ಬ್ರೇಕಿಂಗ್ ನ್ಯೂಸ್
22-03-24 09:44 pm Udupi Correspondent ಕರಾವಳಿ
ಉಡುಪಿ, ಮಾ.22: ಎಂಪಿಯಾಗಿ ದೆಹಲಿಗೆ ಹೋಗೋರಿಗೆ ಹಿಂದಿ, ಇಂಗ್ಲಿಷ್ ಭಾಷೆ ತಿಳಿದಿರಬೇಕು. ನಮ್ಮ ಎದುರಾಳಿಗೆ ಭಾಷೆ ಗೊತ್ತಿಲ್ಲ ಎಂದು ಟಾಂಗ್ ಇಟ್ಟ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರಿಗೆ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ತಿರುಗೇಟು ನೀಡಿದ್ದಾರೆ.
ಜಯಪ್ರಕಾಶ್ ಹೆಗ್ಡೆ ಆಡಿದ್ದ ಮಾತು ಭಾರೀ ವೈರಲ್ ಆಗಿತ್ತು. ಇದಕ್ಕೆ ಉತ್ತರಿಸಿದ ಪೂಜಾರಿ, ಭಾಷೆ ನಮ್ಮ ಬದುಕಿನ ಭಾಗ ಅಷ್ಟೇ. ನನ್ನ ಮಾತೃಭಾಷೆ ಕನ್ನಡ ನನಗೆ ಚೆನ್ನಾಗಿ ಬರುತ್ತದೆ. ಜಯಪ್ರಕಾಶ್ ಹೆಗ್ಡೆ ನಾನು ಸಂಸದನಾದರೆ ಭಾಷೆ ಸಮಸ್ಯೆಯಾಗುತ್ತದೆ ಎಂದಿದ್ದಾರೆ. ಸಂಸದನಾಗಿ ಆರು ತಿಂಗಳಲ್ಲಿ ಹಿಂದಿ ಕಲಿಯುತ್ತೇನೆ. ಈ ಬಗ್ಗೆ ಉಡುಪಿ -ಚಿಕ್ಕಮಗಳೂರಿನ ಮತದಾರಿಗೆ ನಾನು ಭರವಸೆ ಕೊಡುತ್ತೇನೆ. ನನಗೆ ಭಾಷೆ ತೊಡಕಾಗುತ್ತದೆ ಎಂಬ ಆತಂಕ ನಿಮಗೆ ಬೇಡ. ಸಂಸದನಾಗಿ ಅರೇ ತಿಂಗಳಲ್ಲಿ ಹಿಂದಿಯಲ್ಲಿ ಭಾಷಣ ಮಾಡುತ್ತೇನೆ. ನನ್ನ ಬಗ್ಗೆ ಆತಂಕ ಇರುವ ಜಯಪ್ರಕಾಶ್ ಹೆಗ್ಡೆ ಅವರನ್ನೂ ಖುಷಿ ಪಡಿಸುತ್ತೇನೆ ಎಂದು ವ್ಯಂಗ್ಯವಾಗಿ ಸವಾಲು ಹಾಕಿದ್ದಾರೆ.

ಕನ್ನಡ ಮಾತ್ರ ತಿಳಿದಿರುವ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಅಣಕಿಸಿ ಜಯಪ್ರಕಾಶ್ ಹೆಗ್ಡೆ ಮಾತನಾಡಿದ್ದರು. ಹಿಂದಿ, ಇಂಗ್ಲಿಷ್ ಬರದೇ ದೆಹಲಿಯಲ್ಲಿ ವ್ಯವಹಾರ ಕಷ್ಟ ಸಾಧ್ಯ? ಭಾಷೆ ಬರದಿದ್ದರೆ ಕಚೇರಿಗಳಲ್ಲಿ ಬಹಳ ಸಮಸ್ಯೆಯಾಗುತ್ತದೆ. ಅಧಿಕಾರಿಗಳ ಬಳಿ ಹೋಗಿ ವೈಯಕ್ತಿಕವಾಗಿ ಮಾತನಾಡುವಾಗ ತೊಂದರೆ ಆಗುತ್ತದೆ. ಭಾಷೆ ಬರುವ ಬೇರೆಯವರನ್ನು ತನ್ನ ಬದಲಿಗೆ ಕಳಿಸಿ ವ್ಯವಹಾರ ಮಾಡಲು ಸಾಧ್ಯವಿಲ್ಲ. ಪಾಸ್ ಇಲ್ಲದ ವ್ಯಕ್ತಿ ಸಂಸತ್ ಒಳಗೆ ವ್ಯವಹರಿಸಲೂ ಸಾಧ್ಯವಿಲ್ಲ.
ಸ್ವತಃ ಎಂಪಿ ಮಾತ್ರ ಅಧಿಕಾರಿಗಳ ಬಳಿ ಹೋಗಿ ವ್ಯವಹರಿಸಬಹುದು. ಭಾಷೆ ಬರದಿದ್ದರೆ ಸಂಸದನಾಗಿ ಕೆಲಸ ನಿಭಾಯಿಸುವುದು ಕಷ್ಟ. ಕೆಲಸಕ್ಕೆ ಅಡ್ಡಿಯಾಗುತ್ತದೆ. ಅನುವಾದಕ ಒಬ್ಬರು ಇರುತ್ತಾರೆ.. ಕನ್ನಡದಲ್ಲಿ ಮಾತನಾಡುವ ಅವಕಾಶ ಇದೆ. ನಾನು ಸಂಸದನಾಗಿದ್ದಾಗ ಕನ್ನಡದಲ್ಲೇ ಪ್ರತಿಜ್ಞೆ ಸ್ವೀಕರಿಸಿದ್ದೆ. ಕನ್ನಡದಲ್ಲಿಯೇ ಭಾಷಣ ಮಾಡುತ್ತೇನೆ ಎಂದು ಪಾರ್ಲಿಮೆಂಟ್ ನಲ್ಲಿ ಅಧಿಕಾರಿಗಳಿಗೆ ತಿಳಿಸಿದ್ದೆ. ಅನುವಾದ ಮಾಡಿದರೆ ಯಾರು ನಿಮ್ಮ ಕನ್ನಡ ಭಾಷಣವನ್ನು ಕೇಳುವುದಿಲ್ಲ ಎಂದವರು ಹೇಳಿದ್ದರು. ಹಿಂದಿ ಅಥವಾ ಇಂಗ್ಲಿಷ್ ನಲ್ಲಿ ಮಾತನಾಡಿದರೆ ಸಂಸದರು ಕೇಳುತ್ತಾರೆ ಎಂದು ಹೇಳಿದ್ದರು. ಕನ್ನಡದಲ್ಲಿ ಮಾತನಾಡಬಾರದು ಎಂದು ಏನೂ ಇಲ್ಲ. ಆದರೆ ಸಂಸದರಾಗಿ ನಮಗೆ ರಾಷ್ಟ್ರೀಯ ಭಾಷೆಗಳ ಹಿಡಿತ ಇರಬೇಕು ಎಂದು ಉಡುಪಿಯ ಬ್ರಹ್ಮಾವರದಲ್ಲಿ ಜಯಪ್ರಕಾಶ್ ಹೆಗ್ಡೆ ಭಾಷಣ ಮಾಡಿದ್ದರು.
Udupi Kota Shrinivas Poojari slams Congress Jayaprakash Hegde. I can learn Hindi well not a big issue to learn.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm