ಬ್ರೇಕಿಂಗ್ ನ್ಯೂಸ್
09-03-24 12:33 pm Mangalore Correspondent ಕರಾವಳಿ
ಮಂಗಳೂರು, ಮಾ.9: ಬೆಂಗಳೂರು ರಾಮೇಶ್ವರ ಕೆಫೆ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಕರಾವಳಿಯಿಂದ ಸಮುದ್ರ ಮಾರ್ಗದಲ್ಲಿ ಪರಾರಿಯಾಗುವ ಶಂಕೆ ವ್ಯಕ್ತವಾಗಿದ್ದು ಪೊಲೀಸರು ತೀರ ಪ್ರದೇಶದಲ್ಲಿ ಹೈ ಎಲರ್ಟ್ ಮಾಡಿದ್ದಾರೆ.
ಬಾಂಬರ್ ಟ್ರಾಕ್ ಮಾಡಿ ಬೆನ್ನು ಬಿದ್ದಿರುವ ರಾಜ್ಯ ಪೊಲೀಸ್ ಅಧಿಕಾರಿಗಳು ಹಾಗು ಎನ್ಐಎ ಅಧಿಕಾರಿಗಳು ಕರಾವಳಿ ಭಾಗದಲ್ಲಿ ಹುಡುಕಾಟ ನಡೆಸುತ್ತಿದ್ದಾರೆ. ಆರೋಪಿ ಬಳ್ಳಾರಿಯಿಂದ ಶಿವಮೊಗ್ಗದ ಮೂಲಕ ಭಟ್ಕಳಕ್ಕೆ ಬಂದಿದ್ದಾನೆ ಎಂಬ ಮಾಹಿತಿ ಆಧರಿಸಿ ಎನ್ಐಎ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಮೊಬೈಲ್ ಬಳಸದೆ, ವೇಷ ಬದಲಿಸುತ್ತಿರುವ ಆರೋಪಿ ಕರಾವಳಿಯಿಂದ ಸಮುದ್ರ ಮಾರ್ಗದಲ್ಲಿ ವಿದೇಶಕ್ಕೆ ಪರಾರಿಯಾಗಲು ಯತ್ನಿಸಿರಬಹುದು ಎನ್ನುವ ಶಂಕೆ ಇದೆ.

ಆಳ ಸಮುದ್ರಕ್ಕೆ ಮೀನುಗಾರಿಕೆ ತೆರಳುವ ಬೋಟ್ ನಲ್ಲಿ ಆರೋಪಿ ಪರಾರಿಯಾಗಲು ಯತ್ನಿಸುತ್ತಿರುವ ಮಾಹಿತಿ ಆಧರಿಸಿ ರಾಜ್ಯದ ಮೂರು ಜಿಲ್ಲೆಗಳ ವ್ಯಾಪ್ತಿಯ 320 ಕಿಮೀ ಉದ್ದದ ಕಡಲ ತೀರದಲ್ಲಿ ಹೈ ಅಲರ್ಟ್ ಮಾಡಲಾಗಿದೆ. ರಾಜ್ಯ ಕರಾವಳಿ ಕಾವಲು ಪಡೆ ಪೊಲೀಸರು ಸಮುದ್ರದಲ್ಲಿ ಗಸ್ತು ನಡೆಸುತ್ತಿದ್ದು ಸಂಶಯಾಸ್ಪದ ವ್ಯಕ್ತಿಗಳ ಬಗ್ಗೆ ಮಾಹಿತಿ ನೀಡಲು ಮೀನುಗಾರರಿಗೆ ಸೂಚಿಸಿದ್ದಾರೆ. ಅಲ್ಲದೆ, ಆಳ ಸಮುದ್ರ ಮೀನುಗಾರಿಕೆಗೆ ತೆರಳುವ ಬೋಟ್ ಗಳಲ್ಲಿ ಕರಾವಳಿ ಕಾವಲು ಪಡೆ ಪೊಲೀಸರು ತಪಾಸಣೆ ಕೈಗೊಂಡಿದ್ದಾರೆ.
ಸಮುದ್ರದಲ್ಲಿ ಯಾವುದೇ ಸಂಶಯಾಸ್ಪದ ನಡೆ ಕಂಡುಬಂದರೆ ಅಥವಾ ಬೋಟ್ ಗಳಲ್ಲಿ ಅಪರಿಚಿತ ವ್ಯಕ್ತಿಗಳು ಪತ್ತೆಯಾದರೆ ಮಾಹಿತಿ ನೀಡುವಂತೆ ಕರಾವಳಿ ಪಡೆಯವರು ಸೂಚನೆ ನೀಡಿದ್ದಾರೆ. ಭಟ್ಕಳದಲ್ಲಿ ಹಿಂದೆ ಗೋಲ್ಡ್ ಸ್ಮಗ್ಲಿಂಗ್ ಇನ್ನಿತರ ಕಳ್ಳಸಾಗಾಟಕ್ಕೆ ರಹದಾರಿ ಇದೆ. ಅಲ್ಲಿಂದ ನೇರವಾಗಿ ಪಾಕಿಸ್ತಾನ ಸಂಪರ್ಕದ ದಾರಿಯೂ ಆಳ ಸಮುದ್ರದ ಮೂಲಕ ಇದೆ ಎನ್ನಲಾಗುತ್ತಿದೆ. ಆ ಹಿನ್ನೆಲೆಯಲ್ಲಿ ಬಾಂಬರ್ ಆರೋಪಿ ಭಟ್ಕಳದ ನಂಟು ಮೂಲಕ ವಿದೇಶಕ್ಕೆ ಪರಾರಿಯಾಗಲು ಯತ್ನಿಸಿರಬಹುದು ಎಂಬ ಶಂಕೆಯಲ್ಲಿ ಪೊಲೀಸರಿದ್ದಾರೆ.
Bangalore cafe blast, bomber to have travelled by boat, high alert in karvali regions, coast gaurd surveillance.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm