ಬ್ರೇಕಿಂಗ್ ನ್ಯೂಸ್
18-03-24 02:55 pm Mangalore Correspondent ಕರಾವಳಿ
ಮಂಗಳೂರು, ಮಾ.18: ದಕ್ಷಿಣ ಕನ್ನಡ – ಕೊಡಗು ಗಡಿಭಾಗದಲ್ಲಿ ನಕ್ಸಲರು ಕಾಣಿಸಿಕೊಂಡಿದ್ದಾರೆ ಎನ್ನಲಾಗುತ್ತಿದ್ದು, ನಕ್ಸಲ್ ನಿಗ್ರಹ ಪಡೆಯ ಸಿಬಂದಿ ಕೂಂಬಿಂಗ್ ಆರಂಭಿಸಿದ್ದಾರೆ.
ಸುಳ್ಯ ತಾಲೂಕಿನ ಕಡಮಕಲ್, ಕೂಜಿಮಲೆ, ಉಪ್ಪುಕಳ ಭಾಗದಲ್ಲಿ ಕೆಲವು ದಿನಗಳ ಹಿಂದೆ ನಕ್ಸಲರು ಕಾಣಿಸಿಕೊಂಡಿದ್ದಾಗಿ ಸ್ಥಳೀಯರು ಮಾಹಿತಿ ನೀಡಿದ್ದು, ಇದರ ಬೆನ್ನಲ್ಲೇ ಎಎನ್ಎಫ್ ಪಡೆಗಳು ಕಾಡಂಚಿನ ಗ್ರಾಮಗಳಲ್ಲಿ ಸಂಚಾರ ನಡೆಸಿವೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ- ಕೊಡಗು ಗಡಿಭಾಗದಲ್ಲಿ ಪೊಲೀಸರ್ ಅಲರ್ಟ್ ಆಗಿದ್ದಾರೆ.


ಕೆಲವು ದಿನಗಳ ಹಿಂದೆ ಕಡಮಕಲ್ ಬಳಿಯ ಕೂಜಿಮಲೆ ರಬ್ಬರ್ ಎಸ್ಟೇಟ್ ಪರಿಸರದಲ್ಲಿ ನಕ್ಸಲರು ಕಾಣಿಸಿಕೊಂಡಿದ್ದರು. ಆನಂತರ, ಕೂಜಿಮಲೆ ಮತ್ತು ಕಲ್ಮಕಾರ್ ಗ್ರಾಮದಲ್ಲಿ ರಸ್ತೆಗೆ ಬಂದಿದ್ದ ಎಂಟು ಮಂದಿಯಿದ್ದ ನಕ್ಸಲರು ಅಲ್ಲಿ ಕೆಲವು ದಿನಸಿ ವಸ್ತುಗಳನ್ನು ಖರೀದಿಸಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ. ನಕ್ಸಲರು ಈ ವೇಳೆ ಶಸ್ತ್ರಸಜ್ಜಿತರಾಗಿದ್ದರೆಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ನಕ್ಸಲರ ಪತ್ತೆಗಾಗಿ ಕಾರ್ಕಳದಲ್ಲಿದ್ದ ನಕ್ಸಲ್ ನಿಗ್ರಹ ಪಡೆಯ ಸಿಬಂದಿ ದಿಢೀರ್ ಆಗಿ ಕಡಮಕಲ್ ಎಸ್ಟೇಟ್ ಪರಿಸರಕ್ಕೆ ಬಂದಿದ್ದು ಶೋಧ ಕಾರ್ಯಾಚರಣೆ ನಡೆಸಿದೆ.
ಇತ್ತೀಚೆಗಷ್ಟೇ ಉಡುಪಿ ಜಿಲ್ಲೆಯ ಕೊಲ್ಲೂರು ಬಳಿಯ ಅಮಾಸೆಬೈಲು ಭಾಗದಲ್ಲಿ ನಕ್ಸಲರು ಕಾಣಿಸಿದ್ದ ಬಗ್ಗೆ ಸ್ಥಳೀಯರು ಪೊಲೀಸರ ಗಮನಕ್ಕೆ ಬಂದಿದ್ದರು. ಆನಂತರ, ಅಲ್ಲಿಯೂ ಎಎನ್ಎಫ್ ಪಡೆ ಕೂಂಬಿಂಗ್ ಕಾರ್ಯಾಚರಣೆ ನಡೆಸಿತ್ತು. ಆದರೆ, ನಕ್ಸಲರು ಅವರಿಗೆ ಸಿಕ್ಕಿರಲಿಲ್ಲ. ಅಲ್ಲಿದ್ದವರೇ ಈಗ ದಕ್ಷಿಣ ಕನ್ನಡದ ಮೂಲಕ ಕೊಡಗಿನತ್ತ ಚಲಿಸುತ್ತಿದ್ದಾರೆಯೇ ಎನ್ನುವ ಶಂಕೆ ಎದುರಾಗಿದೆ.
Mangalore Naxal combing operations at Sullia after residents see naxal moment.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm