ಬ್ರೇಕಿಂಗ್ ನ್ಯೂಸ್
27-11-20 11:58 pm Mangaluru Correspondent ಕರಾವಳಿ
ಮಂಗಳೂರು, ನ.27: ನಗರದಲ್ಲಿ ಅಪಾರ್ಟ್ಮೆಂಟ್ನ ಆವರಣಗೋಡೆಯಲ್ಲಿ ಉಗ್ರ ಸಂಘಟನೆಗಳ ಪರ ಬರಹ ಪ್ರಕರಣವನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ನಗರದ ಸರ್ಕೀಟ್ ಹೌಸ್ ಮುಂಭಾಗ ಶುಕ್ರವಾರ ಸಂಜೆ ಪ್ರತಿಭಟನೆ ನಡೆಸಿದರು.
ಉಗ್ರರ ಪರ ಬರಹ ಬರೆದರವನ್ನು ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸಿದ ಕಾರ್ಯಕರ್ತರು ದೊಂದಿ ಹಿಡಿದು ದೇಶದ್ರೋಹಿಗಳ ವಿರುದ್ಧ ಘೋಷಣೆ ಕೂಗಿದರು.

ಈ ಸಂದರ್ಭ ಮಾತನಾಡಿದ ಎಬಿವಿಪಿ ನಗರ ಕಾರ್ಯದರ್ಶಿ ಮಣಿಕಂಠ ಕಳಸ, ಪಾಕಿಸ್ತಾನದ ಲಷ್ಕರ್ ಇ ತೊಯ್ಬಾ ಉಗ್ರರ ಕೃತ್ಯದಿಂದ ಮುಂಬೈ ಮಹಾನಗರದಲ್ಲಿ ಸೈನಿಕರು, ಪೊಲೀಸರು ಸೇರಿ ಹಲವಾರು ಮಂದಿ ಮೃತಪಟ್ಟ ದಿನವಾದ ನ.26ರಂದು ದೇಶದ್ರೋಹಿಗಳು ಉಗ್ರರ ಪರ ಬರಹ ಪ್ರಕಟಿಸಿರುವುದು ಖಂಡನೀಯ. ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಬೇಕಾದ ದಿನ ಉಗ್ರರ ಪರ ಗೋಡೆ ಬರಹದ ಮೂಲಕ ದೇಶದ್ರೋಹಿಗಳು ಮಂಗಳೂರಿನ ಶಾಂತಿ ಕದಡುವ ವಿಕೃತಿ ಮೆರೆದಿದ್ದಾರೆ. ಘಟನೆಯ ಹಿಂದೆ ಇರುವವರನ್ನು ತಕ್ಷಣ ಬಂಧಿಸದೇ ಇದ್ದಲ್ಲಿ ಮುಂದೆ ಇಂತಹ ಘಟನೆಗಳು ಮರುಕಳಿಸಿ ದೊಡ್ಡ ಅನಾಹುತವೇ ಸಂಭವಿಸಬಹುದು. ಈ ನಿಟ್ಟಿನಲ್ಲಿ ವಿಶೇಷ ತಂಡ ರಚಿಸಿ ಘಟನೆಗೆ ಕಾರಣರಾದವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಎಬಿವಿಪಿ ರಾಜ್ಯ ಸಹಕಾರ್ಯದರ್ಶಿ ಸಂದೇಶ್ ರೈ ಮಜಕ್ಕಾರ್, ಜಿಲ್ಲಾ ಸಂಚಾಲಕ ಹರ್ಷಿತ್ ಕೊಯ್ಲ, ನಗರ ಸಂಘಟನಾ ಕಾರ್ಯದರ್ಶಿ ಅಜಯ್ ಪ್ರಭು, ರಾಜ್ಯ ಕಾರ್ಯಕಾರಿಣಿ ಸದಸ್ಯ ನಿಷಾನ್ ಆಳ್ವ, ವಿದ್ಯಾರ್ಥಿ ನಾಯಕರಾದ ದಿನೇಶ್, ಅಖಿಲೇಶ್, ಆದಿತ್ಯ ಕೆ.ಆರ್., ಕಿರಣ್, ಸಂತೋಷ್, ಆದಿತ್ಯ ಶೆಟ್ಟಿ, ಕೀರ್ತನ್, ಆಕಾಶ್ ಮುಂತಾದವರು ಉಪಸ್ಥಿತರಿದ್ದರು.
Pro-Terror Graffiti on apartment compound wall in Kadri, ABVP Mangalore held a protest demanding for the quick arrest of the miscreants.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
04-04-26 10:53 pm
HK News Staffer
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm