ಬ್ರೇಕಿಂಗ್ ನ್ಯೂಸ್
18-03-24 02:55 pm Mangalore Correspondent ಕರಾವಳಿ
ಮಂಗಳೂರು, ಮಾ.18: ದಕ್ಷಿಣ ಕನ್ನಡ – ಕೊಡಗು ಗಡಿಭಾಗದಲ್ಲಿ ನಕ್ಸಲರು ಕಾಣಿಸಿಕೊಂಡಿದ್ದಾರೆ ಎನ್ನಲಾಗುತ್ತಿದ್ದು, ನಕ್ಸಲ್ ನಿಗ್ರಹ ಪಡೆಯ ಸಿಬಂದಿ ಕೂಂಬಿಂಗ್ ಆರಂಭಿಸಿದ್ದಾರೆ.
ಸುಳ್ಯ ತಾಲೂಕಿನ ಕಡಮಕಲ್, ಕೂಜಿಮಲೆ, ಉಪ್ಪುಕಳ ಭಾಗದಲ್ಲಿ ಕೆಲವು ದಿನಗಳ ಹಿಂದೆ ನಕ್ಸಲರು ಕಾಣಿಸಿಕೊಂಡಿದ್ದಾಗಿ ಸ್ಥಳೀಯರು ಮಾಹಿತಿ ನೀಡಿದ್ದು, ಇದರ ಬೆನ್ನಲ್ಲೇ ಎಎನ್ಎಫ್ ಪಡೆಗಳು ಕಾಡಂಚಿನ ಗ್ರಾಮಗಳಲ್ಲಿ ಸಂಚಾರ ನಡೆಸಿವೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ- ಕೊಡಗು ಗಡಿಭಾಗದಲ್ಲಿ ಪೊಲೀಸರ್ ಅಲರ್ಟ್ ಆಗಿದ್ದಾರೆ.


ಕೆಲವು ದಿನಗಳ ಹಿಂದೆ ಕಡಮಕಲ್ ಬಳಿಯ ಕೂಜಿಮಲೆ ರಬ್ಬರ್ ಎಸ್ಟೇಟ್ ಪರಿಸರದಲ್ಲಿ ನಕ್ಸಲರು ಕಾಣಿಸಿಕೊಂಡಿದ್ದರು. ಆನಂತರ, ಕೂಜಿಮಲೆ ಮತ್ತು ಕಲ್ಮಕಾರ್ ಗ್ರಾಮದಲ್ಲಿ ರಸ್ತೆಗೆ ಬಂದಿದ್ದ ಎಂಟು ಮಂದಿಯಿದ್ದ ನಕ್ಸಲರು ಅಲ್ಲಿ ಕೆಲವು ದಿನಸಿ ವಸ್ತುಗಳನ್ನು ಖರೀದಿಸಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ. ನಕ್ಸಲರು ಈ ವೇಳೆ ಶಸ್ತ್ರಸಜ್ಜಿತರಾಗಿದ್ದರೆಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ನಕ್ಸಲರ ಪತ್ತೆಗಾಗಿ ಕಾರ್ಕಳದಲ್ಲಿದ್ದ ನಕ್ಸಲ್ ನಿಗ್ರಹ ಪಡೆಯ ಸಿಬಂದಿ ದಿಢೀರ್ ಆಗಿ ಕಡಮಕಲ್ ಎಸ್ಟೇಟ್ ಪರಿಸರಕ್ಕೆ ಬಂದಿದ್ದು ಶೋಧ ಕಾರ್ಯಾಚರಣೆ ನಡೆಸಿದೆ.
ಇತ್ತೀಚೆಗಷ್ಟೇ ಉಡುಪಿ ಜಿಲ್ಲೆಯ ಕೊಲ್ಲೂರು ಬಳಿಯ ಅಮಾಸೆಬೈಲು ಭಾಗದಲ್ಲಿ ನಕ್ಸಲರು ಕಾಣಿಸಿದ್ದ ಬಗ್ಗೆ ಸ್ಥಳೀಯರು ಪೊಲೀಸರ ಗಮನಕ್ಕೆ ಬಂದಿದ್ದರು. ಆನಂತರ, ಅಲ್ಲಿಯೂ ಎಎನ್ಎಫ್ ಪಡೆ ಕೂಂಬಿಂಗ್ ಕಾರ್ಯಾಚರಣೆ ನಡೆಸಿತ್ತು. ಆದರೆ, ನಕ್ಸಲರು ಅವರಿಗೆ ಸಿಕ್ಕಿರಲಿಲ್ಲ. ಅಲ್ಲಿದ್ದವರೇ ಈಗ ದಕ್ಷಿಣ ಕನ್ನಡದ ಮೂಲಕ ಕೊಡಗಿನತ್ತ ಚಲಿಸುತ್ತಿದ್ದಾರೆಯೇ ಎನ್ನುವ ಶಂಕೆ ಎದುರಾಗಿದೆ.
Mangalore Naxal combing operations at Sullia after residents see naxal moment.
13-07-26 02:50 pm
HK News Staffer
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
13-07-26 02:54 pm
HK News Staffer
ಮಂಗಳೂರಿನಲ್ಲಿ ಮತ್ತಷ್ಟು ಬಾಂಗ್ಲಾ ನಿವಾಸಿಗಳ ಬೇಟೆ ;...
13-07-26 11:51 am
ತಮ್ಮ ನೈಜ ಗುರುತನ್ನು ಮರೆಮಾಚಿ ಪಡಿತರ ಚೀಟಿ, ವೋಟರ್...
12-07-26 10:13 pm
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm