ಬ್ರೇಕಿಂಗ್ ನ್ಯೂಸ್
26-11-20 12:35 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 26: ಬಹುನಿರೀಕ್ಷಿತ ಗೈಲ್ ಕಂಪನಿಯ ನೈಸರ್ಗಿಕ ಅನಿಲ ಕೊಚ್ಚಿಯಿಂದ ಪೈಪ್ ಲೈನ್ ಮೂಲಕ ಮಂಗಳೂರು ತಲುಪಿದ್ದು, ಮೊದಲ ಹಂತದಲ್ಲೇ ಎಂಸಿಎಫ್ ನಲ್ಲಿ ನೈಸರ್ಗಿಕ ಅನಿಲ ಬಳಕೆಗೆ ಯೋಜನೆ ಹಾಕಲಾಗಿದೆ.
ಈವರೆಗೆ ಎಂಸಿಎಫ್ ನಲ್ಲಿ ನ್ಯಾಫ್ತಾ ಬಳಸಿ ಯೂರಿಯಾ ಮತ್ತಿತರ ರಸಗೊಬ್ಬರ ತಯಾರಿ ನಡೆಸಲಾಗುತ್ತಿತ್ತು. ಆದರೆ, ನ್ಯಾಫ್ತಾ ಬಳಕೆಯಿಂದ ಪರಿಸರಕ್ಕೆ ಮಾರಕ ಮತ್ತು ಉತ್ಪಾದನಾ ವೆಚ್ಚ ಅಧಿಕ ಎನ್ನುವ ನೆಲೆಯಲ್ಲಿ ನ್ಯಾಫ್ತಾ ಬಳಕೆಯನ್ನು ಆರು ವರ್ಷಗಳ ಹಿಂದೆ ಕೇಂದ್ರ ಸರಕಾರ ನಿಷೇಧಿಸಿತ್ತು. ಕೇಂದ್ರ ಸರಕಾರದ ನಿಷೇಧ ಆದೇಶದಿಂದ ಒಂದು ಹಂತದಲ್ಲಿ ಎಂಸಿಎಫ್ ಉತ್ಪಾದನೆಯನ್ನೂ ಸ್ಥಗಿತಗೊಳಿಸಿತ್ತು. ಆನಂತರ ನೈಸರ್ಗಿಕ ಅನಿಲ ಲಭ್ಯವಾಗುವ ವರೆಗೆ ನ್ಯಾಫ್ತಾ ಬಳಸಲು ಸರಕಾರ ಅನುಮತಿ ನೀಡಿತ್ತು.


ಮೂರು ವರ್ಷಗಳ ಮೊದಲೇ ಗೈಲ್ ಪೈಪ್ ಲೈನ್ ಮೂಲಕ ನೈಸರ್ಗಿಕ ಅನಿಲ ಪೂರೈಕೆಯಾಗಬೇಕಿತ್ತು. ಆದರೆ, ಪೈಪ್ ಲೈನ್ ಹಾಕುವುದು ವಿಳಂಬವಾಗಿದ್ದರಿಂದ ಅದು ಸಾಧ್ಯವಾಗಿರಲಿಲ್ಲ. ಇದೀಗ ಅನಿಲ ಪೂರೈಕೆ ಆರಂಭಗೊಂಡಿದ್ದು ಆರಂಭಿಕ ಹಂತದ ಪ್ರಯೋಗ ನಡೆಸಲಾಗುತ್ತಿದೆ. ಅನಿಲ ಆಧಾರಿತ ಯಂತ್ರಗಳನ್ನು ಅಳವಡಿಸಿ ಕಾರ್ಯ ಚಟುವಟಿಕೆಯನ್ನು ಬಗ್ಗೆ ಪ್ರಾಯೋಗಿಕವಾಗಿ ನಡೆಸಲಾಗುತ್ತಿದೆ.
ಅಲ್ಲದೆ, ನೈಸರ್ಗಿಕ ಅನಿಲ ಸ್ಟೋರೇಜ್ ವ್ಯವಸ್ಥೆಯನ್ನೂ ಮಾಡಲಾಗುತ್ತಿದೆ. ಮುಂದಿನ ತಿಂಗಳಿಂದ ಅಧಿಕೃತವಾಗಿ ನೈಸರ್ಗಿಕ ಅನಿಲದಿಂದ ರಸಗೊಬ್ಬರ ತಯಾರಿ ಆರಂಭಗೊಳ್ಳಲಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲಿ ಎಂಆರ್ ಪಿಎಲ್ ಗೂ ಗೈಲ್ ಕಂಪನಿಯಿಂದ ನೈಸರ್ಗಿಕ ಅನಿಲ ಪೂರೈಸಲಿದೆ. ಸದ್ಯ ಎಂಆರ್ ಪಿಎಲ್ ನಲ್ಲಿ ಪ್ರತಿದಿನ 2500 ಟನ್ ಎಲ್ ಪಿಜಿ ಉತ್ಪಾದನೆಯಾಗುತ್ತಿದ್ದು, ಅದನ್ನು ರಾಜ್ಯದ ವಿವಿಧೆಡೆಗೆ ಪೂರೈಸಲಾಗುತ್ತಿದೆ. ಇಲ್ಲಿ ಪೆಟ್ರೋಲಿಯಂ ಕಚ್ಚಾ ತೈಲದಿಂದ ಎಲ್ ಪಿಜಿ ಉತ್ಪಾದನೆ ಮಾಡಲಾಗುತ್ತಿತ್ತು. ಇನ್ನು ಗೈಲ್ ಪೂರೈಸುವ ನೈಸರ್ಗಿಕ ಅನಿಲದಿಂದಲೇ ಎಲ್ ಪಿಜಿ ಉತ್ಪಾದನೆಯಾಗಲಿದೆ.
The much-delayed Kochi-Mangalore natural gas pipeline project is finally ready for commissioning any day from now as the national energy major Gail India has completed the final 540-metre treacherous stretch across the Chandragiri river in northern Kerala, according to a senior company official.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am