾಲನಿಯಲ್ಲಿ ನೆಲೆಸಿದ್ದ ಧನರಾಜ್ ಕುಟುಂಬವು ಮನೆ ಪುನರ್ ನಿರ್ಮಾಣದ ಹಿನ್ನೆಲೆಯಲ್ಲಿ ಸಮೀಪದ ಲಕ್ಷ್ಮೀಗುಡ್ಡೆಯ ಬಾಡಿಗೆ ಮನೆಯಲ್ಲಿ ನೆಲೆಸಿತ್ತು. ಅವಿವಾಹಿತನಾಗಿರುವ ಧನರಾಜ್ ದೇರಳಕಟ್ಟೆಯ ಯೆನಪೋಯ ಪಾರ್ಕಲ್ಲಿ ಆಟೋ ರಿಕ್ಷಾ ಚಲಾಯಿಸುತ್ತಿದ್ದ. ಇಂದು ಸಂಜೆ ಧನರಾಜ್ ತಾಯಿ ಕೆಲಸ ಮುಗಿಸಿ ಮನೆಗೆ ಮರಳಿದಾಗ ಧನರಾಜ್ ಸೀಲಿಂಗ್ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಉಳ್ಳಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಮೃತ ಧನರಾಜ್ ತಂದೆ ರಿಕ್ಷಾ ಚಾಲಕರಾಗಿರುವ ಲಿಂಗಪ್ಪ ಪೂಜಾರಿಯವರು ಅನಾರೋಗ್ಯಕ್ಕೊಳಗಾಗಿದ್ದು ಇದರಿಂದಾಗಿ ಧನರಾಜ್ ಮನನೊಂದು ಆತ್ಮಹತ್ಯೆಗೈದಿರುವ ಶಂಕೆ ಇದೆ. ಹಿಂದೂ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಧನರಾಜ್ ತಂದೆ, ತಾಯಿ, ಸಹೋದರನನ್ನು ಅಗಲಿದ್ದಾನೆ.
ಸುಸೈಡ್ ಸ್ಪಾಟ್ ಕುಂಪಲ
ಎರಡು ವರ್ಷಗಳ ಹಿಂದೆ ನಡೆದ ರೂಪದರ್ಶಿ ಪ್ರೇಕ್ಷಾ ಆತ್ಮಹತ್ಯೆ ನಂತರ ಕುಂಪಲ ಪ್ರದೇಶದಲ್ಲಿ ಸಾಲು, ಸಾಲಾಗಿ ಹದಿಹರೆಯದ ಯುವಕ, ಯುವತಿಯರು ಆತ್ಮಹತ್ಯೆಗೈದು ಅಕಾಲಿಕ ಮರಣವನ್ನಪ್ಪುತ್ತಿದ್ದಾರೆ. ಕುಂಪಲ ಪ್ರದೇಶವು ಸುಸೈಡ್ ಸ್ಪಾಟ್ ಆಗಿ ಮಾರ್ಪಟ್ಟಂತೆ ಆಗಿದೆ.
32 year old youth commits suicide at his residence in Kumpala Mangalore. The deceased has been identifying as Dhanraj Poojari.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm