ಬ್ರೇಕಿಂಗ್ ನ್ಯೂಸ್
02-03-24 08:37 pm Mangalore Correspondent ಕರಾವಳಿ
ಮಂಗಳೂರು, ಮಾ.2: ಪ್ರಧಾನಿ ನರೇಂದ್ರ ಮೋದಿ ಅವರ ಪರವಾಗಿರುವ ಅರುಣ್ ಪುತ್ತಿಲ ಮತ್ತು ಇತರರು ಪಕ್ಷಕ್ಕೆ ಸೇರಲು ಮುಕ್ತ ಆಹ್ವಾನ ನೀಡುತ್ತಿದ್ದೇವೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮತ್ತು ರಾಜ್ಯಾಧ್ಯಕ್ಷರ ಸೂಚನೆಯ ಮೇರೆಗೆ ತತ್ವ ಸಿದ್ಧಾಂತ ಒಪ್ಪುವ ಪ್ರತಿಯೊಬ್ಬರನ್ನೂ ಬಿಜೆಪಿಗೆ ಕರೆತರಲು ಉತ್ಸುಕರಾಗಿದ್ದೇವೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ.
ಚುನಾವಣಾ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಸತೀಶ್ ಕುಂಪಲ, ಜಾಲತಾಣದಲ್ಲಿ ಕೆಲವು ಕಡೆ ಅರುಣ್ ಪುತ್ತಿಲ ಸೇರ್ಪಡೆಗೆ ಬಿಜೆಪಿಯಲ್ಲಿಯೇ ವಿರೋಧ ಎಂದು ತಪ್ಪು ಮಾಹಿತಿ ನೀಡಲಾಗುತ್ತಿದೆ. ಪುತ್ತೂರಿನಲ್ಲಿಯೂ ಪಕ್ಷದ ಪ್ರಮುಖರು ಪಕ್ಷ ಸೇರ್ಪಡೆ ಬಗ್ಗೆ ಮಾತುಕತೆ ನಡೆಸಿದ್ದಾರೆ. ರಾಜ್ಯಾಧ್ಯಕ್ಷರು ಮತ್ತು ಸಂಘಟನಾ ಕಾರ್ಯದರ್ಶಿ ಹಲವು ಬಾರಿ ಮಾತುಕತೆ ನಡೆಸಿದ್ದು ಅವರಿಗೆ ಪಕ್ಷ ಸೇರಲು ಮುಕ್ತ ಆಹ್ವಾನ ನೀಡಿದ್ದಾರೆ. ಹಾಗಿದ್ದ ಮೇಲೂ ಪಕ್ಷ ಸೇರದೇ ಇರುವುದಕ್ಕೆ ಅವರೇ ಕಾರಣ ಕೊಡಬೇಕು ಎಂದರು.
ಹುದ್ದೆಯ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ, ಮಾತುಕತೆ ಸಂದರ್ಭದಲ್ಲಿ ಜಿಲ್ಲಾ ಪದಾಧಿಕಾರಿ ಅಥವಾ ಮಂಡಲಾಧ್ಯಕ್ಷ ಹುದ್ದೆಯ ಬಗ್ಗೆ ಅಪೇಕ್ಷೆ ಇಟ್ಟಿದ್ದಾರೆ. ರಾಷ್ಟ್ರೀಯ ಪಕ್ಷ ಆಗಿರುವುದರಿಂದ ಷರತ್ತು ಮುಂದಿಟ್ಟು ಪಕ್ಷಕ್ಕೆ ಬರುತ್ತೇನೆ ಎನ್ನುವುದು ಸರಿಯಲ್ಲ. ಪಕ್ಷ ಸೇರಿದ ಬಳಿಕ ಅವರಿಗೆ ತಕ್ಕುದಾದ ಸ್ಥಾನವನ್ನು ನೀಡಲಾಗುತ್ತದೆ ಎಂದು ಹೇಳಿದರು.
ಅರುಣ್ ಪುತ್ತಿಲ ಒಬ್ಬ ರಾಷ್ಟ್ರೀಯವಾದಿ. ಮೋದಿ ಪ್ರಧಾನಿಯಾಗಬೇಕೆಂದು ಅವರಲ್ಲೂ ಇದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಸೂಚನೆಯಂತೆ ಜಿಲ್ಲೆಯಲ್ಲಿ ಮುನಿಸು ಇರುವವರನ್ನು ಮನವೊಲಿಸುವ ಕೆಲಸ ಮಾಡುತ್ತಿದ್ದೇವೆ. ಅರುಣ್ ಪುತ್ತಿಲ ಮತ್ತು ಅವರ ಬೆಂಬಲಿಗರ ಜೊತೆಗೆ ಮಾತುಕತೆ ನಡೆಸಿದ್ದೇವೆ. ಪಕ್ಷ ಸೇರುವಾಗ ನೇರವಾಗಿ ಬಂದು ಸೇರಿಕೊಳ್ಳಲಿ. ಹುದ್ದೆಯನ್ನು ಆಬಳಿಕ ಪಕ್ಷ ತೀರ್ಮಾನಿಸುತ್ತದೆ ಎಂಬುದನ್ನು ಹೇಳಬಯಸುತ್ತೇನೆ ಎಂದರು.
The BJP said here on Saturday that the door is open for Sangh Parivar activist Arun Kumar Puthila to join the party without imposing any condition. As a rebel (Independent) candidate in the last Assembly elections from Puttur, Mr. Puthila came second, relegating the BJP to third.
21-06-25 02:48 pm
Bengaluru Staff
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
21-06-25 08:50 pm
HK News Desk
Couple Caught at Jaipur Hotel, Video: ಹೋಟೆಲ್...
20-06-25 10:19 pm
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
21-06-25 11:04 pm
Mangaluru Correspondent
Krishnaveni Mines Geology, Mangalore;18 ದಿನ ಜ...
21-06-25 03:56 pm
Fake NEET Marksheet, Udupi Topper; ನಕಲಿ ನೀಟ್...
21-06-25 01:59 pm
Sakleshpur, Mangalore Bangalore Train; ಸಕಲೇಶಪ...
21-06-25 12:03 pm
Kudupu Murder, Sajith Shetty Post, Sudheer Ku...
20-06-25 11:04 pm
21-06-25 08:58 pm
Mangaluru Correspondent
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm