ಬ್ರೇಕಿಂಗ್ ನ್ಯೂಸ್
29-02-24 09:08 pm Mangalore Correspondent ಕರಾವಳಿ
ಉಳ್ಳಾಲ, ಫೆ.29: ಪತ್ನಿ ಹೃದಯಾಘಾತದಿಂದ ಮೃತಪಟ್ಟ ಸುದ್ದಿ ತಿಳಿದ ಪತಿಯು ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೈದ ಘಟನೆ ಕೊಣಾಜೆ ಗ್ರಾಮಚಾವಡಿ ಎಂಬಲ್ಲಿ ನಡೆದಿದೆ.
ಕೊಣಾಜೆ ಗ್ರಾಮಚಾವಡಿ ನಿವಾಸಿಗಳಾದ ಸೇಸಪ್ಪ ಪೂಜಾರಿ(60) ಮತ್ತು ಅವರ ಪತ್ನಿ ಮೀನಾಕ್ಷಿ(55) ಮೃತರು.
ಮೀನಾಕ್ಷಿಯವರಿಗೆ ಕಳೆದ ಕೆಲವು ತಿಂಗಳ ಹಿಂದೆಯಷ್ಟೇ ಹೃದಯಾಘಾತವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಅದರ ಬಳಿಕ ಕಳೆದ ಎರಡು ದಿವಸಗಳ ಹಿಂದೆ ಮೀನಾಕ್ಷಿಯವರಿಗೆ ಎದೆ ನೋವು ಕಾಣಿಸಿಕೊಂಡು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಬುಧವಾರ ಸಂಜೆ ಮೀನಾಕ್ಷಿ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದು, ಇದನ್ನು ತಿಳಿದ ಪತಿ ಸೇಸಪ್ಪ ಅವರು ಮನನೊಂದು ಮನೆಯಲ್ಲಿ ವಿಷ ಪ್ರಾಷಣಗೈದಿದ್ದಾರೆ. ನೆರೆಹೊರೆಯ ಮನೆಯವರು ಸೇಸಪ್ಪ ಅವರ ಪ್ರಾಣಸಂಕಟದ ಹೊರಳಾಟ, ಚೀರಾಟದ ಸದ್ದು ಕೇಳಿ ಧಾವಿಸಿದ್ದು ತಕ್ಷಣವೇ ಅವರನ್ನ ಆಸ್ಪತ್ರೆಗೆ ದಾಖಲಿಸಿದರೂ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಶಾಲಾ ಬಸ್ ಚಾಲಕರಾಗಿ ಕೆಲಸ ಮಾಡುತ್ತಿದ್ದ ಸೇಸಪ್ಪ ಪೂಜಾರಿ ದಂಪತಿಗೆ ಮಕ್ಕಳಿಲ್ಲದ ಕೊರಗು ಅನೇಕ ವರ್ಷಗಳಿಂದ ಕಾಡುತ್ತಿತ್ತು. ಗುರುವಾರ ಪತಿ-ಪತ್ನಿಯ ಮೃತದೇಹಗಳನ್ನ ಒಟ್ಟಿಗೆ ಮನೆಗೆ ತಂದು ಬಳಿಕ ಎಲಿಯಾರ್ ಹಿಂದೂ ರುದ್ರಭೂಮಿಯಲ್ಲಿ ದಹನ ಮಾಡಲಾಗಿದೆ.
Mangalore Husband commits suicide after wife dies of heart attack in konaje. The deceased have been identified as senappa and Meenakshi.
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 11:01 am
HK News Desk
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
20-08-25 02:38 pm
Mangalore Correspondent
Wild Elephant, Belthangady, Eshwar Khandre: ಬ...
20-08-25 01:36 pm
ಧರ್ಮಸ್ಥಳ ಪ್ರಕರಣ ನೆಪದಲ್ಲಿ ಬಿಎಲ್ ಸಂತೋಷ್ ಅವಹೇಳನ...
19-08-25 11:07 pm
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm