ಬ್ರೇಕಿಂಗ್ ನ್ಯೂಸ್
04-03-24 10:14 pm Mangalore Correspondent ಕರಾವಳಿ
ಉಳ್ಳಾಲ, ಮಾ.4: ಗಟ್ಟಿ ಸಮುದಾಯದವರು ಸೋಮೇಶ್ವರ ಸೋಮನಾಥ ದೇವಸ್ಥಾನವನ್ನ ನಮ್ಮದೆಂದು ಹೇಳುತ್ತಲೇ ಹೋರಾಟ ನಡೆಸಿದ್ದಲ್ಲದೆ ನಾವು ಲಾಸು, ಲಾಸು ಅಂತ ಅಳುತ್ತಿದ್ದರು. ಅದಕ್ಕಾಗಿಯೇ ನಾನು ಸೋಮೇಶ್ವರದ ಮಂಡಲ ಪ್ರಧಾನನಾಗಿದ್ದಾಗ ಸೋಮನಾಥ ದೇವಸ್ಥಾನವನ್ನ ಮುಜರಾಯಿ ಇಲಾಖೆಗೆ ಸೇರಿಸಿದ್ದೆ. ನಾನು ಅಂದು ತೆಗೆದ ನಿರ್ಧಾರ ಸರಿಯಾಗಿದೆ ಎಂದು ಮಾಧ್ಯಮದ ಮುಂದೆ ಹೇಳಿಕೆ ನೀಡಿರುವ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್ ವಿರುದ್ಧ ಗಟ್ಟಿ ಸಮಾಜ ಬಾಂಧವರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಕೊಂಡಾಣ ಕ್ಷೇತ್ರದ ಭಂಡಾರಮನೆ ಧ್ವಂಸ ಪ್ರಕರಣದ ವಿಚಾರದಲ್ಲಿ ಭಾನುವಾರ ತೊಕ್ಕೊಟ್ಟಿನ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿದ್ದ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್ ಅವರು ಗಟ್ಟಿ ಸಮಾಜ ಬಾಂಧವರಿಗೆ ಅವಹೇಳನ ಮಾಡಿದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಅಕ್ರೋಶ ವ್ಯಕ್ತವಾಗಿದೆ.
ಮಾಧ್ಯಮದ ಮುಂದೆ ಮಾತನಾಡಿದ್ದ ಸದಾಶಿವ ಅವರು ನಾನು ಸೋಮೇಶ್ವರದ ಮಂಡಲ ಪ್ರಧಾನನಾಗಿದ್ದಾಗ ಸೋಮನಾಥ ದೇವಸ್ಥಾನವನ್ನ ಗಟ್ಟಿ ಸಮುದಾಯದವರು ಯಾವಾಗಲೂ ನಮ್ಮದೆಂದು ಹೇಳಿ ಹೋರಾಟ ಮಾಡುತ್ತಿದ್ದರು. ವಾರ್ಷಿಕ ಜಾತ್ರೆ ಮುಗಿದ ನಂತರವೂ ಲಾಸು, ಲಾಸಂತ ಹೇಳುತ್ತಿದ್ದರು. ನನಗೆ ಊರವರು, ಭಕ್ತಾಧಿಗಳ ಒತ್ತಡ ಬಂದ ಹಿನ್ನಲೆಯಲ್ಲಿ ದೇವಸ್ಥಾನವನ್ನ ಅಂದು ಮುಜರಾಯಿ ಇಲಾಖೆಯ ಅಧೀನಕ್ಕೆ ಸೇರಿಸಿದ್ದೆ. ಅಂದು ನಾನು ತೆಗೆದ ನಿರ್ಧಾರವು ಸರಿಯಾಗಿದೆ. ಈವಾಗ ಸೋಮನಾಥ ಕ್ಷೇತ್ರವು ಎಷ್ಟು ಅಭಿವೃದ್ಧಿಗೊಂಡಿದೆ ಎಂದು ಸದಾಶಿವ ಉಳ್ಳಾಲ್ ಅವರು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದು ಅದರ ವೀಡಿಯೋ ವೈರಲ್ ಆಗಿದೆ. ಸದಾಶಿವ ಉಳ್ಳಾಲ್ ಅವರಿಗೆ ಕಳೆದ ವಾರ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಲಭಿಸಿತ್ತು.
ತಮ್ಮ ಜಾತಿಯ ಹೆಸರೆತ್ತಿ ತುಚ್ಚವಾಗಿ ಮಾತನಾಡಿದ ಸದಾಶಿವ ಉಳ್ಳಾಲ್ ವಿರುದ್ಧ ಗಟ್ಟಿ ಸಮಾಜ ಬಾಂಧವರು ಉರಿದು ಬಿದ್ದಿದ್ದು ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ.
Mangalore kondana temple, Ullal Block Congress president sadashiv ullal statement sparks controversy among Gatti community.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm