ಬ್ರೇಕಿಂಗ್ ನ್ಯೂಸ್
03-03-24 01:46 pm Mangalore Correspondent ಕರಾವಳಿ
ಮಂಗಳೂರು, ಮಾ.3 ಕಾಂಗ್ರೆಸ್ ಸರ್ಕಾರ ಭಯೋತ್ಪಾದನೆ ಬಗ್ಗೆ ಮೃದು ಧೋರಣೆ ತೋರುತ್ತಿರುವುದರಿಂದ ಆಂತರಿಕ ಭದ್ರತೆ ಸಡಿಲವಾಗುತ್ತಿದೆ. ಇದರ ಪರಿಣಾಮವಾಗಿ ಬಾಂಬ್ ಸ್ಫೋಟದಂತಹ ಘಟನೆಗಳಾಗುತ್ತಿವೆ. ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಕೂಗಿದ್ದನ್ನೂ ಸಮರ್ಥನೆ ಮಾಡುತ್ತಿರುವುದರಿಂದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ವಿಧ್ವಂಸಕ ಶಕ್ತಿ, ಗೂಂಡಾಶಕ್ತಿಗಳು ತಲೆ ಎತ್ತುತ್ತಿರುವುದನ್ನು ನೋಡುತ್ತಿದ್ದೇವೆ ಎಂದು ಓಬಿಸಿ ಮೋರ್ಚಾ ರಾಜ್ಯಾಧ್ಯಕ್ಷ ರಘು ಕೌಟಿಲ್ಯ ಟೀಕಿಸಿದ್ದಾರೆ.
ಬಿಜೆಪಿ ಚುನಾವಣೆ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಇಡೀ ದೇಶ ಭದ್ರತೆ ವಿಚಾರದಲ್ಲಿ ಗಟ್ಟಿಗೊಳ್ಳುತ್ತಿರುವ ಹೊತ್ತಲ್ಲಿ ಕರ್ನಾಟಕದಲ್ಲಿ ಮಾತ್ರ ಬಾಂಬ್ ಸ್ಫೋಟದಂತಹ ವಿಧ್ವಂಸಕ ಕೃತ್ಯ ಆಗುತ್ತಿರುವುದು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕರ್ನಾಟಕದ ಭದ್ರತೆ ಸಡಿಲಗೊಳ್ಳುತ್ತಿರುವುದಕ್ಕೆ ಸಾಕ್ಷಿ. ಬೆಂಗಳೂರು ಮಹಾನಗರದಲ್ಲಿ ಹತ್ತು ವರ್ಷಗಳ ಬಳಿಕ ಬಾಂಬ್ ಸ್ಫೋಟ ಆಗಿರುವುದು, ಇದರ ಹಿಂದೆ ನಿಷೇಧಿತ ಐಸಿಸ್ ಸಂಘಟನೆ ಕೈವಾಡದ ಶಂಕೆ ವ್ಯಕ್ತವಾಗಿದೆ. ಆಮೂಲಕ ಕಾಂಗ್ರೆಸ್ ಸರ್ಕಾರ ಬಂದ ಬೆನ್ನಲ್ಲೇ ದೇಶ ವಿರೋಧಿ ಶಕ್ತಿಗಳು ಗಟ್ಟಿಯಾಗಿರುವುದನ್ನು ಸೂಚಿಸಿದೆ. ಇದನ್ನು ಜನತೆ ಗಮನಿಸುತ್ತಿದ್ದು ಅಧಿಕಾರವನ್ನು ಯಾರ ಕೈಯಲ್ಲಿ ನೀಡಿದರೆ ಉತ್ತಮ ಎಂಬ ಬಗ್ಗೆ ಚುನಾವಣೆಯಲ್ಲಿ ಉತ್ತರ ನೀಡಲಿದ್ದಾರೆ ಎಂದು ಹೇಳಿದರು.
ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ನಾಯಕರು ಪಾಕಿಸ್ತಾನವನ್ನು ನೆರೆ ರಾಷ್ಟ್ರ ಅಂತ ಹೇಳುತ್ತಿದ್ದಾರೆ. ದೇಶದ ಸಂಸತ್ತಿಗೆ ದಾಳಿ ಮಾಡಿದವರು, ಪುಲ್ವಾಮಾ ದಾಳಿಯ ಮೂಲಕ ನಮ್ಮ ಯೋಧರನ್ನು ಕೊಂದವರು ನೆರೆ ರಾಷ್ಟ್ರದವರೇ. ನಾವು ಅವರನ್ನು ನೆರೆ ರಾಷ್ಟ್ರ ಎಂದು ಒಪ್ಪಿಕೊಳ್ಳಲ್ಲ. ಇಡೀ ದೇಶದಲ್ಲಿ ಕಾಂಗ್ರೆಸ್ ನೆಲೆ ಕಳಕೊಂಡಿದೆ. ದೇಶ ವಿರೋಧಿ ಕೃತ್ಯಗಳಿಗೆ ಆಸ್ಪದ ನೀಡುತ್ತಿರುವುದರಿಂದ ಕರ್ನಾಟಕದಲ್ಲಿ ಕಾಂಗ್ರೆಸ್ ತೊಲಗಿಸಿ ಎಂದು ಕರೆ ಕೊಡಲು ರಾಜ್ಯ ಬಿಜೆಪಿ ಮುಂದಾಗಿದೆ. ಕರ್ನಾಟಕದಲ್ಲಿ ಜನರು ಕಾಂಗ್ರೆಸಿಗೆ ಇದೇ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಿದ್ದಾರೆ.
ಬಿಜೆಪಿ ಕೇಂದ್ರೀಯ ಮಂಡಳಿ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಈ ಪೈಕಿ 57 ಮಂದಿ ಹಿಂದುಳಿದ ವರ್ಗಕ್ಕೆ ಅವಕಾಶ ಕೊಟ್ಟಿದ್ದಾರೆ, ಇದು ಬಿಜೆಪಿ ಹಿಂದುಳಿದ ವರ್ಗಗಳ ಬಗ್ಗೆ ಬದ್ಧತೆ ಹೊಂದಿರುವುದನ್ನು ತೋರಿಸುತ್ತದೆ ಎಂದು ಹೇಳಿದ ಅವರು, ಮಂಗಳೂರು ಅವಿಭಜಿತ ದ.ಕ. ಜಿಲ್ಲೆ ಸಂಘಟನಾತ್ಮಕವಾಗಿ ಪ್ರಬಲ ಕ್ಷೇತ್ರ. ಈ ಭಾಗದಲ್ಲಿ ಪಕ್ಷ ಅತಿ ಹೆಚ್ಚು ಅಂತರದಿಂದ ಗೆಲ್ಲುವ ಮೂಲಕ ಇಡೀ ರಾಜ್ಯಕ್ಕೆ ಸಂದೇಶ ನೀಡಲಿದೆ ಎಂದರು. ಸುದ್ದಿಗೋಷ್ಟಿಯಲ್ಲಿ ನಾರಾಯಣ ರೆಂಜ, ವಿಠಲ್ ಪೂಜಾರಿ, ಕಿಶೋರ್ ಪುತ್ತೂರು, ಗಿರೀಶ್ ಕುಮಾರ್ ಇದ್ದರು.
Internal security is being eroded as the Congress government is soft on terrorism. As a result, incidents like bomb blasts are taking place.Internal security is being eroded as the Congress government is soft on terrorism. As a result, incidents like bomb blasts are taking place.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm