ಬ್ರೇಕಿಂಗ್ ನ್ಯೂಸ್
29-02-24 09:08 pm Mangalore Correspondent ಕರಾವಳಿ
ಉಳ್ಳಾಲ, ಫೆ.29: ಪತ್ನಿ ಹೃದಯಾಘಾತದಿಂದ ಮೃತಪಟ್ಟ ಸುದ್ದಿ ತಿಳಿದ ಪತಿಯು ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೈದ ಘಟನೆ ಕೊಣಾಜೆ ಗ್ರಾಮಚಾವಡಿ ಎಂಬಲ್ಲಿ ನಡೆದಿದೆ.
ಕೊಣಾಜೆ ಗ್ರಾಮಚಾವಡಿ ನಿವಾಸಿಗಳಾದ ಸೇಸಪ್ಪ ಪೂಜಾರಿ(60) ಮತ್ತು ಅವರ ಪತ್ನಿ ಮೀನಾಕ್ಷಿ(55) ಮೃತರು.
ಮೀನಾಕ್ಷಿಯವರಿಗೆ ಕಳೆದ ಕೆಲವು ತಿಂಗಳ ಹಿಂದೆಯಷ್ಟೇ ಹೃದಯಾಘಾತವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಅದರ ಬಳಿಕ ಕಳೆದ ಎರಡು ದಿವಸಗಳ ಹಿಂದೆ ಮೀನಾಕ್ಷಿಯವರಿಗೆ ಎದೆ ನೋವು ಕಾಣಿಸಿಕೊಂಡು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಬುಧವಾರ ಸಂಜೆ ಮೀನಾಕ್ಷಿ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದು, ಇದನ್ನು ತಿಳಿದ ಪತಿ ಸೇಸಪ್ಪ ಅವರು ಮನನೊಂದು ಮನೆಯಲ್ಲಿ ವಿಷ ಪ್ರಾಷಣಗೈದಿದ್ದಾರೆ. ನೆರೆಹೊರೆಯ ಮನೆಯವರು ಸೇಸಪ್ಪ ಅವರ ಪ್ರಾಣಸಂಕಟದ ಹೊರಳಾಟ, ಚೀರಾಟದ ಸದ್ದು ಕೇಳಿ ಧಾವಿಸಿದ್ದು ತಕ್ಷಣವೇ ಅವರನ್ನ ಆಸ್ಪತ್ರೆಗೆ ದಾಖಲಿಸಿದರೂ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಶಾಲಾ ಬಸ್ ಚಾಲಕರಾಗಿ ಕೆಲಸ ಮಾಡುತ್ತಿದ್ದ ಸೇಸಪ್ಪ ಪೂಜಾರಿ ದಂಪತಿಗೆ ಮಕ್ಕಳಿಲ್ಲದ ಕೊರಗು ಅನೇಕ ವರ್ಷಗಳಿಂದ ಕಾಡುತ್ತಿತ್ತು. ಗುರುವಾರ ಪತಿ-ಪತ್ನಿಯ ಮೃತದೇಹಗಳನ್ನ ಒಟ್ಟಿಗೆ ಮನೆಗೆ ತಂದು ಬಳಿಕ ಎಲಿಯಾರ್ ಹಿಂದೂ ರುದ್ರಭೂಮಿಯಲ್ಲಿ ದಹನ ಮಾಡಲಾಗಿದೆ.
Mangalore Husband commits suicide after wife dies of heart attack in konaje. The deceased have been identified as senappa and Meenakshi.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm