ಬ್ರೇಕಿಂಗ್ ನ್ಯೂಸ್
04-03-24 10:14 pm Mangalore Correspondent ಕರಾವಳಿ
ಉಳ್ಳಾಲ, ಮಾ.4: ಗಟ್ಟಿ ಸಮುದಾಯದವರು ಸೋಮೇಶ್ವರ ಸೋಮನಾಥ ದೇವಸ್ಥಾನವನ್ನ ನಮ್ಮದೆಂದು ಹೇಳುತ್ತಲೇ ಹೋರಾಟ ನಡೆಸಿದ್ದಲ್ಲದೆ ನಾವು ಲಾಸು, ಲಾಸು ಅಂತ ಅಳುತ್ತಿದ್ದರು. ಅದಕ್ಕಾಗಿಯೇ ನಾನು ಸೋಮೇಶ್ವರದ ಮಂಡಲ ಪ್ರಧಾನನಾಗಿದ್ದಾಗ ಸೋಮನಾಥ ದೇವಸ್ಥಾನವನ್ನ ಮುಜರಾಯಿ ಇಲಾಖೆಗೆ ಸೇರಿಸಿದ್ದೆ. ನಾನು ಅಂದು ತೆಗೆದ ನಿರ್ಧಾರ ಸರಿಯಾಗಿದೆ ಎಂದು ಮಾಧ್ಯಮದ ಮುಂದೆ ಹೇಳಿಕೆ ನೀಡಿರುವ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್ ವಿರುದ್ಧ ಗಟ್ಟಿ ಸಮಾಜ ಬಾಂಧವರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಕೊಂಡಾಣ ಕ್ಷೇತ್ರದ ಭಂಡಾರಮನೆ ಧ್ವಂಸ ಪ್ರಕರಣದ ವಿಚಾರದಲ್ಲಿ ಭಾನುವಾರ ತೊಕ್ಕೊಟ್ಟಿನ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿದ್ದ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್ ಅವರು ಗಟ್ಟಿ ಸಮಾಜ ಬಾಂಧವರಿಗೆ ಅವಹೇಳನ ಮಾಡಿದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಅಕ್ರೋಶ ವ್ಯಕ್ತವಾಗಿದೆ.
ಮಾಧ್ಯಮದ ಮುಂದೆ ಮಾತನಾಡಿದ್ದ ಸದಾಶಿವ ಅವರು ನಾನು ಸೋಮೇಶ್ವರದ ಮಂಡಲ ಪ್ರಧಾನನಾಗಿದ್ದಾಗ ಸೋಮನಾಥ ದೇವಸ್ಥಾನವನ್ನ ಗಟ್ಟಿ ಸಮುದಾಯದವರು ಯಾವಾಗಲೂ ನಮ್ಮದೆಂದು ಹೇಳಿ ಹೋರಾಟ ಮಾಡುತ್ತಿದ್ದರು. ವಾರ್ಷಿಕ ಜಾತ್ರೆ ಮುಗಿದ ನಂತರವೂ ಲಾಸು, ಲಾಸಂತ ಹೇಳುತ್ತಿದ್ದರು. ನನಗೆ ಊರವರು, ಭಕ್ತಾಧಿಗಳ ಒತ್ತಡ ಬಂದ ಹಿನ್ನಲೆಯಲ್ಲಿ ದೇವಸ್ಥಾನವನ್ನ ಅಂದು ಮುಜರಾಯಿ ಇಲಾಖೆಯ ಅಧೀನಕ್ಕೆ ಸೇರಿಸಿದ್ದೆ. ಅಂದು ನಾನು ತೆಗೆದ ನಿರ್ಧಾರವು ಸರಿಯಾಗಿದೆ. ಈವಾಗ ಸೋಮನಾಥ ಕ್ಷೇತ್ರವು ಎಷ್ಟು ಅಭಿವೃದ್ಧಿಗೊಂಡಿದೆ ಎಂದು ಸದಾಶಿವ ಉಳ್ಳಾಲ್ ಅವರು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದು ಅದರ ವೀಡಿಯೋ ವೈರಲ್ ಆಗಿದೆ. ಸದಾಶಿವ ಉಳ್ಳಾಲ್ ಅವರಿಗೆ ಕಳೆದ ವಾರ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಲಭಿಸಿತ್ತು.
ತಮ್ಮ ಜಾತಿಯ ಹೆಸರೆತ್ತಿ ತುಚ್ಚವಾಗಿ ಮಾತನಾಡಿದ ಸದಾಶಿವ ಉಳ್ಳಾಲ್ ವಿರುದ್ಧ ಗಟ್ಟಿ ಸಮಾಜ ಬಾಂಧವರು ಉರಿದು ಬಿದ್ದಿದ್ದು ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ.
Mangalore kondana temple, Ullal Block Congress president sadashiv ullal statement sparks controversy among Gatti community.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm