ಬ್ರೇಕಿಂಗ್ ನ್ಯೂಸ್
26-11-20 02:52 pm Mangalore Correspondent ಕರಾವಳಿ
ಮಂಗಳೂರು, ನ.26 : ಶಕ್ತಿನಗರದ ನಾಲ್ಯ ಪದವಿನಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಸ್ಥಾಪನೆಗೆ ಸರಕಾರದ ಆದೇಶ ಬಂದಿದೆ. ಆ ಮೂಲಕ ಈ ಭಾಗದ ಜನರ ಬಹುಕಾಲದ ಕನಸು ಈಡೇರಿಸಿದಂತಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.
ಶಾಸಕನಾಗಿ ಆಯ್ಕೆಯಾದ ಪ್ರಾರಂಭದ ದಿನಗಳಲ್ಲಿ ನಾಲ್ಯಪದವಿನಲ್ಲಿ ಪದವಿಪೂರ್ವ ಕಾಲೇಜು ಸ್ಥಾಪನೆಯ ಕುರಿತು ಸಾರ್ವಜನಿಕರ ಜೊತೆ ಚರ್ಚಿಸಿ ಸರಕಾರಕ್ಕೆ ಮನವಿ ಸಲ್ಲಿಸಿದ್ದೆ. ಆ ಬಳಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಲ್ಲಿ ಈ ವಿಚಾರವಾಗಿ ಚರ್ಚಿಸಿ ಕಾಲೇಜು ಸ್ಥಾಪನೆಗೆ ಕೋರಿದ್ದೆ. ಇಂದು ಸರಕಾರವು ಆದೇಶ ಸಂಖ್ಯೆ ಇಪಿ 216 ಎಸ್ಎಚ್ಎಚ್ 2020 ಪ್ರಕಾರ ಕಾಲೇಜು ಸ್ಥಾಪನೆಗೆ ಅಧಿಕೃತ ಆದೇಶ ಹೊರಡಿಸಿದ್ದು, ಇದಕ್ಕಾಗಿ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್, ಶಿಕ್ಷಣ ಇಲಾಖೆಯ ಪ್ರಮುಖ ಅಧಿಕಾರಿಗಳಿಗೂ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
ಶಕ್ತಿನಗರ ಪರಿಸರದ ವಿಧ್ಯಾರ್ಥಿಗಳು ತಮ್ಮ ಕಾಲೇಜು ಶಿಕ್ಷಣಕ್ಕಾಗಿ ನಗರಕ್ಕೆ ಬರಬೇಕಿತ್ತು. ಈ ಪರಿಸರದ ಜನರ ಬೇಡಿಕೆಯನ್ನು ಈಡೇರಿಸುವ ಪ್ರಯತ್ನಕ್ಕೆ ಇಂದು ಫಲ ದೊರೆತಿದೆ. ಒಬ್ಬ ಶಾಸಕನಾಗಿ ಜನರಿಗೆ ನೀಡಿದ್ದ ಭರವಸೆಯನ್ನು ಈಡೇರಿಸಿದ ನೆಮ್ಮದಿ ಇದೆ. ಇನ್ನು ಮುಂದಿನ ದಿನಗಳಲ್ಲಿ ಈ ಭಾಗದ ವಿಧ್ಯಾರ್ಥಿಗಳು ಶಕ್ತಿನಗರದಲ್ಲೇ ತಮ್ಮ ಪದವಿ ವಿಧ್ಯಾಭ್ಯಾಸ ಮುಂದುವರಿಸಬಹುದು. ಸದ್ಯ ಈಗ ನಾಲ್ಯಪದವಿನಲ್ಲಿರುವ ಶಾಲಾ ಕಟ್ಟಡದಲ್ಲೇ ಕಾಲೇಜು ತರಗತಿ ಪ್ರಾರಂಭಿಸಲಾಗುವುದು. ಇನ್ನು ಮುಂದಿನ ದಿನಗಳಲ್ಲಿ ಕಾಲೇಜಿಗೆ ಹೊಸತಾದ ಕಟ್ಟಡ ನಿರ್ಮಾಣಕ್ಕಾಗಿ ಯೋಜನೆ ರೂಪಿಸಲಾಗುವುದು ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.
Govt has ordered for Construction of Degree college in Shaktinagar, Mangalore stated MLA Vedavyas Kamath.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am