ಬ್ರೇಕಿಂಗ್ ನ್ಯೂಸ್
11-03-24 08:26 pm Mangalore Correspondent ಕರಾವಳಿ
ಮಂಗಳೂರು, ಮಾ.11: ಬಿಲ್ಲವ ನಾಯಕರು ಯಾವುದೇ ಪಕ್ಷದಲ್ಲಿದ್ದರೂ ಸಂಕೋಚ, ಹಿಂಜರಿಕೆ ಇಲ್ಲದೆ ಬೆಂಬಲಿಸಿ ಎಂದು ಶಾಸಕ ಉಮಾನಾಥ್ ಕೋಟ್ಯಾನ್ ಬಿಲ್ಲವ ಸಮುದಾಯಕ್ಕೆ ಕರೆ ನೀಡಿದ್ದಾರೆ.
ಭಾನುವಾರ ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲದ ಸಮಾವೇಶದಲ್ಲಿ ಮಾತನಾಡಿದ ಉಮಾನಾಥ್ ಕೋಟ್ಯಾನ್, ಇತರೇ ಸಮುದಾಯದ ನಾಯಕರಿಗೆ ಇಲ್ಲದ ಹಿಂಜರಿಕೆ ಬಿಲ್ಲವ ಸಮುದಾಯಕ್ಕಿದೆ, ಅದಕ್ಕಾಗಿ ಬಿಲ್ಲವ ಸಮುದಾಯ ಸಮಾಜದಲ್ಲಿ ಬಹಳಷ್ಟು ಹಿಂದುಳಿದಿದೆ. ಬಿಲ್ಲವ ನಾಯಕರು ಯಾರೇ ನಿಂತರೂ ಪಕ್ಷ ಭೇದ ಮರೆತು ಬೆಂಬಲ ನೀಡಬೇಕಾಗಿದೆ. ಕೇವಲ ನೈತಿಕ ಬೆಂಬಲ ಅಲ್ಲ, ಹಣಕಾಸು ಬೆಂಬಲವನ್ನೂ ನೀಡಬೇಕಾಗಿದೆ ಎಂದಿದ್ದಾರೆ.
ಚುನಾವಣೆ ಎದುರಿಸುವ ಬಿಲ್ಲವ ಅಭ್ಯರ್ಥಿಗಳು ಯಾವ ಪಕ್ಷದಲ್ಲಿದ್ದರೂ, ಪಕ್ಷ ಯಾವುದಾದರೂ ಪರವಾಗಿಲ್ಲ. ಬಿಲ್ಲವ ಅಭ್ಯರ್ಥಿಗಳನ್ನ ಗೆಲ್ಲಿಸಿ ಆಗ ಮಾತ್ರ ಸಮುದಾಯ ಬಲಿಷ್ಟವಾಗುತ್ತೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಸೋಲು, ಉಳ್ಳಾಲದಲ್ಲಿ ಬಿಲ್ಲವ ನಾಯಕ ಸತೀಶ್ ಕುಂಪಲ ಸೋಲಿನ ಬಗ್ಗೆ ಉಲ್ಲೇಖಿಸಿದ ಉಮಾನಾತ್ ಕೋಟ್ಯಾನ್, ಈ ಜಿಲ್ಲೆಯಲ್ಲಿ ಬಿಲ್ಲವರು ಅತಿ ಹೆಚ್ಚು ಇದ್ದಾರೆ. ಆದರೂ ಬಿಲ್ಲವ ಅಭ್ಯರ್ಥಿ ಸೋಲುತ್ತಾರೆ ಯಾಕೆಂದು ಆತ್ಮ ವಿಮರ್ಶೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ಬಿಲ್ಲವ ಅಭ್ಯರ್ಥಿಗಳಿಗೆ ಬೆಂಬಲ ಕೊಡೋದಕ್ಕೆ ನಿಮಗೆ ಧೈರ್ಯ ಬರೋದಿಲ್ಲ. ಉಮಾನಾಥ್ ಕೋಟ್ಯಾನ್ ಹತ್ರ ಮಾತನಾಡಿದ್ರೆ ನನ್ನ ಪಕ್ಷದವರು ಏನಾದ್ರೂ ಹೇಳ್ತಾರಾ ಎಂಬ ಭಯ ಇದೆ. ಕಾಂಗ್ರೆಸ್ನ ವಿನಯ ಕುಮಾರ್ ಸೊರಕೆ ಹತ್ರ ಮಾತನಾಡಿದ್ರೆ ಏನಾದರೂ ನಮಗೆ ತೊಂದರೆಯಾಗುತ್ತಾ ಎಂಬ ಭಯ ಇದೆ. ಇಂತಹ ಹಿಂಜರಿಕೆ ಇಟ್ಟುಕೊಂಡರೆ ಬಿಲ್ಲವ ಸಮಾಜ ಕಟ್ಟಲು ಹೇಗೆ ಸಾಧ್ಯ? ಬಿಲ್ಲವ ಸಮಾಜದವರಿಗೆ ಯಾಕೆ ಈ ಹಿಂಜರಿಕೆ ? ಚುನಾವಣೆ ಎದುರಿಸುವ ನಮ್ಮ ಜನಪ್ರತಿನಿಧಿಗಳಿಗೆ ಬಿಲ್ಲವ ಸಮಾಜ ಎಷ್ಟು ನೈತಿಕ ಬೆಂಬಲ ನೀಡುತ್ತೆ ಅನ್ನೋದು ಮುಖ್ಯ. ಯಾವುದೇ ರಾಜಕೀಯ ಪಕ್ಷವಿರಲಿ, ಬಿಲ್ಲವ ಅಭ್ಯರ್ಥಿಗಳಿಗೆ ಬೆಂಬಲ ನೀಡಬೇಕು. ಅದರಿಂದ ಸಮಾಜಕ್ಕೆ ಒಳಿತಾಗುತ್ತದೆ ಎಂದು ಹೇಳಿದ್ದಾರೆ.
ಉಮಾನಾಥ ಕೋಟ್ಯಾನ್ ಬಿಜೆಪಿ ಶಾಸಕರಾಗಿದ್ದರೂ ಚುನಾವಣೆ ಸಂದರ್ಭದಲ್ಲಿ ಈ ರೀತಿಯ ಹೇಳಿಕೆ ನೀಡಿರುವುದು ಚರ್ಚೆಗೆ ಗ್ರಾಸವಾಗಿಸಿದೆ.
Support Billava candidates, don't discriminate them says Umanatha Kotian in Mangalore.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm