ಬ್ರೇಕಿಂಗ್ ನ್ಯೂಸ್
14-03-24 09:15 pm Mangalore Correspondent ಕರಾವಳಿ
ಮಂಗಳೂರು, ಮಾ.14: ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾದ ಮೊದಲ ದಿನವೇ ಕ್ಯಾ. ಬೃಜೇಶ್ ಚೌಟ ಹಲವು ದೇವಸ್ಥಾನ, ದೈವಸ್ಥಾನಗಳಿಗೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದಿದ್ದಾರೆ.
ಕುದ್ರೋಳಿ ಗೋಕರ್ಣನಾಥ ಕ್ಷೇತ್ರ, ಮಂಗಳೂರಿನ ಕಾಳಿಕಾಂಬ ದೇವಸ್ಥಾನ, ರಥಬೀದಿ ವೆಂಕಟರಮಣ ದೇವಸ್ಥಾನ, ಕದ್ರಿ ಮಂಜುನಾಥ ದೇವಸ್ಥಾನ, ಮಂಗಳಾದೇವಿ, ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ, ಕೊಡೆತ್ತೂರು ಅರಸು ಕುಂಜರಾಯ ದೈವಸ್ಥಾನ, ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.






ಇದಲ್ಲದೆ, ಬೃಜೇಶ್ ಚೌಟ ತಾನು ಪ್ರತಿನಿಧಿಸುವ ರಥಬೀದಿ ಮತಗಟ್ಟೆ ವ್ಯಾಪ್ತಿಯ ಪಕ್ಷದ ಬೂತ್ ಅಧ್ಯಕ್ಷರ ಮನೆಗೆ ಭೇಟಿಯಿತ್ತು ಕಾರ್ಯಕರ್ತರನ್ನು ಹುರಿದುಂಬಿಸುವ ಕೆಲಸ ಮಾಡಿದ್ದಾರೆ. ಇದರ ಬೆನ್ನಲ್ಲೇ ಬೃಜೇಶ್ ಚೌಟ ಅವರ ಮಾರ್ಗದರ್ಶಕರೂ ಆದ ನಿಟ್ಟೆ ಯುನಿವರ್ಸಿಟಿ ಚಾನ್ಸಲರ್ ವಿನಯ ಹೆಗ್ಡೆ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ.
ಮಂಗಳೂರಿನಲ್ಲಿ ಕಾಲಿಗೆ ಚಕ್ರ ಕಟ್ಟಿದಂತೆ ತಿರುಗಿದ ಚೌಟರು, ಮಾಜಿ ಸಚಿವ ಕೃಷ್ಣ ಪಾಲೆಮಾರ್ ಮತ್ತು ಮಾಜಿ ಶಾಸಕ ಯೋಗೀಶ್ ಭಟ್ ಮನೆಗೆ ಭೇಟಿ ಕೊಟ್ಟು ಆಶೀರ್ವಾದ ಪಡೆದಿದ್ದಾರೆ. ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಮತ್ತು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಮನೆಗೂ ತೆರಳಿ ಲೋಕಸಭೆ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ಸಹಕಾರ ಕೋರಿದ್ದಾರೆ. ಸಂಜೆಯ ವೇಳೆಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಮನೆಗೆ ತೆರಳಿ ಆಶೀರ್ವಾದ ಪಡೆದಿದ್ದಲ್ಲದೆ, ಚುನಾವಣೆ ಎದುರಿಸುವ ಬಗ್ಗೆ ಮಾತುಕತೆ ನಡೆಸಿದ್ದಾರೆ.
ಸಂಜೆಯಾಗುತ್ತಿದ್ದಂತೆ ಪುತ್ತೂರಿಗೆ ತೆರಳಿದ್ದು ಭಾರೀ ಸಂಖ್ಯೆಯಲ್ಲಿ ಸೇರಿದ ಪಕ್ಷದ ಕಾರ್ಯಕರ್ತರು ಬೃಜೇಶ್ ಚೌಟ ಅವರನ್ನು ಸ್ವಾಗತಿಸಿದ್ದಾರೆ. ಸಿಹಿ ತಿಂಡಿ ಹಂಚಿ ಸಂಭ್ರಮಿಸಿದ್ದಾರೆ. ಇದೇ ವೇಳೆ, ಪುತ್ತೂರು ಸೈನಿಕರ ಭವನಕ್ಕೆ ತೆರಳಿ ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದ್ದಾರೆ. ಇದೇ ವೇಳೆ, ಮಾಧ್ಯಮದವರು ಪುತ್ತಿಲ ಪರಿವಾರದ ಕುರಿತು ಪ್ರಶ್ನೆ ಮಾಡಿದ್ದಕ್ಕೆ, ಈಗಾಗಲೇ ಜಿಲ್ಲಾಧ್ಯಕ್ಷರು ಆ ಬಗ್ಗೆ ಹೇಳಿದ್ದಾರೆ. ಮಾತುಕತೆಯ ಎಲ್ಲ ದ್ವಾರಗಳು ತೆರೆದಿವೆ. ಜಿಲ್ಲಾಧ್ಯಕ್ಷರೇ ನಮಗೆಲ್ಲ ಸುಪ್ರೀಂ. ಅವರು ಹೇಳಿದಾಗೆ ನಾವೆಲ್ಲ ಕೆಲಸ ಮಾಡೋದು ಅಂತ ಹೇಳಿದರು.
In an exclusive interview with India Today's Shiv Aroor, BJP's Dakshina Kannada Lok Sabha candidate Capt. Brijesh Chowta said that his objective is to work towards Prime Minister Narendra Modi's Viksit Bharat Sankalp.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm