ಬ್ರೇಕಿಂಗ್ ನ್ಯೂಸ್
18-03-24 10:40 pm Mangalore Correspondent ಕರಾವಳಿ
ಮಂಗಳೂರು, ಮಾ.19: ಮಾಜಿ ಶಾಸಕ ಮೊಯ್ದೀನ್ ಬಾವಾ ಲೋಕಸಭೆ ಚುನಾವಣೆಗೆ ಪಕ್ಷೇತರ ಸ್ಪರ್ಧಿಸಲು ತಯಾರಿ ನಡೆಸಿದ್ದಾರೆ. ಈ ಬಗ್ಗೆ ಮಾ.21ರಂದು ಕಂಕನಾಡಿಯ ಅಲ್ ರಹಬಾ ಸಭಾಂಗಣದಲ್ಲಿ ಅಭಿಮಾನಿಗಳ ಸಭೆ ಕರೆದಿದ್ದಾರೆ. ಬೆಂಬಲಿಗರು ಪಕ್ಷೇತರ ಸ್ಪರ್ಧೆಗೆ ಒತ್ತಾಯಿಸುತ್ತಿದ್ದಾರೆ. ಅದಕ್ಕಾಗಿ ಅಭಿಮಾನಿಗಳ ಸಭೆ ಕರೆದು ಅವರ ನಿರ್ಧಾರದಂತೆ ಮುಂದುವರಿಯುತ್ತೇನೆ ಎಂದು ಮೊಯ್ದೀನ್ ಬಾವಾ ಹೇಳಿದ್ದಾರೆ.
ಕಳೆದ ಅಸೆಂಬ್ಲಿ ಚುನಾವಣ ಸಂದರ್ಭದಲ್ಲಿ ಮಂಗಳೂರು ಉತ್ತರ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಸಿಗದೆ ಮುನಿಸಿಕೊಂಡಿದ್ದ ಬಾವಾ ಜೆಡಿಎಸ್ ಪಕ್ಷದಿಂದ ಸ್ಪರ್ಧೆ ಮಾಡಿದ್ದರು. ಇದೀಗ ಮತ್ತೆ ಕಾಂಗ್ರೆಸ್ ಸೇರಲು ರೆಡಿಯಾಗುತ್ತಿದ್ದಾರೆ. ಮತ್ತೆ ಕಾಂಗ್ರೆಸ್ ಸೇರುತ್ತೀರಾ ಎಂದು ಕೇಳಿದ ಪ್ರಶ್ನೆಗೆ, ಕಾಂಗ್ರೆಸ್ ನಾಯಕರು ಆಹ್ವಾನಿಸಿದರೆ ರೆಡಿ ಇದ್ದೇನೆ ಎಂದಿದ್ದಾರೆ. ನಾಲ್ಕು ಮಕ್ಕಳು ನದಿಗೆ ಬಿದ್ದು ಸಾವನ್ನಪ್ಪಿದಾಗ ನಮ್ಮ ಶಾಸಕರು ಗೃಹ ಸಚಿವರಿಗೆ ಪತ್ರ ಬರೆದು ಪರಿಹಾರಕ್ಕೆ ಆಗ್ರಹಿಸುತ್ತೇನೆ ಎಂದು ಹೇಳಿಕೆ ಕೊಟ್ಟಿದ್ದರು. ಅವರ ಮನೆಗೂ ಭೇಟಿ ಕೊಟ್ಟಿರಲಿಲ್ಲ. ಪರಿಹಾರ ಕೊಡಿಸುವ ಕೆಲಸವನ್ನೂ ಮಾಡಿಲ್ಲ. ನಾನು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಕೊಟ್ಟು ತಲಾ 2 ಲಕ್ಷ ರೂ. ಪರಿಹಾರ ಕೊಡಿಸಿದ್ದೇನೆ. ಕೇವಲ ಹೇಳಿಕೆ ಕೊಟ್ಟರೆ ಪರಿಹಾರ ಸಿಗುವುದಿಲ್ಲ. ಫಾಲೋ ಅಪ್ ಕೆಲಸ ಮಾಡಬೇಕು ಎಂದು ಪರೋಕ್ಷವಾಗಿ ಶಾಸಕ ಭರತ್ ಶೆಟ್ಟಿಗೆ ಟಾಂಗ್ ಇಟ್ಟಿದ್ದಾರೆ.
ನಾಲ್ಕು ಕುಟುಂಬಗಳಲ್ಲಿ ಇಬ್ಬರು ಮಕ್ಕಳಿಗೆ ತಂದೆ ಇರಲಿಲ್ಲ. ಹಿಂದುಗಳ ಬಡ ಕುಟುಂಬದವರು. ವಿಷಯ ತಿಳಿದು ಕೂಡಲೇ ಪರಿಹಾರ ಕೊಡಿಸುವ ಕೆಲಸ ಮಾಡಿದ್ದೇನೆ. ಇದಲ್ಲದೆ, ಚಿಕಿತ್ಸಾ ವೆಚ್ಚ ಕಡಿತಗೊಳಿಸಲು, ಕಷ್ಟದ ಕಾಲದಲ್ಲಿ ಹಲವಾರು ಸಾರ್ವಜನಿಕರು ಫೋನ್ ಕರೆ ಮಾಡುತ್ತಾರೆ. ಅವರೆಲ್ಲರಿಗೂ ಸ್ಪಂದಿಸುತ್ತೇನೆ. ನನಗೆ ಯಾರೂ ಹೈಕಮಾಂಡ್ ಇಲ್ಲ, ನನ್ನ ಫೋನ್ ಮಾತ್ರ ಆಪ್ತಮಿತ್ರ ಎಂದರು. ನೀವು ಜೆಡಿಎಸ್ ನಲ್ಲಿದ್ದೀರಿ ಅಲ್ವಾ, ಬಿಜೆಪಿ ಸಪೋರ್ಟ್ ಮಾಡ್ತೀರಾ ಎಂದು ಕೇಳಿದರೆ, ಬಿಜೆಪಿ ಜೊತೆಗೆ ಕುಮಾರಣ್ಣ ಮೈತ್ರಿ ಮಾಡಿಕೊಂಡಿದ್ದಾರೆ. ಆದರೆ ನನಗೆ ನನ್ನ ಅಭಿಮಾನಿಗಳು, ಬೆಂಬಲಿಗರೇ ನಿರ್ಣಾಯಕ. ಅವರು ಹೇಳಿದಂತೆ ಕೇಳುತ್ತೇನೆ ಎಂದರು.
Mangalore Maiden bava all set to contest as independent candidate for lok sabha elections 2024.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm