ಬ್ರೇಕಿಂಗ್ ನ್ಯೂಸ್
17-03-24 11:01 pm Mangalore Correspondent ಕರಾವಳಿ
ಪುತ್ತೂರು, ಮಾ.17: ಪುತ್ತೂರಿನ ಕಾಂಗ್ರೆಸ್ ಶಾಸಕ ಅಶೋಕ್ ರೈ 1400 ಕೋಟಿ ಅನುದಾನ ತಂದಿದ್ದೇನೆಂದು ಹೇಳಿದ್ದನ್ನು ಪ್ರಶ್ನಿಸಿ ಬಿಜೆಪಿ ಕಾರ್ಯಕರ್ತ ಜಯಾನಂದ ಬಂಗೇರ ತನ್ನ ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕಿದ್ದರು. ಫೇಸ್ಬುಕ್ ಪೋಸ್ಟ್ ಹಾಕಿದ್ದರಿಂದ ಕೆರಳಿದ ಕಾಂಗ್ರೆಸ್ ಕಾರ್ಯಕರ್ತರು ಪುತ್ತೂರಿನ ಜಯಾನಂದ ಬಂಗೇರ ಮನೆಗೆ ತೆರಳಿ ಗೂಂಡಾ ವರ್ತನೆ ತೋರಿದ್ದಾರೆ.


ಕಾಂಗ್ರೆಸ್ ಕಾರ್ಯಕರ್ತರು ದೊಡ್ಡ ಫ್ಲೆಕ್ಸ್ ರೆಡಿ ಮಾಡಿಸಿ, ಅದರಲ್ಲಿ ಅನುದಾನದ ಬಗ್ಗೆ ಬರೆದು ಜಯಾನಂದ ಬಂಗೇರ ಮನೆಯ ಮುಂದೆ ತಂದಿದ್ದರು. ಅಲ್ಲದೆ, ಅದರಲ್ಲಿ ಒಬ್ಬಾತ ಜಯಾನಂದ ಬಂಗೇರ ಮತ್ತು ಮನೆಯವರನ್ನು ಅವಾಚ್ಯ ಪದಗಳಲ್ಲಿ ನಿಂದಿಸಿದ್ದಾನೆ. ಫೇಸ್ಬುಕ್ ನಲ್ಲಿ ಪ್ರಶ್ನೆ ಮಾಡಿದ್ದೀಯಲ್ಲಾ.. 1400 ಕೋಟಿ ಅನುದಾನ ಏನೆಲ್ಲ ಅನ್ನುವುದು ಇಲ್ಲಿ ಇದೆ, ಬಾ ನೋಡು ಅಂತ ಹೇಳಿ ನಿಂದಿಸಿದ್ದಾರೆ.
ಈ ವೇಳೆ, ಮನೆಯವರು ನೀವು ಮನೆಗೆ ಬಂದು ಯಾಕೆ ಪ್ರಶ್ನೆ ಮಾಡಬೇಕು. ಫೇಸ್ಬುಕ್ ನಲ್ಲಿ ಪ್ರಶ್ನೆ ಮಾಡಿದ್ದರೆ, ಅದರಲ್ಲೇ ಉತ್ತರ ನೀಡಬಹುದಿತ್ತಲ್ಲಾ ಎಂದು ಮರು ಪ್ರಶ್ನೆ ಹಾಕಿದ್ದಾರೆ. ಇದೇ ವಿಚಾರದಲ್ಲಿ ಎರಡೂ ಕಡೆಯವರು ಪರಸ್ಪರ ಮಾತಿನ ಚಕಮಕಿ ನಡೆಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರ ಗೂಂಡಾ ವರ್ತನೆಯನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದು, ಅದರ ವಿಡಿಯೋವನ್ನು ಬಿಜೆಪಿ ಕಾರ್ಯಕರ್ತರು ಫೇಸ್ಬುಕ್ ನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ವೈರಲ್ ಆಗಿದ್ದು, ಕಾಂಗ್ರೆಸ್ ಕಾರ್ಯಕರ್ತರ ನಡೆಯ ಬಗ್ಗೆ ಭಾರೀ ಟೀಕೆ ಕೇಳಿಬಂದಿದೆ.
Mangalore Congress leaders threaten Puttur BJP member for questioning MLA Ahok Rai 1400 fund.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm