ಬ್ರೇಕಿಂಗ್ ನ್ಯೂಸ್
07-03-24 06:46 pm Mangalore Correspondent ಕರಾವಳಿ
ಮಂಗಳೂರು, ಮಾ.7: ಜಮೀನು ನಕ್ಷೆ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮಂಗಳೂರು ತಾಲೂಕು ಕಚೇರಿಯ ಭೂಮಾಪನ ಕಚೇರಿಯ ಸರ್ವೇಯರ್ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳು ದಾಳಿಗೈದು 4 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಸರ್ವೇಯರನ್ನು ಬಂಧಿಸಿದ್ದಾರೆ. ಭೂಮಾಪನ ಕಚೇರಿಯ ಸರ್ವೇಯರ್ ಶೀತಲ್ ರಾಜ್ ಸಿಕ್ಕಿಬಿದ್ದವರು.
ಜಮೀನು ಪಹಣಿಯಲ್ಲಿನ ಹೆಸರನ್ನು ತೆಗೆಯಲು ನಿಯಮ ಪ್ರಕಾರ, ಜಮೀನನ್ನು ಸರ್ವೆ ಮಾಡಿ ನಕ್ಷೆ ತಯಾರಿಸಿ ತತ್ಕಾಲ್ ಮುಖಾಂತರ ತೆಗೆಯಬೇಕಿರುತ್ತದೆ. ಜಮೀನಿಗೆ ಸಂಬಂಧಪಟ್ಟ ಗುರುಪುರ ಹೋಬಳಿಯ ನೀರುಮಾರ್ಗ ಗ್ರಾಮದ ಲಿಲ್ಲಿ ಪೀಟರ್ ವಾಸ್ ಅವರಿಗೆ 72 ವರ್ಷವಾಗಿದ್ದು ಆರೋಗ್ಯ ಸರಿ ಇಲ್ಲದ ಕಾರಣ ಅವರ ಪರವಾಗಿ ರಾಜೇಶ್ ಎಂಬ ಸಂಬಂಧಿಕ ವ್ಯಕ್ತಿ ಅರ್ಜಿ ಹಾಕಿದ್ದರು. ಸ್ಟೆಲ್ಲಾ ಜಾನೆಟ್ ವಾಸ್ ಎಂಬವರ ಹೆಸರಿಗೆ ತತ್ಕಾಲ್ ಪೋಡಿ ಮಾಡಿಕೊಡುವ ಬಗ್ಗೆ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯ ಪಹಣಿ ವಿಭಾಗದಲ್ಲಿ ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಿದ್ದಲ್ಲದೆ, ಅದಕ್ಕಾಗಿ 1500 ರೂ. ಪಾವತಿಸಿ ರಶೀದಿ ಪಡೆದಿದ್ದರು.
ಫೆಬ್ರವರಿ 29 ರಂದು ಮಂಗಳೂರಿನ ಸರ್ವೇ ಇಲಾಖೆಯಲ್ಲಿ ಕೆಲಸ ಮಾಡುವ ಶೀತಲ್ ರಾಜ್ ಎಂಬ ಸರ್ವೆಯರ್ ಜಮೀನಿನ ಸರ್ವೆ ನಡೆಸಿ ಸ್ಥಳ ಮಹಜರು ಮಾಡಿದ್ದರು. ಬಳಿಕ ಜಮೀನಿನ ನಕ್ಷೆ ನೀಡಲು ಸ್ವಲ್ಪ ಖರ್ಚಿದೆ ಎಂದು ಹೇಳಿದ್ದು 5 ಸಾವಿರ ಕೊಡುವಂತೆ ಬೇಡಿಕೆ ಇರಿಸಿದ್ದರು. ಬಳಿಕ ಕಡಿಮೆ ಮಾಡುವಂತೆ ಹೇಳಿದ್ದಕ್ಕೆ ನಾಲ್ಕು ಸಾವಿರ ರೂ.ಗೆ ಇಳಿಸಿದ್ದರು. ಈ ಬಗ್ಗೆ ನೊಂದ ಅರ್ಜಿದಾರ ಮಂಗಳೂರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಗುರುವಾರ ಮಂಗಳೂರಿನ ಮಿನಿ ವಿಧಾನ ಸೌಧದಲ್ಲಿ ನಾಲ್ಕು ಸಾವಿರ ಲಂಚದ ಹಣ ಸ್ವೀಕಾರ ಮಾಡುವಾಗಲೇ ಲೋಕಾಯುಕ್ತ ಪೊಲೀಸರು ಆರೋಪಿ ಶೀತಲ್ ರಾಜ್ ನನ್ನು ಬಂಧಿಸಿದ್ದಾರೆ. ಎಸ್ಪಿ ಸೈಮನ್ ನೇತೃತ್ವದಲ್ಲಿ ಡಿವೈಎಸ್ಪಿ ಚೆಲುವರಾಜು, ಗಾನ ಪಿ. ಕುಮಾರ್ ಕಾರ್ಯಾಚರಣೆ ನಡೆಸಿದ್ದರು.
Four thousand bribe, Mangalore surveyor sheethal Raj caught by Lokayukta at Mini vidhana soudha.
13-07-26 02:50 pm
HK News Staffer
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
13-07-26 02:54 pm
HK News Staffer
ಮಂಗಳೂರಿನಲ್ಲಿ ಮತ್ತಷ್ಟು ಬಾಂಗ್ಲಾ ನಿವಾಸಿಗಳ ಬೇಟೆ ;...
13-07-26 11:51 am
ತಮ್ಮ ನೈಜ ಗುರುತನ್ನು ಮರೆಮಾಚಿ ಪಡಿತರ ಚೀಟಿ, ವೋಟರ್...
12-07-26 10:13 pm
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm