ಬ್ರೇಕಿಂಗ್ ನ್ಯೂಸ್
10-03-24 02:52 pm Mangalore Correspondent ಕರಾವಳಿ
ಮಂಗಳೂರು, ಮಾ.10: ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಆರೋಪಿ ಪತ್ತೆಗಾಗಿ ವಿಶ್ವ ಹಿಂದು ಪರಿಷತ್ತಿನಿಂದ ರಾಜ್ಯ ಪೊಲೀಸರು ಮತ್ತು ಎನ್ಐಎ ಅಧಿಕಾರಿಗಳಿಗೆ ಸಾಥ್ ನೀಡಲಿದ್ದೇವೆ ಎಂದು ವಿಶ್ವ ಹಿಂದು ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹೇಳಿದ್ದಾರೆ.
ಆರೋಪಿಯ ಫೋಟೋವನ್ನು ಈಗಾಗಲೇ ಎನ್ಐಎ ಅಧಿಕಾರಿಗಳು ಬಿಡುಗಡೆ ಮಾಡಿದ್ದಾರೆ. ಬಳ್ಳಾರಿ, ಭಟ್ಕಳಕ್ಕೆ ಹೋಗಿದ್ದಾನೆ, ಅಲ್ಲಿನ ಮಸೀದಿಗಳಿಗೆ ಹೋಗಿದ್ದಾನೆ ಎಂಬುದನ್ನು ಪತ್ತೆ ಮಾಡಿದ್ದಾರೆ. ಹೀಗಾಗಿ ಭಟ್ಕಳ ಸೇರಿದಂತೆ ರಾಜ್ಯದೆಲ್ಲೆಡೆ ಮಸೀದಿ, ಮದ್ರಸಾಗಳಿಗೆ ದಾಳಿ ನಡೆಸಬೇಕು. ದಾಳಿ ನಡೆಸಿದರೆ ಆರೋಪಿ ಕುರಿತು ಮಾಹಿತಿ ಸಿಗಬಹುದು. ಅದಕ್ಕಾಗಿ ವಿಶ್ವ ಹಿಂದು ಪರಿಷತ್ತಿನಿಂದ ಪೊಲೀಸರಿಗೆ ಆಗ್ರಹ ಮಾಡುತ್ತಿದ್ದೇವೆ ಎಂದು ಶರಣ್ ಪಂಪ್ವೆಲ್ ಹೇಳಿದ್ದಾರೆ.
ಭಟ್ಕಳದಲ್ಲಿ ಭಯೋತ್ಪಾದಕರಿಗೆ ನಂಟು ಇರುವುದು ಬಹಳಷ್ಟು ಬಾರಿ ಸಾಬೀತಾಗಿದೆ. ಮದ್ರಸಾಗಳು ಭಯೋತ್ಪಾದಕರಿಗೆ ಪೂರಕವಾಗುವ ಶಿಕ್ಷಣ ನೀಡುತ್ತಿದ್ದಾರೆಂಬ ಅಂಶವೂ ಹಲವು ಬಾರಿ ಪತ್ತೆಯಾಗಿದೆ. ಈ ಕಾರಣಕ್ಕೆ ಮದ್ರಸಾಗಳು ಭಯೋತ್ಪಾದಕರ ತಾಣಗಳಾಗುತ್ತಿವೆ. ನಾವು ಆರೋಪಿ ಪತ್ತೆಗಾಗಿ ಎಲ್ಲ ರೀತಿಯ ಸಹಕಾರ ನೀಡುತ್ತೇವೆ. ನಮ್ಮ ಸೋಶಿಯಲ್ ಮೀಡಿಯಾ ಪೇಜ್ ಗಳಲ್ಲಿ ಆರೋಪಿ ಫೋಟೋ ಪ್ರಕಟಿಸಿ ಪತ್ತೆಗೆ ಸಹಕಾರ ನೀಡುತ್ತೇವೆ. ಆರೋಪಿ ರಾಜ್ಯದ ಹಲವು ಕಡೆ ಸರಕಾರಿ ಬಸ್ಸುಗಳಲ್ಲಿ ಓಡಾಡಿರುವ ಬಗ್ಗೆ ಸಿಸಿಟಿವಿ ಚಿತ್ರಗಳನ್ನು ಪತ್ತೆ ಮಾಡಿದ್ದಾರೆ. ಇದರಿಂದಾಗಿ ಆರೋಪಿ ರಾಜ್ಯದಲ್ಲೇ ಇರುವ ಸಾಧ್ಯತೆಯಿದೆ. ನಾವು ದೇಶಾದ್ಯಂತ ನಮ್ಮ ನೆಟ್ವರ್ಕ್ ಆಧರಿಸಿ ಆರೋಪಿ ಪತ್ತೆಗಾಗಿ ಹುಡುಕಾಟ ನಡೆಸುತ್ತೇವೆ ಎಂದವರು ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ.
Mangalore Vhp Sharan Pumpwell, says officals should raid Mosques and Madrasas to find Bangalore Rameshwaram Cafe blast terrorist and for this we will help NIA and police officlas he added.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm