ಬ್ರೇಕಿಂಗ್ ನ್ಯೂಸ್
05-03-24 07:30 pm Mangalore Correspondent ಕರಾವಳಿ
ಮಂಗಳೂರು, ಮಾ.5: ಕಡಬ ತಾಲೂಕಿನ ನಿಂತಿಕಲ್ಲು ಬಳಿಯ ಎಣ್ಮೂರಿಗೆ ದಾಳಿ ನಡೆಸಿರುವ ಎನ್ಐಎ ಅಧಿಕಾರಿಗಳು ಕೇರಳ ಮೂಲದ ಬಿಜು ಅಬ್ರಾಹಂ ಎಂಬಾತನನ್ನು ಬಂಧಿಸಿದ್ದಾರೆ. ಇಂದು ಬೆಳಗ್ಗೆ ದಾಳಿ ನಡೆಸಿದ್ದ ಅಧಿಕಾರಿಗಳು ವಿಚಾರಣೆ ಬಳಿಕ ಸಂಜೆಯ ವೇಳೆಗೆ ವಶಕ್ಕೆ ಪಡೆದಿದ್ದು ಬೆಂಗಳೂರಿಗೆ ಕರೆದೊಯ್ದಿರುವ ಮಾಹಿತಿಯಿದೆ.
ಆರೋಪಿ ಬಿಜು ಅಬ್ರಾಹಂ, ಎಣ್ಮೂರಿನಲ್ಲಿ ಚಿದಾನಂದ ಎಂಬವರಿಗೆ ಸೇರಿದ ಮನೆಯಲ್ಲಿ ಬಾಡಿಗೆಗೆ ವಾಸವಿದ್ದ. ಬೆಂಗಳೂರಿನ ಸುಲ್ತಾನ್ ಪಾಳ್ಯದಲ್ಲಿ ಭಯೋತ್ಪಾದನಾ ಚಟುವಟಿಕೆ ಸಂಬಂಧಿಸಿ ಕಳೆದ ಅಕ್ಟೋಬರ್ ತಿಂಗಳಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಿಜುವನ್ನು ಬಂಧಿಸಲಾಗಿದೆ. ವಿಧ್ವಂಸಕ ಕೃತ್ಯಕ್ಕೆ ಸಂಚು ಹೂಡಿದ್ದ ಆರೋಪಿಗಳಿಗೆ ಬಿಜು ಅಬ್ರಾಹಂ ಆಶ್ರಯ ನೀಡಿದ್ದ ಎಂಬ ಆರೋಪದಲ್ಲಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಬಿಜು ಮನೆಯಲ್ಲಿ ಏಕಾಏಕಿ ದಾಳಿ ನಡೆಸಿ ಶೋಧ ನಡೆಸಿರುವ ಅಧಿಕಾರಿಗಳು ಆರೋಪಿಯನ್ನು ಬಂಧಿಸಿದ್ದು ಮಹತ್ವದ ಮಾಹಿತಿಗಳನ್ನು ಕಲೆಹಾಕಿದ್ದಾರೆ.
ಬೆಂಗಳೂರಿನ ರಾಮೇಶ್ವರ ಕೆಫೆ ಸ್ಫೋಟ ಘಟನೆ ಹಿನ್ನೆಲೆಯಲ್ಲಿ ತನಿಖೆ ಕೈಗೆತ್ತಿಕೊಂಡಿರುವಾಗಲೇ ಎನ್ಐಎ ಅಧಿಕಾರಿಗಳು ಏಕಕಾಲದಲ್ಲಿ ಏಳು ರಾಜ್ಯಗಳ 17 ಕಡೆಗಳಲ್ಲಿ ದಾಳಿ ನಡೆಸಿದ್ದರು. ಅದರಲ್ಲಿ ಕಡಬದ ಈ ದಾಳಿಯೂ ಒಂದಾಗಿದ್ದು, ಬೆಂಗಳೂರಿನ ಸ್ಫೋಟ ಘಟನೆಗೆ ಸಂಬಂಧ ಇದೆಯೇ ಎನ್ನುವ ಬಗ್ಗೆ ತಿಳಿದುಬಂದಿಲ್ಲ. ಬೆಂಗಳೂರಿನ ಜೈಲಿನಲ್ಲಿರುವ ಲಷ್ಕರ್ ಉಗ್ರರಿಂದ ಪ್ರೇರಿತಗೊಂಡು ವಿಧ್ವಂಸಕ ದಾಳಿಗೆ ಐವರು ಆರೋಪಿಗಳು ಸಂಚು ಹೂಡಿದ್ದರು ಎನ್ನುವ ಕೇಂದ್ರೀಯ ಏಜನ್ಸಿಗಳ ಮಾಹಿತಿ ಆಧರಿಸಿ ಬೆಂಗಳೂರು ಪೊಲೀಸರು ಕಳೆದ ಜುಲೈ ತಿಂಗಳಲ್ಲಿ ಕಾರ್ಯಾಚರಣೆ ನಡೆಸಿದ್ದರು. ಆನಂತರ, ಪ್ರಕರಣ ಎನ್ಐಎಗೆ ಹಸ್ತಾಂತರ ಆಗಿತ್ತು.
Mangalore Kadaba Nia Raid, Biju Abraham arrested by NIA officers, taken to Bangalore. He has been arrested over giving shelter to terrorist to conduct terror activities in state of Karnataka.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm