ಬ್ರೇಕಿಂಗ್ ನ್ಯೂಸ್
07-03-24 09:46 pm Mangalore Correspondent ಕರಾವಳಿ
ಮಂಗಳೂರು, ಮಾ.7: ಸೌದಿ ಅರೇಬಿಯಾದ ದಮಾಮ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಂಗಳೂರಿಗೆ ಹೊರಡಬೇಕಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವು 18 ಗಂಟೆ ಕಳೆದರೂ ಪ್ರಯಾಣ ಆರಂಭಿಸದ ಬಗ್ಗೆ ಪ್ರಯಾಣಿಕರು ತೊಂದರೆ ಅನುಭವಿಸಿದ್ದು ವಿಮಾನ ಸಿಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬುಧವಾರ ರಾತ್ರಿ 10:20 ಕ್ಕೆ ಟೇಕಾಫ್ ಆಗಬೇಕಿದ್ದ ವಿಮಾನವು ಗುರುವಾರ ಸಂಜೆಯಾದರೂ, ದಮಾಮ್ ನಿಂದ ನಿರ್ಗಮಿಸಿರಲಿಲ್ಲ. ವಿಮಾನ ವಿಳಂಬವಾಗಿದ್ದಕ್ಕೆ ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯಿಂದ ಪ್ರಯಾಣಿಕರಿಗೆ ಸೂಕ್ತ ಮಾಹಿತಿ ನೀಡಿಲ್ಲ. ಇದರಿಂದ ತೀವ್ರ ತೊಂದರೆ ಅನುಭವಿಸುವಂತಾಯಿತು ಎಂದು ಪ್ರಯಾಣಿಕರು ದೂರಿದ್ದಾರೆ.
ಏರ್ ಇಂಡಿಯಾ ಎಕ್ಸ್ಪ್ರೆಸ್ ಮಧ್ಯರಾತ್ರಿ ಸುಮಾರಿಗೆ ವಿಮಾನ ರದ್ದತಿಯ ಬಗ್ಗೆ ಪ್ರಯಾಣಿಕರಿಗೆ ಸೂಚನೆ ನೀಡಿತ್ತು. ಬಳಿಕ ಗುರುವಾರ ಬೆಳಗ್ಗೆ 11 ಗಂಟೆಗೆ ಪ್ರಯಾಣ ಆರಂಭಿಸುವ ಬಗ್ಗೆ ಭರವಸೆ ನೀಡಿತ್ತು. ಅನಿರೀಕ್ಷಿತ ಪ್ರಕಟಣೆಯಿಂದ ವಿಮಾನ ನಿಲ್ದಾಣದಲ್ಲಿ ಕಾಯುತ್ತಿದ್ದ ಪ್ರಯಾಣಿಕರು ತೊಂದರೆ ಎದುರಿಸುವಂತಾಯಿತು ಎಂದು ಪ್ರಯಾಣಿಕರು ಹೇಳಿದ್ದಾರೆ.
ಪ್ರಯಾಣಿಕರೊಬ್ಬರು ಪ್ರತಿಕ್ರಿಯಿಸಿ, ದೂರದ ಸ್ಥಳಗಳಿಂದ ವಿಮಾನ ನಿಲ್ದಾಣಕ್ಕೆ ಆಗಮಿಸಿದವರಿಗೆ ಉಳಿದುಕೊಳ್ಳಲು ವಸತಿ ವ್ಯವಸ್ಥೆಯನ್ನೂ ಮಾಡಿಲ್ಲ. ವಿಮಾನಯಾನ ಸಂಸ್ಥೆಯಿಂದ ಆಹಾರ ಅಥವಾ ವಸತಿ ವ್ಯವಸ್ಥೆಯನ್ನು ಕಲ್ಪಿಸಿಲ್ಲ. ಇದರಿಂದ ತುರ್ತು ಪ್ರಯಾಣಕ್ಕೆ ಬಂದವರು ಕಷ್ಟ ಎದುರಿಸುವಂತಾಗಿದೆ ಎಂದರು.
ಗುರುವಾರ ಬೆಳಗ್ಗೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕರಿಗೆ, ವಿಮಾನವೇರಲು ಅವಕಾಶ ನೀಡಲಾಗಿತ್ತು. ಆದರೆ ಅರ್ಧ ಗಂಟೆಯ ನಂತರ, ಪ್ರಯಾಣಿಕರನ್ನು ಕೆಳಗಿಳಿಸಿದ್ದು ವಿಮಾನದ ಹಾರಾಟ ಮತ್ತಷ್ಟು ವಿಳಂಬವಾಗುವ ಬಗ್ಗೆ ಸೂಚನೆ ನೀಡಿದರು. ಸೌದಿ ಅರೇಬಿಯಾದ ಸ್ಥಳೀಯ ಸಮಯ ಮಧ್ಯಾಹ್ನ 3 ಗಂಟೆಯಾದರೂ, ಅಧಿಕಾರಿಗಳು ಮಂಗಳೂರಿಗೆ ಹೊರಡುವ ಏರ್ ಇಂಡಿಯಾ ವಿಮಾನ ಹಾರಾಟದ ಬಗ್ಗೆ ಯಾವುದೇ ಖಚಿತ ಮಾಹಿತಿ ನೀಡಿಲ್ಲ ಎಂದು ಪ್ರಯಾಣಿಕರು ಹೇಳಿದ್ದಾರೆ. ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ಮತ್ತು ರೋಗಿಗಳು ವಿಮಾನ ವಿಳಂಬವಾದ್ದರಿಂದ ಸರಿಯಾದ ವ್ಯವಸ್ಥೆಗಳಿಲ್ಲದೇ ಏರ್ ಇಂಡಿಯಾ ಸಿಬಂದಿ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು ಎಂದು ವಾರ್ತಾ ಭಾರತಿ ವರದಿ ಮಾಡಿದೆ.
Saudi to Mangalore flight delayed for 18 hours, frustrated passengers fight with airlines for their behaviour. Passengers also had no food and water provided by the airlines even after waiting for hours.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm