ಬ್ರೇಕಿಂಗ್ ನ್ಯೂಸ್
11-03-24 08:26 pm Mangalore Correspondent ಕರಾವಳಿ
ಮಂಗಳೂರು, ಮಾ.11: ಬಿಲ್ಲವ ನಾಯಕರು ಯಾವುದೇ ಪಕ್ಷದಲ್ಲಿದ್ದರೂ ಸಂಕೋಚ, ಹಿಂಜರಿಕೆ ಇಲ್ಲದೆ ಬೆಂಬಲಿಸಿ ಎಂದು ಶಾಸಕ ಉಮಾನಾಥ್ ಕೋಟ್ಯಾನ್ ಬಿಲ್ಲವ ಸಮುದಾಯಕ್ಕೆ ಕರೆ ನೀಡಿದ್ದಾರೆ.
ಭಾನುವಾರ ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲದ ಸಮಾವೇಶದಲ್ಲಿ ಮಾತನಾಡಿದ ಉಮಾನಾಥ್ ಕೋಟ್ಯಾನ್, ಇತರೇ ಸಮುದಾಯದ ನಾಯಕರಿಗೆ ಇಲ್ಲದ ಹಿಂಜರಿಕೆ ಬಿಲ್ಲವ ಸಮುದಾಯಕ್ಕಿದೆ, ಅದಕ್ಕಾಗಿ ಬಿಲ್ಲವ ಸಮುದಾಯ ಸಮಾಜದಲ್ಲಿ ಬಹಳಷ್ಟು ಹಿಂದುಳಿದಿದೆ. ಬಿಲ್ಲವ ನಾಯಕರು ಯಾರೇ ನಿಂತರೂ ಪಕ್ಷ ಭೇದ ಮರೆತು ಬೆಂಬಲ ನೀಡಬೇಕಾಗಿದೆ. ಕೇವಲ ನೈತಿಕ ಬೆಂಬಲ ಅಲ್ಲ, ಹಣಕಾಸು ಬೆಂಬಲವನ್ನೂ ನೀಡಬೇಕಾಗಿದೆ ಎಂದಿದ್ದಾರೆ.
ಚುನಾವಣೆ ಎದುರಿಸುವ ಬಿಲ್ಲವ ಅಭ್ಯರ್ಥಿಗಳು ಯಾವ ಪಕ್ಷದಲ್ಲಿದ್ದರೂ, ಪಕ್ಷ ಯಾವುದಾದರೂ ಪರವಾಗಿಲ್ಲ. ಬಿಲ್ಲವ ಅಭ್ಯರ್ಥಿಗಳನ್ನ ಗೆಲ್ಲಿಸಿ ಆಗ ಮಾತ್ರ ಸಮುದಾಯ ಬಲಿಷ್ಟವಾಗುತ್ತೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಸೋಲು, ಉಳ್ಳಾಲದಲ್ಲಿ ಬಿಲ್ಲವ ನಾಯಕ ಸತೀಶ್ ಕುಂಪಲ ಸೋಲಿನ ಬಗ್ಗೆ ಉಲ್ಲೇಖಿಸಿದ ಉಮಾನಾತ್ ಕೋಟ್ಯಾನ್, ಈ ಜಿಲ್ಲೆಯಲ್ಲಿ ಬಿಲ್ಲವರು ಅತಿ ಹೆಚ್ಚು ಇದ್ದಾರೆ. ಆದರೂ ಬಿಲ್ಲವ ಅಭ್ಯರ್ಥಿ ಸೋಲುತ್ತಾರೆ ಯಾಕೆಂದು ಆತ್ಮ ವಿಮರ್ಶೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ಬಿಲ್ಲವ ಅಭ್ಯರ್ಥಿಗಳಿಗೆ ಬೆಂಬಲ ಕೊಡೋದಕ್ಕೆ ನಿಮಗೆ ಧೈರ್ಯ ಬರೋದಿಲ್ಲ. ಉಮಾನಾಥ್ ಕೋಟ್ಯಾನ್ ಹತ್ರ ಮಾತನಾಡಿದ್ರೆ ನನ್ನ ಪಕ್ಷದವರು ಏನಾದ್ರೂ ಹೇಳ್ತಾರಾ ಎಂಬ ಭಯ ಇದೆ. ಕಾಂಗ್ರೆಸ್ನ ವಿನಯ ಕುಮಾರ್ ಸೊರಕೆ ಹತ್ರ ಮಾತನಾಡಿದ್ರೆ ಏನಾದರೂ ನಮಗೆ ತೊಂದರೆಯಾಗುತ್ತಾ ಎಂಬ ಭಯ ಇದೆ. ಇಂತಹ ಹಿಂಜರಿಕೆ ಇಟ್ಟುಕೊಂಡರೆ ಬಿಲ್ಲವ ಸಮಾಜ ಕಟ್ಟಲು ಹೇಗೆ ಸಾಧ್ಯ? ಬಿಲ್ಲವ ಸಮಾಜದವರಿಗೆ ಯಾಕೆ ಈ ಹಿಂಜರಿಕೆ ? ಚುನಾವಣೆ ಎದುರಿಸುವ ನಮ್ಮ ಜನಪ್ರತಿನಿಧಿಗಳಿಗೆ ಬಿಲ್ಲವ ಸಮಾಜ ಎಷ್ಟು ನೈತಿಕ ಬೆಂಬಲ ನೀಡುತ್ತೆ ಅನ್ನೋದು ಮುಖ್ಯ. ಯಾವುದೇ ರಾಜಕೀಯ ಪಕ್ಷವಿರಲಿ, ಬಿಲ್ಲವ ಅಭ್ಯರ್ಥಿಗಳಿಗೆ ಬೆಂಬಲ ನೀಡಬೇಕು. ಅದರಿಂದ ಸಮಾಜಕ್ಕೆ ಒಳಿತಾಗುತ್ತದೆ ಎಂದು ಹೇಳಿದ್ದಾರೆ.
ಉಮಾನಾಥ ಕೋಟ್ಯಾನ್ ಬಿಜೆಪಿ ಶಾಸಕರಾಗಿದ್ದರೂ ಚುನಾವಣೆ ಸಂದರ್ಭದಲ್ಲಿ ಈ ರೀತಿಯ ಹೇಳಿಕೆ ನೀಡಿರುವುದು ಚರ್ಚೆಗೆ ಗ್ರಾಸವಾಗಿಸಿದೆ.
Support Billava candidates, don't discriminate them says Umanatha Kotian in Mangalore.
10-11-25 02:58 pm
HK News Desk
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
10-11-25 03:04 pm
HK News Desk
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm