ಬ್ರೇಕಿಂಗ್ ನ್ಯೂಸ್
12-03-24 07:13 pm Mangalore Correspondent ಕರಾವಳಿ
ಮಂಗಳೂರು, ಮಾ.12: ಸಹ ಪ್ರಾಧ್ಯಾಪಕರಾಗಿ ಸೇವಾ ಪದೋನ್ನತಿಯನ್ನು ಹೊಂದಿದ ಸಹಾಯಕ ಪ್ರಾಧ್ಯಾಪಕರಿಗೆ ಅವರ ಅರ್ಹತಾ ದಿನಾಂಕದಿಂದಲೇ ಆರ್ಥಿಕ ಸೌಲಭ್ಯ ನೀಡುವಂತೆ ಕರ್ನಾಟಕ ಆಡಳಿತ ನ್ಯಾಯ ಮಂಡಳಿ ಆದೇಶ ನೀಡಿದೆ. ಇದು ಸ್ವಾಗತಾರ್ಹ ನಡೆಯಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಪ್ರಾಧ್ಯಾಪಕರಿಗೆ ಅವರ ಅರ್ಹತಾ ದಿನಾಂಕದಿಂದಲೇ ಆರ್ಥಿಕ ಸೌಲಭ್ಯವನ್ನು ನೀಡಲು ಸೂಕ್ತ ಕ್ರಮ ವಹಿಸಬೇಕೆಂದು ಮಂಗಳೂರು ವಿಶ್ವವಿದ್ಯಾನಿಲಯ ಮಾಜಿ ಸಿಂಡಿಕೇಟ್ ಸದಸ್ಯ ಡಾ. ಎಸ್.ಆರ್ ಹರೀಶ್ ಆಚಾರ್ಯ ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.
ಕರ್ನಾಟಕ ಆಡಳಿತ ನ್ಯಾಯ ಮಂಡಳಿ ನೀಡಿರುವ ಈ ತೀರ್ಮಾನವು ಅತ್ಯಂತ ಸಮಂಜಸವಾಗಿದೆ. ಇದು ಸಹಜ ನ್ಯಾಯದ ತತ್ವವನ್ನು ಪಾಲಿಸುತ್ತದೆ.
ವಿಶ್ವವಿದ್ಯಾನಿಲಯ ಧನ ಸಹಾಯ ಆಯೋಗದ ವೃತ್ತಿ ಪ್ರಗತಿ ಯೋಜನೆ ನಿಯಮಾವಳಿ ಅನುಸಾರ ಅರ್ಹತೆಯನ್ನು ಹೊಂದಿರುವ ಸರ್ಕಾರಿ ಕಾಲೇಜುಗಳು ಹಾಗೂ ಅನುದಾನಿತ ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು, ದೈಹಿಕ ಶಿಕ್ಷಣ ನಿರ್ದೇಶಕರು, ಗ್ರಂಥಪಾಲಕರು ಮತ್ತು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ನಿಯಮಾವಳಿಯಂತೆ ತಾಂತ್ರಿಕ ಶಿಕ್ಷಣ ಇಲಾಖೆಯಡಿ ಬರುವ ಎಲ್ಲ ಸರಕಾರಿ ಹಾಗೂ ಅನುದಾನಿತ ಕಾಲೇಜುಗಳ ಅರ್ಹ ಪ್ರಾಧ್ಯಾಪಕರುಗಳಿಗೆ ಇದು ಅನ್ವಯವಾಗುತ್ತದೆ. ಆದುದರಿಂದ ಇಂತಹ ಅರ್ಹ ಪ್ರಾಧ್ಯಾಪಕರುಗಳಿಗೆ ಅವರು ಅರ್ಹತೆ ಹೊಂದಿದ ದಿನಾಂಕದಿಂದಲೇ ಆರ್ಥಿಕ ಸೌಲಭ್ಯಗಳನ್ನು ನೀಡಲು ಸೂಕ್ತ ಕ್ರಮವಿಡುವಂತೆ ಸಂಬಂಧಪಟ್ಟವರಿಗೆ ನಿರ್ದೇಶನವನ್ನು ನೀಡಬೇಕೆಂದು ಅವರು ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.
Financial facility to the promoted Assistant Professors from the date of eligibility is needed says Harish Acharya in Mangalore
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm