ಬ್ರೇಕಿಂಗ್ ನ್ಯೂಸ್
07-03-24 06:46 pm Mangalore Correspondent ಕರಾವಳಿ
ಮಂಗಳೂರು, ಮಾ.7: ಜಮೀನು ನಕ್ಷೆ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮಂಗಳೂರು ತಾಲೂಕು ಕಚೇರಿಯ ಭೂಮಾಪನ ಕಚೇರಿಯ ಸರ್ವೇಯರ್ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳು ದಾಳಿಗೈದು 4 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಸರ್ವೇಯರನ್ನು ಬಂಧಿಸಿದ್ದಾರೆ. ಭೂಮಾಪನ ಕಚೇರಿಯ ಸರ್ವೇಯರ್ ಶೀತಲ್ ರಾಜ್ ಸಿಕ್ಕಿಬಿದ್ದವರು.
ಜಮೀನು ಪಹಣಿಯಲ್ಲಿನ ಹೆಸರನ್ನು ತೆಗೆಯಲು ನಿಯಮ ಪ್ರಕಾರ, ಜಮೀನನ್ನು ಸರ್ವೆ ಮಾಡಿ ನಕ್ಷೆ ತಯಾರಿಸಿ ತತ್ಕಾಲ್ ಮುಖಾಂತರ ತೆಗೆಯಬೇಕಿರುತ್ತದೆ. ಜಮೀನಿಗೆ ಸಂಬಂಧಪಟ್ಟ ಗುರುಪುರ ಹೋಬಳಿಯ ನೀರುಮಾರ್ಗ ಗ್ರಾಮದ ಲಿಲ್ಲಿ ಪೀಟರ್ ವಾಸ್ ಅವರಿಗೆ 72 ವರ್ಷವಾಗಿದ್ದು ಆರೋಗ್ಯ ಸರಿ ಇಲ್ಲದ ಕಾರಣ ಅವರ ಪರವಾಗಿ ರಾಜೇಶ್ ಎಂಬ ಸಂಬಂಧಿಕ ವ್ಯಕ್ತಿ ಅರ್ಜಿ ಹಾಕಿದ್ದರು. ಸ್ಟೆಲ್ಲಾ ಜಾನೆಟ್ ವಾಸ್ ಎಂಬವರ ಹೆಸರಿಗೆ ತತ್ಕಾಲ್ ಪೋಡಿ ಮಾಡಿಕೊಡುವ ಬಗ್ಗೆ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯ ಪಹಣಿ ವಿಭಾಗದಲ್ಲಿ ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಿದ್ದಲ್ಲದೆ, ಅದಕ್ಕಾಗಿ 1500 ರೂ. ಪಾವತಿಸಿ ರಶೀದಿ ಪಡೆದಿದ್ದರು.
ಫೆಬ್ರವರಿ 29 ರಂದು ಮಂಗಳೂರಿನ ಸರ್ವೇ ಇಲಾಖೆಯಲ್ಲಿ ಕೆಲಸ ಮಾಡುವ ಶೀತಲ್ ರಾಜ್ ಎಂಬ ಸರ್ವೆಯರ್ ಜಮೀನಿನ ಸರ್ವೆ ನಡೆಸಿ ಸ್ಥಳ ಮಹಜರು ಮಾಡಿದ್ದರು. ಬಳಿಕ ಜಮೀನಿನ ನಕ್ಷೆ ನೀಡಲು ಸ್ವಲ್ಪ ಖರ್ಚಿದೆ ಎಂದು ಹೇಳಿದ್ದು 5 ಸಾವಿರ ಕೊಡುವಂತೆ ಬೇಡಿಕೆ ಇರಿಸಿದ್ದರು. ಬಳಿಕ ಕಡಿಮೆ ಮಾಡುವಂತೆ ಹೇಳಿದ್ದಕ್ಕೆ ನಾಲ್ಕು ಸಾವಿರ ರೂ.ಗೆ ಇಳಿಸಿದ್ದರು. ಈ ಬಗ್ಗೆ ನೊಂದ ಅರ್ಜಿದಾರ ಮಂಗಳೂರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಗುರುವಾರ ಮಂಗಳೂರಿನ ಮಿನಿ ವಿಧಾನ ಸೌಧದಲ್ಲಿ ನಾಲ್ಕು ಸಾವಿರ ಲಂಚದ ಹಣ ಸ್ವೀಕಾರ ಮಾಡುವಾಗಲೇ ಲೋಕಾಯುಕ್ತ ಪೊಲೀಸರು ಆರೋಪಿ ಶೀತಲ್ ರಾಜ್ ನನ್ನು ಬಂಧಿಸಿದ್ದಾರೆ. ಎಸ್ಪಿ ಸೈಮನ್ ನೇತೃತ್ವದಲ್ಲಿ ಡಿವೈಎಸ್ಪಿ ಚೆಲುವರಾಜು, ಗಾನ ಪಿ. ಕುಮಾರ್ ಕಾರ್ಯಾಚರಣೆ ನಡೆಸಿದ್ದರು.
Four thousand bribe, Mangalore surveyor sheethal Raj caught by Lokayukta at Mini vidhana soudha.
28-05-26 04:34 pm
HK News Staffer
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm