ಬ್ರೇಕಿಂಗ್ ನ್ಯೂಸ್
12-03-24 06:48 pm Mangalore Correspondent ಕರಾವಳಿ
ಮಂಗಳೂರು, ಮಾ.12: ಬಿಲ್ಲವ ಅಭ್ಯರ್ಥಿಗಳನ್ನು ಪಕ್ಷ ಭೇದ ನೋಡದೆ ಸಮುದಾಯದ ಜನರು ಗೆಲ್ಲಿಸಬೇಕು ಎಂಬ ಹೇಳಿಕೆ ವಿವಾದಕ್ಕೆ ತಿರುಗುತ್ತಲೇ ಮೂಡುಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಸ್ಪಷ್ಟನೆ ನೀಡಿದ್ದಾರೆ.
ಮೂಲ್ಕಿಯಲ್ಲಿ ರಾಷ್ಟ್ರೀಯ ಬಿಲ್ಲವ ಮಹಾಮಂಡಲದ ವತಿಯಿಂದ ಕಾರ್ಯಕ್ರಮ ನಡೆದಿತ್ತು. ಅಲ್ಲಿ ಕುಳಿತಿದ್ದ ಇಬ್ಬರು ಬಿಲ್ಲವ ಮಹಾಮಂಡಲದ ನಾಯಕರಿಗೆ ನನ್ನ ಪ್ರಶ್ನೆ ಇತ್ತು. ನೀವು ಸಮುದಾಯದ ಅಭ್ಯರ್ಥಿಗಳಿಗೆ ನೈತಿಕ ಬೆಂಬಲ ನೀಡಿದ್ದೀರಾ ಎಂದು ಪ್ರಶ್ನೆ ಮಾಡಿದ್ದೆ. ಸುನಿಲ್ ಕುಮಾರ್, ನಾನು, ಸತೀಶ್ ಕುಂಪಲ ಹೆಸರನ್ನು ಉಲ್ಲೇಖಿಸಿ ಪ್ರಶ್ನೆಯನ್ನು ಮಾಡಿದ್ದೆ. ಆ ಸಂದರ್ಭದಲ್ಲಿ ರಕ್ಷಿತ್ ಶಿವರಾಂ ಹೆಸರೂ ಬಂದಿತ್ತು.
ಆದರೆ ಈ ಹೇಳಿಕೆಯನ್ನು ವಿಘ್ನ ಸಂತೋಷಿಗಳು ತಿರುಚಿದ್ದಾರೆ. ನನ್ನ ಪೂರ್ತಿ ಮಾತನ್ನು ಕೇಳಬೇಕು ನೀವು. ನಾನು ಬಿಲ್ಲವ ಸಮುದಾಯಕ್ಕೆ ಕರೆ ಕೊಟ್ಟು ಮಾತಾಡಿಯೇ ಇಲ್ಲ. ನಾನು ಮತ್ತು ಹರೀಶ್ ಪೂಂಜ ಅಣ್ಣ ತಮ್ಮಂದಿರು. ಬೆಳ್ತಂಗಡಿಯಲ್ಲಿ ರಕ್ಷಿತ್ ಶಿವರಾಂ ಗೆಲ್ಲಿಸಬೇಕಿತ್ತು ಎಂದು ನಾನೆಲ್ಲೂ ಹೇಳಿಲ್ಲ. ನಾವು ಬಿಲ್ಲವರು ಚುನಾವಣೆಗೆ ನಿಂತಾಗ ನೀವು ಬಿಲ್ಲವ ಮಹಾಮಂಡಲ ನೈತಿಕ ಬೆಂಬಲ ಕೊಟ್ಟಿದ್ದೀರಾ ಎಂದು ಅಲ್ಲಿದ್ದವರಿಗೆ ಪ್ರಶ್ನೆ ಮಾಡಿದ್ದೇ ವಿನಾ ಬೇರಾವುದೇ ಮಾತು ಹೇಳಿಲ್ಲ. ನನಗೆ ಚುನಾವಣೆ ಸಂದರ್ಭದಲ್ಲಿ ಹಿಂದು, ಕ್ರಿಸ್ತಿಯನ್, ಮುಸ್ಲಿಂ, ಬಂಟ, ಬಿಲ್ಲವ, ಕುಲಾಲ್ ಎಲ್ಲರೂ ಬೆಂಬಲ ಕೊಟ್ಟಿದ್ದಾರೆ. ಹಣಕಾಸಿನ ಬೆಂಬಲವನ್ನೂ ಕೊಟ್ಟಿದ್ದಾರೆ.
ನಾನೊಬ್ಬ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತ. ಬಿಜೆಪಿಯ ನಿಷ್ಠಾವಂತ ಕೆಲಸಗಾರನಾಗಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವುದೇ ನನ್ನ ಗುರಿ. ಆ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದು ಉಮಾನಾಥ ಕೋಟ್ಯಾನ್ ಮಾಧ್ಯಮದ ಪ್ರಶ್ನೆಗೆ ಸ್ಪಷ್ಟನೆ ನೀಡಿದ್ದಾರೆ. ಬಿಲ್ಲವ ಮಹಾಮಂಡಲದ ಕಾರ್ಯಕ್ರಮದಲ್ಲಿ ಉಮಾನಾಥ ಕೋಟ್ಯಾನ್ ಆಡಿದ್ದ ಮಾತು ಭಾರೀ ವಿವಾದಕ್ಕೆ ಕಾರಣವಾಗಿತ್ತು.
Mangalore My statement has been turned By Vighna Santoshi says Umanatha Kotian. Umanatha Kotian statement to support billavas had sparked controversy in Mangalore.
13-07-26 02:50 pm
HK News Staffer
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
13-07-26 02:54 pm
HK News Staffer
ಮಂಗಳೂರಿನಲ್ಲಿ ಮತ್ತಷ್ಟು ಬಾಂಗ್ಲಾ ನಿವಾಸಿಗಳ ಬೇಟೆ ;...
13-07-26 11:51 am
ತಮ್ಮ ನೈಜ ಗುರುತನ್ನು ಮರೆಮಾಚಿ ಪಡಿತರ ಚೀಟಿ, ವೋಟರ್...
12-07-26 10:13 pm
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm