ಬ್ರೇಕಿಂಗ್ ನ್ಯೂಸ್
10-03-24 02:52 pm Mangalore Correspondent ಕರಾವಳಿ
ಮಂಗಳೂರು, ಮಾ.10: ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಆರೋಪಿ ಪತ್ತೆಗಾಗಿ ವಿಶ್ವ ಹಿಂದು ಪರಿಷತ್ತಿನಿಂದ ರಾಜ್ಯ ಪೊಲೀಸರು ಮತ್ತು ಎನ್ಐಎ ಅಧಿಕಾರಿಗಳಿಗೆ ಸಾಥ್ ನೀಡಲಿದ್ದೇವೆ ಎಂದು ವಿಶ್ವ ಹಿಂದು ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹೇಳಿದ್ದಾರೆ.
ಆರೋಪಿಯ ಫೋಟೋವನ್ನು ಈಗಾಗಲೇ ಎನ್ಐಎ ಅಧಿಕಾರಿಗಳು ಬಿಡುಗಡೆ ಮಾಡಿದ್ದಾರೆ. ಬಳ್ಳಾರಿ, ಭಟ್ಕಳಕ್ಕೆ ಹೋಗಿದ್ದಾನೆ, ಅಲ್ಲಿನ ಮಸೀದಿಗಳಿಗೆ ಹೋಗಿದ್ದಾನೆ ಎಂಬುದನ್ನು ಪತ್ತೆ ಮಾಡಿದ್ದಾರೆ. ಹೀಗಾಗಿ ಭಟ್ಕಳ ಸೇರಿದಂತೆ ರಾಜ್ಯದೆಲ್ಲೆಡೆ ಮಸೀದಿ, ಮದ್ರಸಾಗಳಿಗೆ ದಾಳಿ ನಡೆಸಬೇಕು. ದಾಳಿ ನಡೆಸಿದರೆ ಆರೋಪಿ ಕುರಿತು ಮಾಹಿತಿ ಸಿಗಬಹುದು. ಅದಕ್ಕಾಗಿ ವಿಶ್ವ ಹಿಂದು ಪರಿಷತ್ತಿನಿಂದ ಪೊಲೀಸರಿಗೆ ಆಗ್ರಹ ಮಾಡುತ್ತಿದ್ದೇವೆ ಎಂದು ಶರಣ್ ಪಂಪ್ವೆಲ್ ಹೇಳಿದ್ದಾರೆ.
ಭಟ್ಕಳದಲ್ಲಿ ಭಯೋತ್ಪಾದಕರಿಗೆ ನಂಟು ಇರುವುದು ಬಹಳಷ್ಟು ಬಾರಿ ಸಾಬೀತಾಗಿದೆ. ಮದ್ರಸಾಗಳು ಭಯೋತ್ಪಾದಕರಿಗೆ ಪೂರಕವಾಗುವ ಶಿಕ್ಷಣ ನೀಡುತ್ತಿದ್ದಾರೆಂಬ ಅಂಶವೂ ಹಲವು ಬಾರಿ ಪತ್ತೆಯಾಗಿದೆ. ಈ ಕಾರಣಕ್ಕೆ ಮದ್ರಸಾಗಳು ಭಯೋತ್ಪಾದಕರ ತಾಣಗಳಾಗುತ್ತಿವೆ. ನಾವು ಆರೋಪಿ ಪತ್ತೆಗಾಗಿ ಎಲ್ಲ ರೀತಿಯ ಸಹಕಾರ ನೀಡುತ್ತೇವೆ. ನಮ್ಮ ಸೋಶಿಯಲ್ ಮೀಡಿಯಾ ಪೇಜ್ ಗಳಲ್ಲಿ ಆರೋಪಿ ಫೋಟೋ ಪ್ರಕಟಿಸಿ ಪತ್ತೆಗೆ ಸಹಕಾರ ನೀಡುತ್ತೇವೆ. ಆರೋಪಿ ರಾಜ್ಯದ ಹಲವು ಕಡೆ ಸರಕಾರಿ ಬಸ್ಸುಗಳಲ್ಲಿ ಓಡಾಡಿರುವ ಬಗ್ಗೆ ಸಿಸಿಟಿವಿ ಚಿತ್ರಗಳನ್ನು ಪತ್ತೆ ಮಾಡಿದ್ದಾರೆ. ಇದರಿಂದಾಗಿ ಆರೋಪಿ ರಾಜ್ಯದಲ್ಲೇ ಇರುವ ಸಾಧ್ಯತೆಯಿದೆ. ನಾವು ದೇಶಾದ್ಯಂತ ನಮ್ಮ ನೆಟ್ವರ್ಕ್ ಆಧರಿಸಿ ಆರೋಪಿ ಪತ್ತೆಗಾಗಿ ಹುಡುಕಾಟ ನಡೆಸುತ್ತೇವೆ ಎಂದವರು ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ.
Mangalore Vhp Sharan Pumpwell, says officals should raid Mosques and Madrasas to find Bangalore Rameshwaram Cafe blast terrorist and for this we will help NIA and police officlas he added.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm