ಬ್ರೇಕಿಂಗ್ ನ್ಯೂಸ್
10-03-24 02:52 pm Mangalore Correspondent ಕರಾವಳಿ
ಮಂಗಳೂರು, ಮಾ.10: ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಆರೋಪಿ ಪತ್ತೆಗಾಗಿ ವಿಶ್ವ ಹಿಂದು ಪರಿಷತ್ತಿನಿಂದ ರಾಜ್ಯ ಪೊಲೀಸರು ಮತ್ತು ಎನ್ಐಎ ಅಧಿಕಾರಿಗಳಿಗೆ ಸಾಥ್ ನೀಡಲಿದ್ದೇವೆ ಎಂದು ವಿಶ್ವ ಹಿಂದು ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹೇಳಿದ್ದಾರೆ.
ಆರೋಪಿಯ ಫೋಟೋವನ್ನು ಈಗಾಗಲೇ ಎನ್ಐಎ ಅಧಿಕಾರಿಗಳು ಬಿಡುಗಡೆ ಮಾಡಿದ್ದಾರೆ. ಬಳ್ಳಾರಿ, ಭಟ್ಕಳಕ್ಕೆ ಹೋಗಿದ್ದಾನೆ, ಅಲ್ಲಿನ ಮಸೀದಿಗಳಿಗೆ ಹೋಗಿದ್ದಾನೆ ಎಂಬುದನ್ನು ಪತ್ತೆ ಮಾಡಿದ್ದಾರೆ. ಹೀಗಾಗಿ ಭಟ್ಕಳ ಸೇರಿದಂತೆ ರಾಜ್ಯದೆಲ್ಲೆಡೆ ಮಸೀದಿ, ಮದ್ರಸಾಗಳಿಗೆ ದಾಳಿ ನಡೆಸಬೇಕು. ದಾಳಿ ನಡೆಸಿದರೆ ಆರೋಪಿ ಕುರಿತು ಮಾಹಿತಿ ಸಿಗಬಹುದು. ಅದಕ್ಕಾಗಿ ವಿಶ್ವ ಹಿಂದು ಪರಿಷತ್ತಿನಿಂದ ಪೊಲೀಸರಿಗೆ ಆಗ್ರಹ ಮಾಡುತ್ತಿದ್ದೇವೆ ಎಂದು ಶರಣ್ ಪಂಪ್ವೆಲ್ ಹೇಳಿದ್ದಾರೆ.
ಭಟ್ಕಳದಲ್ಲಿ ಭಯೋತ್ಪಾದಕರಿಗೆ ನಂಟು ಇರುವುದು ಬಹಳಷ್ಟು ಬಾರಿ ಸಾಬೀತಾಗಿದೆ. ಮದ್ರಸಾಗಳು ಭಯೋತ್ಪಾದಕರಿಗೆ ಪೂರಕವಾಗುವ ಶಿಕ್ಷಣ ನೀಡುತ್ತಿದ್ದಾರೆಂಬ ಅಂಶವೂ ಹಲವು ಬಾರಿ ಪತ್ತೆಯಾಗಿದೆ. ಈ ಕಾರಣಕ್ಕೆ ಮದ್ರಸಾಗಳು ಭಯೋತ್ಪಾದಕರ ತಾಣಗಳಾಗುತ್ತಿವೆ. ನಾವು ಆರೋಪಿ ಪತ್ತೆಗಾಗಿ ಎಲ್ಲ ರೀತಿಯ ಸಹಕಾರ ನೀಡುತ್ತೇವೆ. ನಮ್ಮ ಸೋಶಿಯಲ್ ಮೀಡಿಯಾ ಪೇಜ್ ಗಳಲ್ಲಿ ಆರೋಪಿ ಫೋಟೋ ಪ್ರಕಟಿಸಿ ಪತ್ತೆಗೆ ಸಹಕಾರ ನೀಡುತ್ತೇವೆ. ಆರೋಪಿ ರಾಜ್ಯದ ಹಲವು ಕಡೆ ಸರಕಾರಿ ಬಸ್ಸುಗಳಲ್ಲಿ ಓಡಾಡಿರುವ ಬಗ್ಗೆ ಸಿಸಿಟಿವಿ ಚಿತ್ರಗಳನ್ನು ಪತ್ತೆ ಮಾಡಿದ್ದಾರೆ. ಇದರಿಂದಾಗಿ ಆರೋಪಿ ರಾಜ್ಯದಲ್ಲೇ ಇರುವ ಸಾಧ್ಯತೆಯಿದೆ. ನಾವು ದೇಶಾದ್ಯಂತ ನಮ್ಮ ನೆಟ್ವರ್ಕ್ ಆಧರಿಸಿ ಆರೋಪಿ ಪತ್ತೆಗಾಗಿ ಹುಡುಕಾಟ ನಡೆಸುತ್ತೇವೆ ಎಂದವರು ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ.
Mangalore Vhp Sharan Pumpwell, says officals should raid Mosques and Madrasas to find Bangalore Rameshwaram Cafe blast terrorist and for this we will help NIA and police officlas he added.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm