ಬ್ರೇಕಿಂಗ್ ನ್ಯೂಸ್
04-03-24 06:25 pm Mangalore Correspondent ಕರಾವಳಿ
ಮಂಗಳೂರು, ಮಾ.4: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಭಯೋತ್ಪಾದಕರಿಗೆ, ದೇಶದ್ರೋಹಿಗಳಿಗೆ ತಮ್ಮ ಪರ ಸರ್ಕಾರ ಇದೆಯೆಂಬ ವಿಶ್ವಾಸ ಬಂದಿದೆ. ಪಾಕ್ ಪರ ಘೋಷಣೆ ಕೂಗಿದ ಬಗ್ಗೆ ಎಫ್ಎಸ್ಎಲ್ ವರದಿ ಕೊಟ್ಟರೂ ರಾಜ್ಯ ಸರಕಾರ ನಿರ್ಲಕ್ಷ್ಯ ಮಾಡುತ್ತಿದೆ. ಬಾಂಬ್ ಸ್ಫೋಟ ಕೃತ್ಯದ ಆರೋಪಿ ರಾಜಾರೋಷ ಅಡ್ಡಾಡುವಂತಹ ಸ್ಥಿತಿ ಬಂದಿದೆ. ದೇಶದ ಹಿತ ಬದಿಗೊತ್ತಿ ದೇಶದ್ರೋಹಿಗಳ ಬಗ್ಗೆ ಮೃದು ಧೋರಣೆ ತಾಳಿದರೆ ಘೋರ ಪರಿಣಾಮ ಎದುರಾಗಬಹುದು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ವಿಧಾನಸೌಧ ಅಂದರೆ ಇಡೀ ರಾಜ್ಯದ ಜನರ ಪಾಲಿಗೆ ಆತ್ಮ ಇದ್ದಂತೆ. ಅಂತಹ ಜಾಗದಲ್ಲೇ ಪಾಕ್ ಪರ ಘೋಷಣೆ ಕೂಗಿದರೂ ಅದು ನಡೆದೇ ಇಲ್ಲವೆಂದು ಸಮರ್ಥನೆ ಮಾಡುವುದನ್ನು ರಾಜ್ಯ ಸರಕಾರ ದೇಶ ವಿರೋಧಿ ಕೃತ್ಯದ ಪರ ಇರುವಂತೆ ಕಾಣುತ್ತಿದೆ. ಸಿದ್ದರಾಮಯ್ಯ ನಾವು ಸಮೃದ್ಧ ಕರ್ನಾಟಕ ನಿರ್ಮಾಣ ಮಾಡುತ್ತೇವೆ ಎಂದು ಹೇಳಿರುವುದರಲ್ಲಿ ಹೊಟೇಲ್ ಒಳಗಡೆ ಬಾಂಬ್ ಇಡುವುದು, ವಿಧಾನಸೌಧದಲ್ಲೇ ಪಾಕ್ ಪರ ಘೋಷಣೆ ಕೂಗುವುದು ಬರುತ್ತಾ ಎಂದು ಕೇಳಬೇಕಾಗಿದೆ ಎಂದು ಹೇಳಿದರು.
ಮೊನ್ನೆ ಸರ್ಕಾರದ ದುಡ್ಡಿನಲ್ಲಿ ಸಂವಿಧಾನ ಉಳಿಸಿ ಕಾರ್ಯಕ್ರಮ ಏರ್ಪಡಿಸಿ, ಎಥಿನ್ ಕೌಲ್ ಎಂಬ ದೇಶ ವಿರೋಧಿ ಭಾವನೆ ಬಿತ್ತುವ ಲೇಖಕಿಯನ್ನು ಅತಿಥಿಯಾಗಿ ಕರೆದಿದ್ದು ಇವರ ನಡೆಯನ್ನು ಸೂಚಿಸುತ್ತದೆ. ಸಂವಿಧಾನ ರಕ್ಷಣೆ, ಅಂಬೇಡ್ಕರ್ ಹೆಸರಿನಲ್ಲಿ ಇವರು ಪ್ರಚಾರ ಪಡೆಯುತ್ತಿದ್ದಾರೆ. ಆದರೆ ಕಾಶ್ಮೀರದಲ್ಲಿ 370 ಕಾಯ್ದೆ ರದ್ದು ಮಾಡಿ ಅಲ್ಲಿನ ಜನರಿಗೆ ಮೊದಲ ಬಾರಿಗೆ ಮೀಸಲಾತಿ ಭಾಗ್ಯ ಕಲ್ಪಿಸಿದ್ದು ಪ್ರಧಾನಿ ಮೋದಿ. ಕಾಂಗ್ರೆಸಿನವರು 370 ಕಾಯ್ದೆ ರದ್ದು ಮಾಡಿದ್ದನ್ನೇ ವಿರೋಧಿಸಿದ್ದಾರೆ. ಕಾಶ್ಮೀರದ ಅಭಿವೃದ್ಧಿಗೆ ಮೋದಿ 32 ಸಾವಿರ ಕೋಟಿ ಅನುದಾನ ಕೊಟ್ಟಿದ್ದಾರೆ. ಅಲ್ಲೀಗ ಭಯೋತ್ಪಾದನೆ ಮಟ್ಟ ಹಾಕಿದ್ದಲ್ಲದೆ, ಶಾಂತಿ ಸ್ಥಾಪನೆ ಮಾಡುವ ಕೆಲಸ ಮಾಡಿದ್ದಾರೆ. ರಾಜ್ಯದಲ್ಲಿ ಶಾಂತಿ ಸ್ಥಾಪನೆ ಮಾಡಲು ಸಾಧ್ಯವಾಗದಿದ್ದರೆ, ಅರಾಜಕ ಸ್ಥಿತಿ ತಂದೊಡ್ಡುವುದಾದರೆ ಸಿದ್ದರಾಮಯ್ಯ ಕೂಡಲೇ ರಾಜಿನಾಮೆ ಕೊಟ್ಟು ತೊಲಗಬೇಕು ಎಂದು ಆಗ್ರಹಿಸಿದರು.
ಎಫ್ಎಸ್ಎಲ್ ವರದಿ ಖಾಸಗಿ ಸಂಸ್ಥೆಯದ್ದಲ್ಲವೇ, ಸರಕಾರದ್ದು ಬಂದಿಲ್ಲ ಎನ್ನುತ್ತಿದ್ದಾರಲ್ಲಾ ಎಂದು ಕೇಳಿದ ಪ್ರಶ್ನೆಗೆ, ಖಾಸಗಿ ಸಂಸ್ಥೆಯ ವರದಿಗಳನ್ನೂ ನಾವು ಕೆಲವು ಬಾರಿ ಒಪ್ಪಿಕೊಳ್ಳುವ ಸ್ಥಿತಿ ಬಂದಿದೆ. ಇದನ್ನು ನಂಬೋದಿಲ್ಲ ಅಂದರೆ, ಸರಕಾರದ ವರದಿ ತರಿಸಿಕೊಡಲಿ. ಯಾಕೆ ವಿಳಂಬ ಮಾಡುತ್ತಿದ್ದಾರೆ. ಒಂದು ವಾರ ಕಳೆದರೂ ಎಫ್ಎಸ್ಎಲ್ ರಿಪೋರ್ಟ್ ಬಂದಿಲ್ಲ ಎಂದರೆ ಅದನ್ನು ನಂಬುವ ಸ್ಥಿತಿಯಲ್ಲಿ ರಾಜ್ಯದ ಜನರಿಲ್ಲ ಎಂದರು.
ಉಡುಪಿಯಲ್ಲಿ ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸಿಗೆ ಹೋಗುತ್ತಿದ್ದಾರೆಯೇ ಎಂಬ ಪ್ರಶ್ನೆಗೆ, ಹೆಗ್ಡೆಯವರು ಗೌರವಾನ್ವಿತ ವ್ಯಕ್ತಿ. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷತೆ ಎನ್ನುವ ಹುದ್ದೆ ಪಕ್ಷಾತೀತ. ಮೊನ್ನೆಯ ವರೆಗೂ ಅದರ ಅಧ್ಯಕ್ಷರಾಗಿದ್ದರು. ಈಗ ಎಲ್ಲಿದ್ದಾರೆ ಎನ್ನುವುದು ಗೊತ್ತಿಲ್ಲ. ಕಾಂಗ್ರೆಸ್ ಸೇರುವುದೂ ಗೊತ್ತಿಲ್ಲ ಎಂದರು. ಸುದ್ದಿಗೋಷ್ಟಿಯಲ್ಲಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷ ಮಂಜುಳಾ ರಾವ್, ವಸಂತ ಪೂಜಾರಿ, ಕದ್ರಿ ಮನೋಹರ್ ಇದ್ದರು.
Terrorist have got more confidence over Congress government to create terror activities in karnataka says Kota Srinivas Poojari in Mangalore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm