ಬ್ರೇಕಿಂಗ್ ನ್ಯೂಸ್
29-02-24 09:08 pm Mangalore Correspondent ಕರಾವಳಿ
ಉಳ್ಳಾಲ, ಫೆ.29: ಪತ್ನಿ ಹೃದಯಾಘಾತದಿಂದ ಮೃತಪಟ್ಟ ಸುದ್ದಿ ತಿಳಿದ ಪತಿಯು ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೈದ ಘಟನೆ ಕೊಣಾಜೆ ಗ್ರಾಮಚಾವಡಿ ಎಂಬಲ್ಲಿ ನಡೆದಿದೆ.
ಕೊಣಾಜೆ ಗ್ರಾಮಚಾವಡಿ ನಿವಾಸಿಗಳಾದ ಸೇಸಪ್ಪ ಪೂಜಾರಿ(60) ಮತ್ತು ಅವರ ಪತ್ನಿ ಮೀನಾಕ್ಷಿ(55) ಮೃತರು.
ಮೀನಾಕ್ಷಿಯವರಿಗೆ ಕಳೆದ ಕೆಲವು ತಿಂಗಳ ಹಿಂದೆಯಷ್ಟೇ ಹೃದಯಾಘಾತವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಅದರ ಬಳಿಕ ಕಳೆದ ಎರಡು ದಿವಸಗಳ ಹಿಂದೆ ಮೀನಾಕ್ಷಿಯವರಿಗೆ ಎದೆ ನೋವು ಕಾಣಿಸಿಕೊಂಡು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಬುಧವಾರ ಸಂಜೆ ಮೀನಾಕ್ಷಿ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದು, ಇದನ್ನು ತಿಳಿದ ಪತಿ ಸೇಸಪ್ಪ ಅವರು ಮನನೊಂದು ಮನೆಯಲ್ಲಿ ವಿಷ ಪ್ರಾಷಣಗೈದಿದ್ದಾರೆ. ನೆರೆಹೊರೆಯ ಮನೆಯವರು ಸೇಸಪ್ಪ ಅವರ ಪ್ರಾಣಸಂಕಟದ ಹೊರಳಾಟ, ಚೀರಾಟದ ಸದ್ದು ಕೇಳಿ ಧಾವಿಸಿದ್ದು ತಕ್ಷಣವೇ ಅವರನ್ನ ಆಸ್ಪತ್ರೆಗೆ ದಾಖಲಿಸಿದರೂ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಶಾಲಾ ಬಸ್ ಚಾಲಕರಾಗಿ ಕೆಲಸ ಮಾಡುತ್ತಿದ್ದ ಸೇಸಪ್ಪ ಪೂಜಾರಿ ದಂಪತಿಗೆ ಮಕ್ಕಳಿಲ್ಲದ ಕೊರಗು ಅನೇಕ ವರ್ಷಗಳಿಂದ ಕಾಡುತ್ತಿತ್ತು. ಗುರುವಾರ ಪತಿ-ಪತ್ನಿಯ ಮೃತದೇಹಗಳನ್ನ ಒಟ್ಟಿಗೆ ಮನೆಗೆ ತಂದು ಬಳಿಕ ಎಲಿಯಾರ್ ಹಿಂದೂ ರುದ್ರಭೂಮಿಯಲ್ಲಿ ದಹನ ಮಾಡಲಾಗಿದೆ.
Mangalore Husband commits suicide after wife dies of heart attack in konaje. The deceased have been identified as senappa and Meenakshi.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 06:20 pm
Mangalore Correspondent
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm