ಬ್ರೇಕಿಂಗ್ ನ್ಯೂಸ್
07-03-24 09:46 pm Mangalore Correspondent ಕರಾವಳಿ
ಮಂಗಳೂರು, ಮಾ.7: ಸೌದಿ ಅರೇಬಿಯಾದ ದಮಾಮ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಂಗಳೂರಿಗೆ ಹೊರಡಬೇಕಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವು 18 ಗಂಟೆ ಕಳೆದರೂ ಪ್ರಯಾಣ ಆರಂಭಿಸದ ಬಗ್ಗೆ ಪ್ರಯಾಣಿಕರು ತೊಂದರೆ ಅನುಭವಿಸಿದ್ದು ವಿಮಾನ ಸಿಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬುಧವಾರ ರಾತ್ರಿ 10:20 ಕ್ಕೆ ಟೇಕಾಫ್ ಆಗಬೇಕಿದ್ದ ವಿಮಾನವು ಗುರುವಾರ ಸಂಜೆಯಾದರೂ, ದಮಾಮ್ ನಿಂದ ನಿರ್ಗಮಿಸಿರಲಿಲ್ಲ. ವಿಮಾನ ವಿಳಂಬವಾಗಿದ್ದಕ್ಕೆ ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯಿಂದ ಪ್ರಯಾಣಿಕರಿಗೆ ಸೂಕ್ತ ಮಾಹಿತಿ ನೀಡಿಲ್ಲ. ಇದರಿಂದ ತೀವ್ರ ತೊಂದರೆ ಅನುಭವಿಸುವಂತಾಯಿತು ಎಂದು ಪ್ರಯಾಣಿಕರು ದೂರಿದ್ದಾರೆ.
ಏರ್ ಇಂಡಿಯಾ ಎಕ್ಸ್ಪ್ರೆಸ್ ಮಧ್ಯರಾತ್ರಿ ಸುಮಾರಿಗೆ ವಿಮಾನ ರದ್ದತಿಯ ಬಗ್ಗೆ ಪ್ರಯಾಣಿಕರಿಗೆ ಸೂಚನೆ ನೀಡಿತ್ತು. ಬಳಿಕ ಗುರುವಾರ ಬೆಳಗ್ಗೆ 11 ಗಂಟೆಗೆ ಪ್ರಯಾಣ ಆರಂಭಿಸುವ ಬಗ್ಗೆ ಭರವಸೆ ನೀಡಿತ್ತು. ಅನಿರೀಕ್ಷಿತ ಪ್ರಕಟಣೆಯಿಂದ ವಿಮಾನ ನಿಲ್ದಾಣದಲ್ಲಿ ಕಾಯುತ್ತಿದ್ದ ಪ್ರಯಾಣಿಕರು ತೊಂದರೆ ಎದುರಿಸುವಂತಾಯಿತು ಎಂದು ಪ್ರಯಾಣಿಕರು ಹೇಳಿದ್ದಾರೆ.
ಪ್ರಯಾಣಿಕರೊಬ್ಬರು ಪ್ರತಿಕ್ರಿಯಿಸಿ, ದೂರದ ಸ್ಥಳಗಳಿಂದ ವಿಮಾನ ನಿಲ್ದಾಣಕ್ಕೆ ಆಗಮಿಸಿದವರಿಗೆ ಉಳಿದುಕೊಳ್ಳಲು ವಸತಿ ವ್ಯವಸ್ಥೆಯನ್ನೂ ಮಾಡಿಲ್ಲ. ವಿಮಾನಯಾನ ಸಂಸ್ಥೆಯಿಂದ ಆಹಾರ ಅಥವಾ ವಸತಿ ವ್ಯವಸ್ಥೆಯನ್ನು ಕಲ್ಪಿಸಿಲ್ಲ. ಇದರಿಂದ ತುರ್ತು ಪ್ರಯಾಣಕ್ಕೆ ಬಂದವರು ಕಷ್ಟ ಎದುರಿಸುವಂತಾಗಿದೆ ಎಂದರು.
ಗುರುವಾರ ಬೆಳಗ್ಗೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕರಿಗೆ, ವಿಮಾನವೇರಲು ಅವಕಾಶ ನೀಡಲಾಗಿತ್ತು. ಆದರೆ ಅರ್ಧ ಗಂಟೆಯ ನಂತರ, ಪ್ರಯಾಣಿಕರನ್ನು ಕೆಳಗಿಳಿಸಿದ್ದು ವಿಮಾನದ ಹಾರಾಟ ಮತ್ತಷ್ಟು ವಿಳಂಬವಾಗುವ ಬಗ್ಗೆ ಸೂಚನೆ ನೀಡಿದರು. ಸೌದಿ ಅರೇಬಿಯಾದ ಸ್ಥಳೀಯ ಸಮಯ ಮಧ್ಯಾಹ್ನ 3 ಗಂಟೆಯಾದರೂ, ಅಧಿಕಾರಿಗಳು ಮಂಗಳೂರಿಗೆ ಹೊರಡುವ ಏರ್ ಇಂಡಿಯಾ ವಿಮಾನ ಹಾರಾಟದ ಬಗ್ಗೆ ಯಾವುದೇ ಖಚಿತ ಮಾಹಿತಿ ನೀಡಿಲ್ಲ ಎಂದು ಪ್ರಯಾಣಿಕರು ಹೇಳಿದ್ದಾರೆ. ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ಮತ್ತು ರೋಗಿಗಳು ವಿಮಾನ ವಿಳಂಬವಾದ್ದರಿಂದ ಸರಿಯಾದ ವ್ಯವಸ್ಥೆಗಳಿಲ್ಲದೇ ಏರ್ ಇಂಡಿಯಾ ಸಿಬಂದಿ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು ಎಂದು ವಾರ್ತಾ ಭಾರತಿ ವರದಿ ಮಾಡಿದೆ.
Saudi to Mangalore flight delayed for 18 hours, frustrated passengers fight with airlines for their behaviour. Passengers also had no food and water provided by the airlines even after waiting for hours.
13-07-26 02:50 pm
HK News Staffer
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
13-07-26 02:54 pm
HK News Staffer
ಮಂಗಳೂರಿನಲ್ಲಿ ಮತ್ತಷ್ಟು ಬಾಂಗ್ಲಾ ನಿವಾಸಿಗಳ ಬೇಟೆ ;...
13-07-26 11:51 am
ತಮ್ಮ ನೈಜ ಗುರುತನ್ನು ಮರೆಮಾಚಿ ಪಡಿತರ ಚೀಟಿ, ವೋಟರ್...
12-07-26 10:13 pm
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm