ಬ್ರೇಕಿಂಗ್ ನ್ಯೂಸ್
24-03-24 12:14 pm Mangaluru Correspondent ಕರಾವಳಿ
Photo credits : Representational Image
ಪುತ್ತೂರು, ಮಾ.24: ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಐನೆಕಿದು ಗ್ರಾಮದ ಕಾಡಿನಂಚಿನ ಮನೆಗೆ ಶನಿವಾರ ಸಂಜೆ ಮೂವರು ನಕ್ಸಲರು ಆಗಮಿಸಿದ್ದು ಅಕ್ಕಿ ಕೇಳಿ ಪಡೆದು ಒಂದು ತಾಸು ಕಾಲ ಮಾತುಕತೆ ನಡೆಸಿದ್ದಾರೆ.
ನಿನ್ನೆ ಸಂಜೆ ಮಳೆಯಾಗುತ್ತಿದ್ದ ಸಂದರ್ಭ ನಕ್ಸಲರು ಅಶೋಕ್ ಎಂಬವರ ಮನೆಗೆ ಭೇಟಿ ನೀಡಿದ್ದಾರೆ. ಮನೆಯವರ ಜೊತೆ ಸುಮಾರು ಒಂದು ತಾಸಿಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದು ತಮ್ಮ ಮೊಬೈಲ್ ಚಾರ್ಜ್ ಮಾಡಿ ಅಲ್ಲಿಂದ ತೆರಳಿದ್ದಾರೆ. ಬಂದಿದ್ದ ಮೂವರ ಬಳಿಯೂ ಶಸ್ತ್ರಾಸ್ತ್ರಗಳಿದ್ದ ಬಗ್ಗೆ ಮಾಹಿತಿಯಿದ್ದು ಬಟ್ಟೆಯಿಂದ ಸುತ್ತಿಕೊಂಡಿದ್ದರು. ಮನೆಯವರ ಬಳಿ ಎರಡು ಕೇಜಿಯಷ್ಟು ಅಕ್ಕಿ, ದಿನಸಿ ಸಾಮಗ್ರಿ ಪಡೆದು ಅರಣ್ಯದತ್ತ ತೆರಳಿದ್ದಾರೆ. ಮೂವರ ತಂಡ ಮನೆಯೊಳಗೆ ಬಂದಿದೆ ಎನ್ನಲಾಗಿದ್ದರೂ ತಂಡದಲ್ಲಿ ನಾಲ್ವರು ಅಥವಾ ಐವರು ಇದ್ದಿರುವ ಶಂಕೆಯಿದೆ. ಈ ಬಗ್ಗೆ ಮಾಹಿತಿ ಪಡೆದ ಸುಬ್ರಹ್ಮಣ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಮಾಹಿತಿ ಸಂಗ್ರಹಿಸಿದ್ದಾರೆ.
ವಾರದ ಹಿಂದೆ ದಕ್ಷಿಣ ಕನ್ನಡ- ಕೊಡಗು ಗಡಿಭಾಗದ ಕೂಜಿಮಲೆಯ ಎಸ್ಟೇಟ್ ಬಳಿಗೆ ಬಂದಿದ್ದ ನಾಲ್ವರು ನಕ್ಸಲರು ಅಲ್ಲಿನ ಅಂಗಡಿಯಿಂದ 25 ಕೇಜಿ ಅಕ್ಕಿ ಸೇರಿ 3500 ರೂ. ಮೌಲ್ಯದ ದಿನಸಿ ಸಾಮಗ್ರಿ ಖರೀದಿಸಿ ತೆರಳಿದ್ದರು. ಕೂಜಿಮಲೆ ಮತ್ತು ಐನೆಕಿದು ನಡುವೆ ಸುಮಾರು 25 ಕಿ.ಮೀ. ಅಂತರವಿದ್ದು ಈ ಪ್ರದೇಶದಲ್ಲಿ ನಕ್ಸಲ್ ನಿಗ್ರಹ ದಳ ನಿರಂತರ ಕೂಂಬಿಗ್ ನಡುವೆಯೂ ನಕ್ಸಲರು ಮತ್ತೆ ಪ್ರತ್ಯಕ್ಷಗೊಂಡಿದ್ದಾರೆ.
ನಕ್ಸಲರು ಭೇಟಿ ನೀಡಿದ ಪ್ರದೇಶ ಕುಮಾರಪರ್ವತ ಸಾಲಿನ ಪಾಟಿಕುಮೇರಿ ದಟ್ಟ ಕಾಡಿಗೆ ಹತ್ತಿರವಿದೆ. ಇಲ್ಲಿಂದ ಕೊಡಗಿನ ಸೋಮವಾರಪೇಟೆ ಮತ್ತು ಇನ್ನೊಂದು ದಾರಿಯಾಗಿ ಗಾಳಿಬೀಡು ಸಂಪರ್ಕಿಸಲು ದಾರಿಯಿದೆ. ಅಲ್ಲಿಂದ ಸಂಪಾಜೆ ಗಡಿ ಮೂಲಕ ಕೇರಳದ ಅರಣ್ಯದೊಳಗೆ ಸೇರಲು ಸಾಧ್ಯವಿದೆ ಎಂದು ಸ್ಥಳೀಯರು ಹೇಳುತ್ತಾರೆ. ಹೀಗಾಗಿ ನಕ್ಸಲರ ತಂಡ ಮತ್ತೆ ಕೇರಳದ ಕಡೆ ಸಾಗುತ್ತಿರುವ ಸಾಧ್ಯತೆಯಿದೆ.
Mangalore a team of three Naxals visit Inakidu village in kukke subramanya seek for rice. Following reports that Naxals were spotted in Koojumale Kadamakallu areas, the Anti-Naxal Force has arrived and has begun combing operations in three places.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm