ಬ್ರೇಕಿಂಗ್ ನ್ಯೂಸ್
18-03-24 10:40 pm Mangalore Correspondent ಕರಾವಳಿ
ಮಂಗಳೂರು, ಮಾ.19: ಮಾಜಿ ಶಾಸಕ ಮೊಯ್ದೀನ್ ಬಾವಾ ಲೋಕಸಭೆ ಚುನಾವಣೆಗೆ ಪಕ್ಷೇತರ ಸ್ಪರ್ಧಿಸಲು ತಯಾರಿ ನಡೆಸಿದ್ದಾರೆ. ಈ ಬಗ್ಗೆ ಮಾ.21ರಂದು ಕಂಕನಾಡಿಯ ಅಲ್ ರಹಬಾ ಸಭಾಂಗಣದಲ್ಲಿ ಅಭಿಮಾನಿಗಳ ಸಭೆ ಕರೆದಿದ್ದಾರೆ. ಬೆಂಬಲಿಗರು ಪಕ್ಷೇತರ ಸ್ಪರ್ಧೆಗೆ ಒತ್ತಾಯಿಸುತ್ತಿದ್ದಾರೆ. ಅದಕ್ಕಾಗಿ ಅಭಿಮಾನಿಗಳ ಸಭೆ ಕರೆದು ಅವರ ನಿರ್ಧಾರದಂತೆ ಮುಂದುವರಿಯುತ್ತೇನೆ ಎಂದು ಮೊಯ್ದೀನ್ ಬಾವಾ ಹೇಳಿದ್ದಾರೆ.
ಕಳೆದ ಅಸೆಂಬ್ಲಿ ಚುನಾವಣ ಸಂದರ್ಭದಲ್ಲಿ ಮಂಗಳೂರು ಉತ್ತರ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಸಿಗದೆ ಮುನಿಸಿಕೊಂಡಿದ್ದ ಬಾವಾ ಜೆಡಿಎಸ್ ಪಕ್ಷದಿಂದ ಸ್ಪರ್ಧೆ ಮಾಡಿದ್ದರು. ಇದೀಗ ಮತ್ತೆ ಕಾಂಗ್ರೆಸ್ ಸೇರಲು ರೆಡಿಯಾಗುತ್ತಿದ್ದಾರೆ. ಮತ್ತೆ ಕಾಂಗ್ರೆಸ್ ಸೇರುತ್ತೀರಾ ಎಂದು ಕೇಳಿದ ಪ್ರಶ್ನೆಗೆ, ಕಾಂಗ್ರೆಸ್ ನಾಯಕರು ಆಹ್ವಾನಿಸಿದರೆ ರೆಡಿ ಇದ್ದೇನೆ ಎಂದಿದ್ದಾರೆ. ನಾಲ್ಕು ಮಕ್ಕಳು ನದಿಗೆ ಬಿದ್ದು ಸಾವನ್ನಪ್ಪಿದಾಗ ನಮ್ಮ ಶಾಸಕರು ಗೃಹ ಸಚಿವರಿಗೆ ಪತ್ರ ಬರೆದು ಪರಿಹಾರಕ್ಕೆ ಆಗ್ರಹಿಸುತ್ತೇನೆ ಎಂದು ಹೇಳಿಕೆ ಕೊಟ್ಟಿದ್ದರು. ಅವರ ಮನೆಗೂ ಭೇಟಿ ಕೊಟ್ಟಿರಲಿಲ್ಲ. ಪರಿಹಾರ ಕೊಡಿಸುವ ಕೆಲಸವನ್ನೂ ಮಾಡಿಲ್ಲ. ನಾನು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಕೊಟ್ಟು ತಲಾ 2 ಲಕ್ಷ ರೂ. ಪರಿಹಾರ ಕೊಡಿಸಿದ್ದೇನೆ. ಕೇವಲ ಹೇಳಿಕೆ ಕೊಟ್ಟರೆ ಪರಿಹಾರ ಸಿಗುವುದಿಲ್ಲ. ಫಾಲೋ ಅಪ್ ಕೆಲಸ ಮಾಡಬೇಕು ಎಂದು ಪರೋಕ್ಷವಾಗಿ ಶಾಸಕ ಭರತ್ ಶೆಟ್ಟಿಗೆ ಟಾಂಗ್ ಇಟ್ಟಿದ್ದಾರೆ.
ನಾಲ್ಕು ಕುಟುಂಬಗಳಲ್ಲಿ ಇಬ್ಬರು ಮಕ್ಕಳಿಗೆ ತಂದೆ ಇರಲಿಲ್ಲ. ಹಿಂದುಗಳ ಬಡ ಕುಟುಂಬದವರು. ವಿಷಯ ತಿಳಿದು ಕೂಡಲೇ ಪರಿಹಾರ ಕೊಡಿಸುವ ಕೆಲಸ ಮಾಡಿದ್ದೇನೆ. ಇದಲ್ಲದೆ, ಚಿಕಿತ್ಸಾ ವೆಚ್ಚ ಕಡಿತಗೊಳಿಸಲು, ಕಷ್ಟದ ಕಾಲದಲ್ಲಿ ಹಲವಾರು ಸಾರ್ವಜನಿಕರು ಫೋನ್ ಕರೆ ಮಾಡುತ್ತಾರೆ. ಅವರೆಲ್ಲರಿಗೂ ಸ್ಪಂದಿಸುತ್ತೇನೆ. ನನಗೆ ಯಾರೂ ಹೈಕಮಾಂಡ್ ಇಲ್ಲ, ನನ್ನ ಫೋನ್ ಮಾತ್ರ ಆಪ್ತಮಿತ್ರ ಎಂದರು. ನೀವು ಜೆಡಿಎಸ್ ನಲ್ಲಿದ್ದೀರಿ ಅಲ್ವಾ, ಬಿಜೆಪಿ ಸಪೋರ್ಟ್ ಮಾಡ್ತೀರಾ ಎಂದು ಕೇಳಿದರೆ, ಬಿಜೆಪಿ ಜೊತೆಗೆ ಕುಮಾರಣ್ಣ ಮೈತ್ರಿ ಮಾಡಿಕೊಂಡಿದ್ದಾರೆ. ಆದರೆ ನನಗೆ ನನ್ನ ಅಭಿಮಾನಿಗಳು, ಬೆಂಬಲಿಗರೇ ನಿರ್ಣಾಯಕ. ಅವರು ಹೇಳಿದಂತೆ ಕೇಳುತ್ತೇನೆ ಎಂದರು.
Mangalore Maiden bava all set to contest as independent candidate for lok sabha elections 2024.
05-02-26 03:11 pm
HK News Desk
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm