ಬ್ರೇಕಿಂಗ್ ನ್ಯೂಸ್
03-03-24 10:49 pm Mangalore Correspondent ಕರಾವಳಿ
ಮಂಗಳೂರು, ಮಾ.3: ಹಾಲಿ ಕೇಂದ್ರ ಸಚಿವೆ, ಎರಡು ಬಾರಿಯ ಸಂಸದೆ ಮೀನಾಕ್ಷಿ ಲೇಖಿ ದೆಹಲಿ ಸೆಂಟ್ರಲ್ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಗಿಟ್ಟಿಸಿಕೊಳ್ಳಲು ವಿಫಲರಾಗಿದ್ದಾರೆ. ಸೀಟು ಸಿಗದ ಸಿಟ್ಟಿನಲ್ಲಿ ಮಂಗಳೂರಿನಲ್ಲಿ ಆಯೋಜಿಸಿದ್ದ ಬೂತ್ ಮಟ್ಟದ ಕಾರ್ಯಕರ್ತರ ಜಿಲ್ಲಾ ಸಮಾವೇಶದಿಂದ ದೂರವುಳಿದಿದ್ದು, ಕಾರ್ಯಕ್ರಮವನ್ನು ಕೊನೆಕ್ಷಣದಲ್ಲಿ ರದ್ದು ಮಾಡಲಾಗಿದೆ.
ಇತ್ತೀಚೆಗೆ ಮೀನಾಕ್ಷಿ ಲೇಖಿ ಪಾಲ್ಗೊಳ್ಳುವ ಕಾರ್ಯಕ್ರಮವನ್ನು ಸಂಘನಿಕೇತನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಅದು ರದ್ದುಗೊಂಡಿದ್ದರಿಂದ ಮತ್ತೆ ಮೀನಾಕ್ಷಿ ಲೇಖಿ ಕಾರ್ಯಕ್ರಮವನ್ನು ಮಾ.4ರಂದು ಸಂಘ ನಿಕೇತನದಲ್ಲಿಯೇ ಆಯೋಜಿಸಲಾಗಿತ್ತು. ತರಾತುರಿಯಲ್ಲಿ ಶನಿವಾರ ಅಂತಿಮಗೊಳಿಸಿ ಅದಕ್ಕಾಗಿ ಸಿದ್ಧತೆಯನ್ನೂ ಮಾಡಲಾಗಿತ್ತು. ಆದರೆ, ಮೀನಾಕ್ಷಿ ಲೇಖಿ ಬರುವುದಿಲ್ಲ ಎಂಬ ವಿಚಾರ ತಿಳಿದ ಜಿಲ್ಲಾ ಬಿಜೆಪಿ ಕೊನೆಕ್ಷಣದಲ್ಲಿ ಭಾನುವಾರ ಸಂಜೆ ಕಾರ್ಯಕ್ರಮವನ್ನು ಮತ್ತೊಮ್ಮೆ ಮುಂದೂಡಿಕೆ ಮಾಡಿರುವುದಾಗಿ ಪ್ರಕಟಿಸಿದೆ. ಶನಿವಾರ ಪ್ರಕಟವಾದ 195 ಅಭ್ಯರ್ಥಿಗಳಲ್ಲಿ ದೆಹಲಿಯ ನಾಲ್ವರು ಸಂಸದರಿಗೆ ಕೊಕ್ ನೀಡಲಾಗಿದೆ. ಅದರಲ್ಲಿ ಹಾಲಿ ವಿದೇಶಾಂಗ ಇಲಾಖೆಯ ಸಹಾಯಕ ಸಚಿವೆಯಾಗಿರುವ ಮೀನಾಕ್ಷಿ ಲೇಖಿ ಕೂಡ ಒಬ್ಬರಾಗಿದ್ದಾರೆ.
ಸುಪ್ರೀಂ ಕೋರ್ಟ್ ವಕೀಲರೂ ಆಗಿರುವ ಮೀನಾಕ್ಷಿ ಲೇಖಿ 2014 ಮತ್ತು 2019ರಲ್ಲಿ ದೆಹಲಿ ಕ್ಷೇತ್ರದಿಂದ ಗೆಲುವು ಕಂಡಿದ್ದಾರೆ. ಈ ಬಾರಿ ವಿರೋಧಿ ಅಲೆ ಎದುರಿಸುತ್ತಿರುವ ಕಾರಣದಿಂದಾಗಿ ಲೇಖಿ ಅವರನ್ನು ಬದಲಿಸಲಾಗಿದ್ದು, ಆ ಸ್ಥಾನವನ್ನು ಮಾಜಿ ವಿದೇಶಾಂಗ ಸಚಿವೆ ದಿವಂಗತ ಸುಷ್ಮಾ ಸ್ವರಾಜ್ ಅವರ ಮಗಳು 39 ವರ್ಷದ ಬಾನ್ಸುರಿ ಸ್ವರಾಜ್ ಅವರಿಗೆ ನೀಡಲಾಗಿದೆ. ಇದರಿಂದ ಸಿಟ್ಟಿನಲ್ಲಿರುವ ಮೀನಾಕ್ಷಿ ಲೇಖಿ ಮಂಗಳೂರು, ಉಡುಪಿ ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನು ರದ್ದು ಪಡಿಸಿದ್ದಾರೆ.
ಮಂಗಳೂರಿನಲ್ಲಿ ಬೂತ್ ಮಟ್ಟದ ಕಾರ್ಯಕರ್ತರ ಬೃಹತ್ ಸಮಾವೇಶ ಆಗಿದ್ದರಿಂದ ದೊಡ್ಡ ಮಟ್ಟದಲ್ಲಿ ಆಯೋಜಿಸಲಾಗಿತ್ತು. ಉಡುಪಿಯಲ್ಲೂ ಚಿಂತನ ಗಂಗ ಹೆಸರಿನಲ್ಲಿ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮಾಜಿ ಆರೋಗ್ಯ ಸಚಿವ ಹರ್ಷವರ್ಧನ್ ಸಿಂಗ್ ಅವರಿಗೂ ದೆಹಲಿಯಲ್ಲಿ ಟಿಕೆಟ್ ಮಿಸ್ ಆಗಿದೆ. ಟಿಕೆಟ್ ತಪ್ಪಿದ ಸಂಸದರನ್ನು ದೆಹಲಿಯಲ್ಲಿ ಮುಂದಿನ ವರ್ಷ ನಡೆಯುವ ವಿಧಾನಸಭೆ ಚುನಾವಣೆಗೆ ಸಿದ್ಧತೆ ನಡೆಸಲು ಕಳಿಸುವ ಸಾಧ್ಯತೆಯಿದೆ.
Union Minister and two-time MP Meenakshi Lekhi has failed to get a BJP ticket from Delhi Central constituency. Angry over not getting a seat, he stayed away from the district convention of booth-level workers organised in Mangaluru and the programme was cancelled at the last minute.
10-11-25 02:58 pm
HK News Desk
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
10-11-25 03:04 pm
HK News Desk
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm