ಬ್ರೇಕಿಂಗ್ ನ್ಯೂಸ್
18-03-24 11:05 am Mangalore Correspondent ಕರಾವಳಿ
ಉಳ್ಳಾಲ, ಮಾ.18: ಬೈಕ್ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದ ಘಟನೆ ತಲಪಾಡಿಯಲ್ಲಿ ನಡೆದಿದೆ.
ತಲಪಾಡಿ ಹಳೆಯ ಬಸ್ಸು ತಂಗುದಾಣ ಬಳಿಯ ನಿವಾಸಿ ರಾಜೇಶ್ ಶೆಟ್ಟಿ(49) ಮೃತ ವ್ಯಕ್ತಿ. ರಾಜೇಶ್ ಅವರಿಗೆ ತಲಪಾಡಿ ಹಳೆ ಬಸ್ ತಂಗುದಾಣದ ಬಳಿ ಬೇಕರಿ ಇದ್ದು, ಎದುರು ಭಾಗದ ಹೆದ್ದಾರಿ ಬದಿಯಲ್ಲೇ ಮನೆ ಹೊಂದಿದ್ದಾರೆ. ಭಾನುವಾರ ತಲಪಾಡಿ ದೇವಿಪುರದಲ್ಲಿ ರಥೋತ್ಸವ ಇದ್ದ ಹಿನ್ನೆಲೆ ರಾಜೇಶ್ ಅವರು ಮನೆಗೆ ಬಂದಿದ್ದ ನೆಂಟರನ್ನ ಉಪಚರಿಸಿ ಮಧ್ಯಾಹ್ನ ವೇಳೆ ಬೇಕರಿಗೆ ತೆರಳುತ್ತಿದ್ದರು. ಹೆದ್ದಾರಿ ದಾಟಲು ನಿಂತಿದ್ದ ವೇಳೆ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಧಾವಿಸಿ ಬಂದಿದ್ದ ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಸ್ತೆಗೆಸೆಯಲ್ಪಟ್ಟ ರಾಜೇಶ್ ತಲೆಗೆ ಗಂಭೀರ ಗಾಯವಾಗಿತ್ತು. ತಕ್ಷಣ ಅವರನ್ನ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ.
ಮೃತ ರಾಜೇಶ್ ಅವರಿಗೆ ಪತ್ನಿ ಮತ್ತು ಇಬ್ಬರು ಪುತ್ರಿಯರಿದ್ದಾರೆ. ಹಿರಿಯ ಮಗಳು ಪದವಿ ಶಿಕ್ಷಣ ಪಡೆಯುತ್ತಿದ್ದು, ಕಿರಿಯ ಮಗಳು ಎಸ್ಸೆಸೆಲ್ಸಿ ಓದುತ್ತಿದ್ದಾರೆ. ಈಕೆ ಇದೇ ಮಾ.25 ರಂದು ನಡೆಯಲಿರುವ ಬೋರ್ಡ್ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದಳು. ರಾಜೇಶ್ ಅವರ ಅಕಾಲಿಕ ಸಾವಿನಿಂದ ಪತ್ನಿ , ಮಕ್ಕಳು ಆಘಾತಕ್ಕೊಳಗಾಗಿದ್ದಾರೆ.
ಮೃತ ರಾಜೇಶ್ ತಲಪಾಡಿ ವೀರಾಂಜನೇಯ ವ್ಯಾಯಾಮ ಶಾಲೆಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಬಂಟರ ಸಂಘದಲ್ಲೂ ಸಕ್ರಿಯರಾಗಿದ್ದರು. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಘಟನೆಗೆ ಕಾರಣನಾದ ಬೈಕ್ ಸವಾರ ಮಹಮ್ಮದ್ ಸೊಹೈಲ್ ನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
Mangalore Talapady Accident, 49 year old man dies after bike rams over pedestrian. The deceased has been identified as Rajesh Shetty.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm