ಬ್ರೇಕಿಂಗ್ ನ್ಯೂಸ್
12-03-24 09:07 pm Mangalore Correspondent ಕರಾವಳಿ
ಮಂಗಳೂರು, ಮಾ.12: ರಾಜ್ಯದಲ್ಲಿ ಹೆಚ್ಚಿನೆಲ್ಲ ನಿಗಮಗಳಿಗೆ ಅಧ್ಯಕ್ಷರ ನೇಮಕ ಮಾಡಲಾಗಿದ್ದರೂ, ಕರಾವಳಿಯಲ್ಲಿ ತುಳುವರನ್ನು ಪ್ರತಿನಿಧಿಸುವ ತುಳು ಸಾಹಿತ್ಯ ಅಕಾಡೆಮಿಗೆ ಇನ್ನೂ ಅಧ್ಯಕ್ಷರ ನೇಮಕ ಮಾಡಿಲ್ಲ. ಇದೀಗ ಗುರುಪುರ ಬ್ಲಾಕ್ ಕಾಂಗ್ರೆಸಿನಲ್ಲಿ ಪ್ರಮುಖರಾಗಿದ್ದುಕೊಂಡು ಜಲ್ಲಿ ಕ್ರಶರ್ ಉದ್ಯಮ ನಡೆಸುತ್ತಿರುವ ವ್ಯಕ್ತಿಯೊಬ್ಬರನ್ನು ತುಳು ಅಕಾಡೆಮಿಗೆ ಅಧ್ಯಕ್ಷರನ್ನಾಗಿ ಮಾಡಲಾಗುತ್ತೆ ಎನ್ನುವ ಮಾತು ಕೇಳಿಬಂದಿದ್ದು, ಈ ಬಗ್ಗೆ ತಿಳಿದ ತುಳು ಸಂಘಟನೆಯ ಪ್ರಮುಖರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ನಾವು ತುಳು ಭಾಷೆ, ಸಂಸ್ಕೃತಿ, ಸಾಹಿತ್ಯ, ಸಂಶೋಧನೆ ಬಗ್ಗೆ ಅಪಾರ ಕಾಳಜಿ ಹೊಂದಿದ್ದು, ತುಳು ಸಾಹಿತ್ಯ ಅಕಾಡೆಮಿಗೆ ಅಧ್ಯಕ್ಷರ ನೇಮಕಾತಿ ಸಂಬಂಧಿಸಿದಂತೆ ನಡೆಯುತ್ತಿರುವ ವಿದ್ಯಮಾನ ಕಂಡು ಆತಂಕಗೊಂಡಿದ್ದೇವೆ. ತುಳು ಭಾಷೆ, ಸಂಸ್ಕೃತಿಗೆ ಯಾವುದೇ ಕೊಡುಗೆ ನೀಡದ ವ್ಯಕ್ತಿಯನ್ನು ಅಕಾಡೆಮಿ ಅಧ್ಯಕ್ಷ ಪದವಿಗೆ ನೇಮಕ ಮಾಡುತ್ತಿರುವುದಕ್ಕೆ ನಮ್ಮ ಆಕ್ಷೇಪ ಇದೆ. ಈ ರೀತಿಯ ಅನಪೇಕ್ಷಿತ ವ್ಯಕ್ತಿಯನ್ನು ನೇಮಕ ಮಾಡುವುದರಿಂದ ನಿಮ್ಮ ಸರಕಾರದ ಘನತೆಗೆ ಕುಂದು ಬರಲಿದೆ. ಭಾಷಾ ಅಕಾಡೆಮಿಗೆ ಆಯಾ ಕ್ಷೇತ್ರದ ಸಾಧಕರನ್ನು, ಅಧ್ಯಯನ ಆಸಕ್ತರನ್ನು, ಬರಹಗಾರರನ್ನು ನೇಮಿಸಬೇಕೆಂದು ನಾವು ಆಗ್ರಹಿಸುತ್ತೇವೆ ಎಂದು ಮಂಗಳೂರಿನ ತುಳು ಸಂಘಟಕರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
ಇತ್ತೀಚೆಗೆ ಕರಾವಳಿಗೆ ಸಂಬಂಧಪಟ್ಟ ಮೂಡಾ, ಗೇರು ಅಭಿವೃದ್ಧಿ ನಿಗಮ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಸೇರಿ ಹಲವು ನಿಗಮಗಳಿಗೆ ಅಧ್ಯಕ್ಷರ ನೇಮಕ ಆಗಿತ್ತು. ಈ ಬಾರಿ ತುಳು ಅಕಾಡೆಮಿ ಅಧ್ಯಕ್ಷರಾಗುವುದಕ್ಕೆ ಹತ್ತಕ್ಕೂ ಹೆಚ್ಚು ಮಂದಿ ಆಸಕ್ತಿ ಹೊಂದಿದ್ದಾರೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಕಾಂಗ್ರೆಸ್ ಯಾರನ್ನು ಶಿಫಾರಸು ಮಾಡುತ್ತೋ ಅವರನ್ನು ಆಯ್ಕೆ ಮಾಡುವುದು ವಾಡಿಕೆ. ಗುರುಪುರ ಬ್ಲಾಕ್ ಕಾಂಗ್ರೆಸಿನ ಪ್ರಮುಖರನ್ನು ಮಾಜಿ ಸಚಿವರೊಬ್ಬರು ಶಿಫಾರಸು ಮಾಡಿದ್ದಾರೆ ಎನ್ನಲಾಗುತ್ತಿದ್ದು, ತುಳು ಭಾಷೆಯ ಬಗ್ಗೆ ಗಂಧಗಾಳಿ ತಿಳಿದಿಲ್ಲದ ವ್ಯಕ್ತಿಯನ್ನು ಭಾಷಾ ಅಕಾಡೆಮಿಗೆ ಅಧ್ಯಕ್ಷರನ್ನಾಗಿ ಮಾಡಿದರೆ ಅಕಾಡೆಮಿಗೇನು ಪ್ರಯೋಜನ ಎಂದು ತುಳು ಸಾಹಿತ್ಯಾಸಕ್ತರು ಪ್ರಶ್ನೆ ಮಾಡಿದ್ದಾರೆ.
Mangalore Tulu academy president post still vacant, Tulu activist write letter to cm siddaramaiah.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm