ಬ್ರೇಕಿಂಗ್ ನ್ಯೂಸ್
10-03-24 10:40 pm Mangalore Correspondent ಕರಾವಳಿ
ಮಂಗಳೂರು, ಮಾ.10: ಬೆಂಗಳೂರಿನ ರಾಮೇಶ್ವರ ಕೆಫೆಯಲ್ಲಿ ನಡೆದ ಸ್ಫೋಟದ ಸಂಬಂಧ ವಿಹೆಚ್ಪಿ ಮುಖಂಡ ಶರಣ್ ಪಂಪ್ವೆಲ್, ಮದರಸಾಗಳ ಮೇಲೆ ಆರೋಪ ಹೊರಿಸಿ ಬಾಲಿಶ ಹೇಳಿಕೆ ನೀಡಿರುವುದು ಖಂಡನೀಯ. ಮದರಸಾಗಳಲ್ಲಿ ಹುಡುಕಿದರೆ ಬಾಂಬ್ ಸ್ಫೋಟಿಸಿದ ಉಗ್ರನ ಮಾಹಿತಿ ಸಿಗಬಹುದು ಎಂದು ಹೇಳುವ ಶರಣ್ ಪಂಪ್ವೆಲ್ಗೆ ಆ ಬಗ್ಗೆ ನಿಖರ ಮಾಹಿತಿ ಇದ್ದರೆ ತನಿಖಾ ತಂಡಕ್ಕೆ ದಾಖಲೆ ಸಮೇತ ಮಾಹಿತಿ ಒದಗಿಸಲಿ. ಅದು ಬಿಟ್ಟು ಬಾಂಬ್ ಸ್ಫೋಟದ ಪ್ರಕರಣದಲ್ಲಿ ರಾಜಕೀಯ ಲಾಭಕ್ಕಾಗಿ ಒಂದು ಸಮುದಾಯದ ಮೇಲೆ ಸುಳ್ಳಾರೋಪ ಹೊರಿಸಿ ಕೋಮು ಪ್ರಚೋದನೆ ಮಾಡುವ ಕೆಲಸ ಮಾಡಬಾರದು ಎಂದು ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಅಧ್ಯಕ್ಷ ಕೆ.ಕೆ ಶಾಹುಲ್ ಹಮೀದ್ ಹೇಳಿದ್ದಾರೆ.
ಮದರಸಾಗಳಲ್ಲಿ ಕಲಿತವರು ಎಲ್ಲಿ ಯಾವಾಗ ಬಾಂಬ್ ಸ್ಫೋಟ ಮಾಡಿದ್ದಾರೆ? ಯಾವ ಮೌಲ್ವಿಗಳು ಮದರಸಾಗಳಲ್ಲಿ ಭಯೋತ್ಪಾದನೆ ಕಲಿಸಿಕೊಡುತ್ತಿದ್ದಾರೆ? ಯಾವ ಮದರಸಾ ಭಯೋತ್ಪಾದನೆಯ ತಾಣವಾಗಿದೆ ಎಂದು ಶರಣ್ ಪಂಪ್ವೆಲ್ ದಾಖಲೆ ನೀಡಬೇಕು. ಮದರಸಾಗಳು ಶಾಂತಿ ಸಾಮರಸ್ಯ ಕಲಿಸಿಕೊಡುವ ತಾಣಗಳೇ ಹೊರತು ಭಯೋತ್ಪಾದನೆಯ ತಾಣಗಳಲ್ಲ, ಮದರಸಾಗಳಲ್ಲಿ ಕಲಿತವರು ಮತ್ತು ಕಲಿಸಿಕೊಟ್ಟ ಮೌಲ್ವಿಗಳು ಈ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಹುತಾತ್ಮರಾದ ಚರಿತ್ರೆಯುಳ್ಳವರು. ಶರಣ್ ಪಂಪ್ವೆಲ್ ಪ್ರತಿನಿಧಿಸುವ ಸಂಘಟನೆಯವರು ಈ ದೇಶದ ಸ್ವಾತಂತ್ರ್ಯಕ್ಕೆ ವಿರುದ್ಧವಾಗಿದ್ದು ಬ್ರಿಟೀಷರ ಸೇವೆ ಮಾಡಿದವರು. ಕಳೆದ ಮೂರು ದಶಕಗಳಲ್ಲಿ ಈ ದೇಶದಲ್ಲಿ ಹಲವು ಭಯೋತ್ಪಾದನಾ ಕೃತ್ಯ ಎಸಗಿರುವ ಚರಿತ್ರೆಯೂ ಅವರಿಗಿದೆ.

ದೇಶದಲ್ಲಿ ನಡೆದಿರುವ ಹಲವು ಬಾಂಬ್ ಸ್ಫೋಟ ಪ್ರಕರಣಗಳಲ್ಲಿ ಸಂಘಪರಿವಾರಕ್ಕೆ ಸೇರಿದವರು ಸಿಕ್ಕಿಬಿದ್ದಿದ್ದಾರೆ. ಅಜ್ಮೀರ್ ಸ್ಫೋಟ, ಮಾಲೇಂಗಾವ್ ಸ್ಫೋಟ, ಸಂಜೋತಾ ರೈಲು ಸ್ಫೋಟ, ಮೆಕ್ಕಾ ಮಸೀದಿ ಸ್ಫೋಟ ಸೇರಿದಂತೆ ಈ ದೇಶದಲ್ಲಿ ನಡೆದ ಹಲವು ಬಾಂಬ್ ಸ್ಫೋಟಗಳಲ್ಲಿ ಸಂಘಪರಿವಾರಕ್ಕೆ ಸೇರಿದವರು ಆರೋಪಿಗಳಾಗಿದ್ದಾರೆ. ಕೇರಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಬಾಂಬ್ ತಯಾರಿಸುವ ವೇಳೆ ಬಾಂಬ್ ಸ್ಫೋಟಗೊಂಡು ಸಂಘ ಪರಿವಾರದ ಸದಸ್ಯರು ಗಾಯಗೊಂಡ ಮತ್ತು ಸಾವನ್ನಪ್ಪಿರುವ ಉದಾಹರಣೆಗಳಿವೆ. ದೇಶದಲ್ಲಿ ಸಂಭವಿಸಿರುವ ಬಾಂಬ್ ಸ್ಫೋಟದ ಪ್ರಕರಣದಲ್ಲಿ ಭಾಗಿಯಾಗಿರುವ 10 ಮಂದಿಗೆ ಆರ್ಎಸ್ಎಸ್ ಜೊತೆ ಸಂಪರ್ಕ ಇದೆ ಎಂದು 2013ರಲ್ಲಿ ಗೃಹ ಇಲಾಖೆಯ ಕಾರ್ಯದರ್ಶಿಯಾಗಿದ್ದ ಆರ್.ಕೆ ಸಿಂಗ್ ( ಸದ್ಯ ಕೇಂದ್ರ ಸಚಿವ) ಹೇಳಿದ್ದರು. ಆರ್ಎಸ್ಎಸ್ನವರ ಬಾಂಬ್ ತಯಾರಿಕೆ ಮತ್ತು ಸ್ಫೋಟದ ಬಗ್ಗೆ ಆರ್ಎಸ್ಎಸ್ ಕಾರ್ಯಕರ್ತನಾಗಿದ್ದ ಯಶ್ವಂತ್ ಶಿಂಧೆ ಎಂಬವರು ಕೋರ್ಟ್ಗೆ ಅಫಿಡವಿಟ್ ಸಲ್ಲಿಸಿದ್ದರು.
ಬಾಂಬ್ ಸ್ಫೋಟ ಪ್ರಕರಣಗಳಲ್ಲಿ ಆರೋಪಿಗಳಾಗಿರುವ ಸಂಘಪರಿವಾರದವರು ಮದರಸಾಗಳಲ್ಲಿ ಕಲಿತು ಬಂದವರಲ್ಲ. ಸದಾ ದ್ವೇಷ ಭಾಷಣ ಮಾಡುತ್ತಾ ಕಡಿ ಬಡಿ ಹೊಡಿ ಕೊಚ್ಚಿ ಕೊಲ್ಲಿ ಎಂದು ಪ್ರಚೋದನೆ ಮಾಡಿ ಸಮಾಜದಲ್ಲಿ ಭಯ ಉತ್ಪಾದಿಸುವ ಶರಣ್ ಪಂಪ್ವೆಲ್ ಮದರಸಾದಲ್ಲಿ ಕಲಿತವರಲ್ಲ. ಅವರೆಲ್ಲ ಶಾಖೆಯಲ್ಲಿ ಕಲಿತು ಬಂದವರು. ಹೀಗಾಗಿ ಶಾಖೆಗಳಲ್ಲಿ ಹುಡುಕಿದರೆ ಹಲವು ಉಗ್ರರು ಪತ್ತೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ಕೆಫೆ ಸ್ಫೋಟದ ಸಂಬಂಧ ಮದರಸಾಗಳ ಮೇಲೆ ಸುಳ್ಳಾರೋಪ ಮಾಡಿರುವ ಶರಣ್ ಪಂಪ್ವೆಲ್ಗೆ ಸಮಾಜದಲ್ಲಿ ಕ್ಷೋಭೆಯುಂಟುಮಾಡುವ ದುರುದ್ದೇಶ ಇದೆ. ಹೀಗಾಗಿ ಶರಣ್ ಪಂಪ್ವೆಲ್ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಸರ್ಕಾರಕ್ಕೆ ಮನವಿ ಮಾಡುತ್ತಿದ್ದೇನೆ ಎಂಬುದಾಗಿ ಶಾಹುಲ್ ಹಮೀದ್ ಪತ್ರಿಕಾ ಹೇಳಿಕೆ ನೀಡಿದ್ದಾರೆ.
Cafe blast case Sharan Pumpwell Mangalore statement on Mosques sparks controversy, Slams congress minority president shahul Hameed.
10-11-25 02:58 pm
HK News Desk
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
10-11-25 03:04 pm
HK News Desk
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm