ಬ್ರೇಕಿಂಗ್ ನ್ಯೂಸ್
20-03-24 11:09 am Mangalore Correspondent ಕರಾವಳಿ
ಮಂಗಳೂರು, ಮಾ.20: ಮಂಗಳೂರಿನಿಂದ ಸರಕು ಹೇರಿಕೊಂಡು ಲಕ್ಷದ್ವೀಪಕ್ಕೆ ಹೊರಟಿದ್ದ ಸರಕು ಹಡಗು ಸಮುದ್ರ ಮಧ್ಯೆ ತಾಂತ್ರಿಕ ತೊಂದರೆಯಿಂದ ಮುಳುಗಡೆಯಾಗಿದ್ದು, ಅದರಲ್ಲಿದ್ದ ಎಂಟು ಮಂದಿ ಸಿಬಂದಿ ಸಮುದ್ರದಲ್ಲಿ ಮೂರು ದಿನಗಳ ಕಾಲ ಅನ್ನ, ನೀರಿಲ್ಲದೆ ಕಳೆದು ಪವಾಡ ಸದೃಶ ಪಾರಾಗಿದ್ದಾರೆ.
ಮಾ.12ರಂದು ತಮಿಳುನಾಡು ಮೂಲದ ಎಂಎಸ್ ವಿ ವರದರಾಜ ಹೆಸರಿನ ಹಡಗು ಮಂಗಳೂರಿನ ಹಳೆ ಬಂದರಿನಿಂದ ಜಲ್ಲಿ ಕಲ್ಲು, ಸಿಮೆಂಟ್, ಮರಳು, ಕಬ್ಬಿಣ ಮತ್ತಿತರ ಮನೆ ನಿರ್ಮಾಣದ ಸಾಮಗ್ರಿಗಳನ್ನು ಹೊತ್ತುಕೊಂಡು ಹೊರಟಿತ್ತು. ಮಾ.13ರಂದು ಹಡಗು ಲಕ್ಷದ್ವೀಪ ತಲುಪಿದ್ದು, ಅಲ್ಲಿನ ಆಂದ್ರೋತ್ ದ್ವೀಪದಲ್ಲಿ ಅರ್ಧದಷ್ಟು ಸಾಮಗ್ರಿ ಖಾಲಿ ಮಾಡಿ ಬಳಿಕ ಅಗತಿ ದ್ವೀಪತ್ತ ಹೊರಟಿತ್ತು. ರಾತ್ರಿ ವೇಳೆ ಸಂಚಾರದ ಬಳಿಕ ಮರುದಿನ ಬೆಳಗ್ಗಿನ ಹೊತ್ತಿಗೆ ಹಡಗಿನ ಎಂಜಿನ್ನಲ್ಲಿ ತಾಂತ್ರಿಕ ತೊಂದರೆ ಎದುರಾಗಿತ್ತು. ಕ್ಯಾಪ್ಟನ್ ಹಾಗೂ ಸಿಬಂದಿ ದುರಸ್ತಿಗೆ ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಈ ಮಧ್ಯೆ ಜೋರಾದ ಗಾಳಿಗೆ ಸಿಲುಕಿ ಹಡಗು ನಿಯಂತ್ರಣ ಕಳಕೊಂಡು ನೀರು ಒಳನುಗ್ಗಲು ಆರಂಭಿಸಿತ್ತು.



ಹಡಗು ಅಪಾಯಕ್ಕೀಡಾಗಿ ಮುಳುಗಲು ಆರಂಭಿಸಿದಾಗ, ಅದರಲ್ಲಿ ಸಣ್ಣ ಬೋಟು ಪಾತಿಯನ್ನು ಬಳಸಿಕೊಂಡು ಹಡಗಿನಲ್ಲಿದ್ದ ಎಂಟು ಮಂದಿ ಸಿಬಂದಿ ಪ್ರಾಣ ರಕ್ಷಣೆಗಾಗಿ ಸಮುದ್ರಕ್ಕೆ ಹಾರಿದ್ದರು. ಇದೇ ವೇಳೆ, ಮಂಗಳೂರು ಕೋಸ್ಟ್ ಗಾರ್ಡ್ ಗೆ ಮಾಹಿತಿ ನೀಡಲಾಗಿತ್ತು. ಕೋಸ್ಟ್ ಗಾರ್ಡ್ ಕಡೆಯಿಂದ ಲಕ್ಷದ್ವೀಪಕ್ಕೆ ಮಾಹಿತಿ ನೀಡಿ, ಮಾರ್ಚ್ 15ರಿಂದ ಎರಡು ದಿನಗಳ ಕಾಲ ಹುಡುಕಾಟ ನಡೆಸಿದರೂ ಹಡಗು ಸಿಬಂದಿಯ ಮಾಹಿತಿ ಸಿಕ್ಕಿರಲಿಲ್ಲ. ಹಡಗಿನಲ್ಲಿ ಕ್ಯಾಪ್ಟನ್ ಭಾಸ್ಕರನ್, ಸಿಬಂದಿ ನಾಗಲಿಂಗಂ, ನಲ್ಲಮುತ್ತು ಗೋಪಾಲ್, ಮಣಿದೇವನ್ ವೇಲು, ವಿಘ್ನೇಶ್, ಅಜಿತ್ ಕುಮಾರ್, ಕುಪ್ಪುರಾಮನ್ ಮತ್ತು ಮುರುಗನ್ ಸೇರಿದಂತೆ ಎಂಟು ಮಂದಿ ಇದ್ದರು.
ಮಾರ್ಚ್ 18ರಂದು ಲಕ್ಷದ್ವೀಪದ ಕಲ್ಪೇನಿ ದ್ವೀಪದ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದಾಗ ಸಮುದ್ರ ಮಧ್ಯೆ ಎಂಟು ಮಂದಿ ಮೀನುಗಾರರು ತೇಲುತ್ತಿದ್ದು ರಕ್ಷಣೆಗಾಗಿ ಕೈಬೀಸುತ್ತಿರುವುದು ಕಂಡುಬಂದಿತ್ತು. ಮೀನುಗಾರರು ಬಳಿಕ ಅವರನ್ನು ರಕ್ಷಿಸಿ ಕಲ್ಪೇನಿ ದ್ವೀಪಕ್ಕೆ ಕರೆದೊಯ್ದು ಉಪಚರಿಸಿದ್ದರು. ಮಂಗಳೂರು ಕೋಸ್ಟ್ ಗಾರ್ಡ್ ಮಾಹಿತಿ ಪಡೆದು ಸ್ಪೀಡ್ ಬೋಟ್ ಮೂಲಕ ಎಂಟು ಮಂದಿ ಹಡಗು ಸಿಬಂದಿಯನ್ನು ಕೊಚ್ಚಿ ದ್ವೀಪಕ್ಕೆ ಕರೆದೊಯ್ದಿದ್ದಾರೆ. ಹಡಗಿನ ಮಾಲೀಕರು ಕೊಚ್ಚಿನ್ ತೆರಳಿದ್ದು, ಸಿಬಂದಿಯನ್ನು ಕರೆತರಲಿದ್ದಾರೆ ಎಂದು ಮಂಗಳೂರು ಹಳೆಬಂದರು ಸಂಘದ ಕಾರ್ಯದರ್ಶಿ ಅಬ್ದುಲ್ ಲತೀಫ್ ತಿಳಿಸಿದ್ದಾರೆ.
Boat carrying items to lakshadweep from Mangalore capsized. Three days 8 fishermen were without food and water. Finally cost gaurd have arrived for their help and rescued them.
13-07-26 02:50 pm
HK News Staffer
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
13-07-26 02:54 pm
HK News Staffer
ಮಂಗಳೂರಿನಲ್ಲಿ ಮತ್ತಷ್ಟು ಬಾಂಗ್ಲಾ ನಿವಾಸಿಗಳ ಬೇಟೆ ;...
13-07-26 11:51 am
ತಮ್ಮ ನೈಜ ಗುರುತನ್ನು ಮರೆಮಾಚಿ ಪಡಿತರ ಚೀಟಿ, ವೋಟರ್...
12-07-26 10:13 pm
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm