ಬ್ರೇಕಿಂಗ್ ನ್ಯೂಸ್
11-03-24 08:26 pm Mangalore Correspondent ಕರಾವಳಿ
ಮಂಗಳೂರು, ಮಾ.11: ಬಿಲ್ಲವ ನಾಯಕರು ಯಾವುದೇ ಪಕ್ಷದಲ್ಲಿದ್ದರೂ ಸಂಕೋಚ, ಹಿಂಜರಿಕೆ ಇಲ್ಲದೆ ಬೆಂಬಲಿಸಿ ಎಂದು ಶಾಸಕ ಉಮಾನಾಥ್ ಕೋಟ್ಯಾನ್ ಬಿಲ್ಲವ ಸಮುದಾಯಕ್ಕೆ ಕರೆ ನೀಡಿದ್ದಾರೆ.
ಭಾನುವಾರ ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲದ ಸಮಾವೇಶದಲ್ಲಿ ಮಾತನಾಡಿದ ಉಮಾನಾಥ್ ಕೋಟ್ಯಾನ್, ಇತರೇ ಸಮುದಾಯದ ನಾಯಕರಿಗೆ ಇಲ್ಲದ ಹಿಂಜರಿಕೆ ಬಿಲ್ಲವ ಸಮುದಾಯಕ್ಕಿದೆ, ಅದಕ್ಕಾಗಿ ಬಿಲ್ಲವ ಸಮುದಾಯ ಸಮಾಜದಲ್ಲಿ ಬಹಳಷ್ಟು ಹಿಂದುಳಿದಿದೆ. ಬಿಲ್ಲವ ನಾಯಕರು ಯಾರೇ ನಿಂತರೂ ಪಕ್ಷ ಭೇದ ಮರೆತು ಬೆಂಬಲ ನೀಡಬೇಕಾಗಿದೆ. ಕೇವಲ ನೈತಿಕ ಬೆಂಬಲ ಅಲ್ಲ, ಹಣಕಾಸು ಬೆಂಬಲವನ್ನೂ ನೀಡಬೇಕಾಗಿದೆ ಎಂದಿದ್ದಾರೆ.
ಚುನಾವಣೆ ಎದುರಿಸುವ ಬಿಲ್ಲವ ಅಭ್ಯರ್ಥಿಗಳು ಯಾವ ಪಕ್ಷದಲ್ಲಿದ್ದರೂ, ಪಕ್ಷ ಯಾವುದಾದರೂ ಪರವಾಗಿಲ್ಲ. ಬಿಲ್ಲವ ಅಭ್ಯರ್ಥಿಗಳನ್ನ ಗೆಲ್ಲಿಸಿ ಆಗ ಮಾತ್ರ ಸಮುದಾಯ ಬಲಿಷ್ಟವಾಗುತ್ತೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಸೋಲು, ಉಳ್ಳಾಲದಲ್ಲಿ ಬಿಲ್ಲವ ನಾಯಕ ಸತೀಶ್ ಕುಂಪಲ ಸೋಲಿನ ಬಗ್ಗೆ ಉಲ್ಲೇಖಿಸಿದ ಉಮಾನಾತ್ ಕೋಟ್ಯಾನ್, ಈ ಜಿಲ್ಲೆಯಲ್ಲಿ ಬಿಲ್ಲವರು ಅತಿ ಹೆಚ್ಚು ಇದ್ದಾರೆ. ಆದರೂ ಬಿಲ್ಲವ ಅಭ್ಯರ್ಥಿ ಸೋಲುತ್ತಾರೆ ಯಾಕೆಂದು ಆತ್ಮ ವಿಮರ್ಶೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ಬಿಲ್ಲವ ಅಭ್ಯರ್ಥಿಗಳಿಗೆ ಬೆಂಬಲ ಕೊಡೋದಕ್ಕೆ ನಿಮಗೆ ಧೈರ್ಯ ಬರೋದಿಲ್ಲ. ಉಮಾನಾಥ್ ಕೋಟ್ಯಾನ್ ಹತ್ರ ಮಾತನಾಡಿದ್ರೆ ನನ್ನ ಪಕ್ಷದವರು ಏನಾದ್ರೂ ಹೇಳ್ತಾರಾ ಎಂಬ ಭಯ ಇದೆ. ಕಾಂಗ್ರೆಸ್ನ ವಿನಯ ಕುಮಾರ್ ಸೊರಕೆ ಹತ್ರ ಮಾತನಾಡಿದ್ರೆ ಏನಾದರೂ ನಮಗೆ ತೊಂದರೆಯಾಗುತ್ತಾ ಎಂಬ ಭಯ ಇದೆ. ಇಂತಹ ಹಿಂಜರಿಕೆ ಇಟ್ಟುಕೊಂಡರೆ ಬಿಲ್ಲವ ಸಮಾಜ ಕಟ್ಟಲು ಹೇಗೆ ಸಾಧ್ಯ? ಬಿಲ್ಲವ ಸಮಾಜದವರಿಗೆ ಯಾಕೆ ಈ ಹಿಂಜರಿಕೆ ? ಚುನಾವಣೆ ಎದುರಿಸುವ ನಮ್ಮ ಜನಪ್ರತಿನಿಧಿಗಳಿಗೆ ಬಿಲ್ಲವ ಸಮಾಜ ಎಷ್ಟು ನೈತಿಕ ಬೆಂಬಲ ನೀಡುತ್ತೆ ಅನ್ನೋದು ಮುಖ್ಯ. ಯಾವುದೇ ರಾಜಕೀಯ ಪಕ್ಷವಿರಲಿ, ಬಿಲ್ಲವ ಅಭ್ಯರ್ಥಿಗಳಿಗೆ ಬೆಂಬಲ ನೀಡಬೇಕು. ಅದರಿಂದ ಸಮಾಜಕ್ಕೆ ಒಳಿತಾಗುತ್ತದೆ ಎಂದು ಹೇಳಿದ್ದಾರೆ.
ಉಮಾನಾಥ ಕೋಟ್ಯಾನ್ ಬಿಜೆಪಿ ಶಾಸಕರಾಗಿದ್ದರೂ ಚುನಾವಣೆ ಸಂದರ್ಭದಲ್ಲಿ ಈ ರೀತಿಯ ಹೇಳಿಕೆ ನೀಡಿರುವುದು ಚರ್ಚೆಗೆ ಗ್ರಾಸವಾಗಿಸಿದೆ.
Support Billava candidates, don't discriminate them says Umanatha Kotian in Mangalore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm