ಬ್ರೇಕಿಂಗ್ ನ್ಯೂಸ್
29-02-24 08:00 pm Mangalore Correspondent ಕರಾವಳಿ
ಉಳ್ಳಾಲ, ಫೆ.29: ಸ್ವಂತ ಮನೆ ಪುನರ್ ನಿರ್ಮಾಣ ಹಂತದಲ್ಲಿದ್ದ ವೇಳೆಯಲ್ಲೇ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕುಂಪಲ ಸಮೀಪದ ಲಕ್ಷ್ಮಿ ಗುಡ್ಡೆ ಎಂಬಲ್ಲಿ ಗುರುವಾರ ಸಂಜೆ ನಡೆದಿದೆ.
ಮೂಲತಃ ಕುಂಪಲ ಆಶ್ರಯ ಕಾಲನಿ ನಿವಾಸಿ ಧನರಾಜ್ ಪಿ. ಪೂಜಾರಿ(32) ಆತ್ಮಹತ್ಯೆಗೈದ ಯುವಕ. ಆಶ್ರಯ ಕಾಲನಿಯಲ್ಲಿ ನೆಲೆಸಿದ್ದ ಧನರಾಜ್ ಕುಟುಂಬವು ಮನೆ ಪುನರ್ ನಿರ್ಮಾಣದ ಹಿನ್ನೆಲೆಯಲ್ಲಿ ಸಮೀಪದ ಲಕ್ಷ್ಮೀಗುಡ್ಡೆಯ ಬಾಡಿಗೆ ಮನೆಯಲ್ಲಿ ನೆಲೆಸಿತ್ತು. ಅವಿವಾಹಿತನಾಗಿರುವ ಧನರಾಜ್ ದೇರಳಕಟ್ಟೆಯ ಯೆನಪೋಯ ಪಾರ್ಕಲ್ಲಿ ಆಟೋ ರಿಕ್ಷಾ ಚಲಾಯಿಸುತ್ತಿದ್ದ. ಇಂದು ಸಂಜೆ ಧನರಾಜ್ ತಾಯಿ ಕೆಲಸ ಮುಗಿಸಿ ಮನೆಗೆ ಮರಳಿದಾಗ ಧನರಾಜ್ ಸೀಲಿಂಗ್ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಉಳ್ಳಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಮೃತ ಧನರಾಜ್ ತಂದೆ ರಿಕ್ಷಾ ಚಾಲಕರಾಗಿರುವ ಲಿಂಗಪ್ಪ ಪೂಜಾರಿಯವರು ಅನಾರೋಗ್ಯಕ್ಕೊಳಗಾಗಿದ್ದು ಇದರಿಂದಾಗಿ ಧನರಾಜ್ ಮನನೊಂದು ಆತ್ಮಹತ್ಯೆಗೈದಿರುವ ಶಂಕೆ ಇದೆ. ಹಿಂದೂ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಧನರಾಜ್ ತಂದೆ, ತಾಯಿ, ಸಹೋದರನನ್ನು ಅಗಲಿದ್ದಾನೆ.
ಸುಸೈಡ್ ಸ್ಪಾಟ್ ಕುಂಪಲ
ಎರಡು ವರ್ಷಗಳ ಹಿಂದೆ ನಡೆದ ರೂಪದರ್ಶಿ ಪ್ರೇಕ್ಷಾ ಆತ್ಮಹತ್ಯೆ ನಂತರ ಕುಂಪಲ ಪ್ರದೇಶದಲ್ಲಿ ಸಾಲು, ಸಾಲಾಗಿ ಹದಿಹರೆಯದ ಯುವಕ, ಯುವತಿಯರು ಆತ್ಮಹತ್ಯೆಗೈದು ಅಕಾಲಿಕ ಮರಣವನ್ನಪ್ಪುತ್ತಿದ್ದಾರೆ. ಕುಂಪಲ ಪ್ರದೇಶವು ಸುಸೈಡ್ ಸ್ಪಾಟ್ ಆಗಿ ಮಾರ್ಪಟ್ಟಂತೆ ಆಗಿದೆ.
32 year old youth commits suicide at his residence in Kumpala Mangalore. The deceased has been identifying as Dhanraj Poojari.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm