ಬ್ರೇಕಿಂಗ್ ನ್ಯೂಸ್
13-03-24 04:22 pm Mangalore Correspondent ಕರಾವಳಿ
ಪುತ್ತೂರು, ಮಾ.13: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ಬಳಿಯ ಮಾರನಹಳ್ಳಿ ತಿರುವಿನಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದ್ದು ಸದ್ರಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.
ಬುಧವಾರ ರಾತ್ರಿ 12 ಗಂಟೆಯ ವರೆಗೆ ಎಲ್ಲಾ ರೀತಿಯ ವಾಹನಗಳನ್ನು ಶಿರಾಡಿ ಘಾಟ್ ರಸ್ತೆಯಲ್ಲಿ ನಿಷೇಧಿಸಿ ಹಾಸನ ಜಿಲ್ಲೆಯ ಜಿಲ್ಲಾಧಿಕಾರಿ ಸತ್ಯಭಾಮಾ ಆದೇಶ ಮಾಡಿದ್ದಾರೆ. ಇಂದು ಬೆಳಗ್ಗೆ ಮಂಗಳೂರಿನಿಂದ ಹಾಸನದತ್ತ ತೆರಳುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿದ್ದು ಗ್ಯಾಸ್ ಸೋರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ವಾಹನ ಸಂಚಾರ ನಿಷೇಧಿಸಿದ್ದಾರೆ.
ಹಾಸನ ಸಕಲೇಶಪುರ ಮೂಲಕ ಮಂಗಳೂರಿಗೆ ತೆರಳುವ ವಾಹನಗಳು ಹಾನುಬಾಳು, ಮೂಡಿಗೆರೆ, ಚಾರ್ಮಾಡಿ ಘಾಟ್ ಮೂಲಕ ಸಂಚರಿಸಲು ಬದಲಿ ಮಾರ್ಗ ಸೂಚಿಸಲಾಗಿದೆ. ಅಲ್ಲದೆ, ಹಾಸನ, ಬೇಲೂರು, ಚಾರ್ಮಾಡಿ ಘಾಟ್ ಮೂಲಕವೂ ಸಂಚರಿಸಬಹುದು. ಮಂಗಳೂರಿನಿಂದ ಬೆಂಗಳೂರಿಗೆ ತೆರಳುವ ವಾಹನಗಳು ಸುಳ್ಯ, ಸಂಪಾಜೆ, ಮಡಿಕೇರಿ ಮೂಲಕ ಸಂಚರಿಸಲು ಡಿಸಿ ಆದೇಶ ಮಾಡಿದ್ದಾರೆ.
ತಿರುವಿನಲ್ಲಿ ಟ್ಯಾಂಕರ್ ಉರುಳಿ ಬಿದ್ದು ಗ್ಯಾಸ್ ಸೋರಿಕೆಯಾಗಿದೆ. ಇದರಿಂದಾಗಿ ಆಸುಪಾಸಿನಲ್ಲಿ ಬೆಂಕಿ ಹಚ್ಚದಂತೆ ಸೂಚಿಸಲಾಗಿದೆ. ಎರಡೂ ಕಡೆಯಲ್ಲಿ ಕಿಮೀ ಉದ್ದಕ್ಕೂ ವಾಹನ ನಿಂತಿದ್ದು ಪೂರ್ತಿ ಬ್ಲಾಕ್ ಆಗಿದೆ. ಮಂಗಳೂರಿನಿಂದ ತಜ್ಞರು ಬಂದು ಟ್ಯಾಂಕರ್ ತೆರವುಗೊಳಿಸಲು ಯತ್ನ ಮಾಡುತ್ತಿದ್ದಾರೆ.
A gas tanker overturned at Maranahalli turn near Shiradi Ghat on the Mangaluru-Bengaluru National Highway, disrupting vehicular traffic on the Sadri Ghat road.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm