ಬ್ರೇಕಿಂಗ್ ನ್ಯೂಸ್
24-03-24 12:14 pm Mangaluru Correspondent ಕರಾವಳಿ
Photo credits : Representational Image
ಪುತ್ತೂರು, ಮಾ.24: ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಐನೆಕಿದು ಗ್ರಾಮದ ಕಾಡಿನಂಚಿನ ಮನೆಗೆ ಶನಿವಾರ ಸಂಜೆ ಮೂವರು ನಕ್ಸಲರು ಆಗಮಿಸಿದ್ದು ಅಕ್ಕಿ ಕೇಳಿ ಪಡೆದು ಒಂದು ತಾಸು ಕಾಲ ಮಾತುಕತೆ ನಡೆಸಿದ್ದಾರೆ.
ನಿನ್ನೆ ಸಂಜೆ ಮಳೆಯಾಗುತ್ತಿದ್ದ ಸಂದರ್ಭ ನಕ್ಸಲರು ಅಶೋಕ್ ಎಂಬವರ ಮನೆಗೆ ಭೇಟಿ ನೀಡಿದ್ದಾರೆ. ಮನೆಯವರ ಜೊತೆ ಸುಮಾರು ಒಂದು ತಾಸಿಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದು ತಮ್ಮ ಮೊಬೈಲ್ ಚಾರ್ಜ್ ಮಾಡಿ ಅಲ್ಲಿಂದ ತೆರಳಿದ್ದಾರೆ. ಬಂದಿದ್ದ ಮೂವರ ಬಳಿಯೂ ಶಸ್ತ್ರಾಸ್ತ್ರಗಳಿದ್ದ ಬಗ್ಗೆ ಮಾಹಿತಿಯಿದ್ದು ಬಟ್ಟೆಯಿಂದ ಸುತ್ತಿಕೊಂಡಿದ್ದರು. ಮನೆಯವರ ಬಳಿ ಎರಡು ಕೇಜಿಯಷ್ಟು ಅಕ್ಕಿ, ದಿನಸಿ ಸಾಮಗ್ರಿ ಪಡೆದು ಅರಣ್ಯದತ್ತ ತೆರಳಿದ್ದಾರೆ. ಮೂವರ ತಂಡ ಮನೆಯೊಳಗೆ ಬಂದಿದೆ ಎನ್ನಲಾಗಿದ್ದರೂ ತಂಡದಲ್ಲಿ ನಾಲ್ವರು ಅಥವಾ ಐವರು ಇದ್ದಿರುವ ಶಂಕೆಯಿದೆ. ಈ ಬಗ್ಗೆ ಮಾಹಿತಿ ಪಡೆದ ಸುಬ್ರಹ್ಮಣ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಮಾಹಿತಿ ಸಂಗ್ರಹಿಸಿದ್ದಾರೆ.
ವಾರದ ಹಿಂದೆ ದಕ್ಷಿಣ ಕನ್ನಡ- ಕೊಡಗು ಗಡಿಭಾಗದ ಕೂಜಿಮಲೆಯ ಎಸ್ಟೇಟ್ ಬಳಿಗೆ ಬಂದಿದ್ದ ನಾಲ್ವರು ನಕ್ಸಲರು ಅಲ್ಲಿನ ಅಂಗಡಿಯಿಂದ 25 ಕೇಜಿ ಅಕ್ಕಿ ಸೇರಿ 3500 ರೂ. ಮೌಲ್ಯದ ದಿನಸಿ ಸಾಮಗ್ರಿ ಖರೀದಿಸಿ ತೆರಳಿದ್ದರು. ಕೂಜಿಮಲೆ ಮತ್ತು ಐನೆಕಿದು ನಡುವೆ ಸುಮಾರು 25 ಕಿ.ಮೀ. ಅಂತರವಿದ್ದು ಈ ಪ್ರದೇಶದಲ್ಲಿ ನಕ್ಸಲ್ ನಿಗ್ರಹ ದಳ ನಿರಂತರ ಕೂಂಬಿಗ್ ನಡುವೆಯೂ ನಕ್ಸಲರು ಮತ್ತೆ ಪ್ರತ್ಯಕ್ಷಗೊಂಡಿದ್ದಾರೆ.
ನಕ್ಸಲರು ಭೇಟಿ ನೀಡಿದ ಪ್ರದೇಶ ಕುಮಾರಪರ್ವತ ಸಾಲಿನ ಪಾಟಿಕುಮೇರಿ ದಟ್ಟ ಕಾಡಿಗೆ ಹತ್ತಿರವಿದೆ. ಇಲ್ಲಿಂದ ಕೊಡಗಿನ ಸೋಮವಾರಪೇಟೆ ಮತ್ತು ಇನ್ನೊಂದು ದಾರಿಯಾಗಿ ಗಾಳಿಬೀಡು ಸಂಪರ್ಕಿಸಲು ದಾರಿಯಿದೆ. ಅಲ್ಲಿಂದ ಸಂಪಾಜೆ ಗಡಿ ಮೂಲಕ ಕೇರಳದ ಅರಣ್ಯದೊಳಗೆ ಸೇರಲು ಸಾಧ್ಯವಿದೆ ಎಂದು ಸ್ಥಳೀಯರು ಹೇಳುತ್ತಾರೆ. ಹೀಗಾಗಿ ನಕ್ಸಲರ ತಂಡ ಮತ್ತೆ ಕೇರಳದ ಕಡೆ ಸಾಗುತ್ತಿರುವ ಸಾಧ್ಯತೆಯಿದೆ.
Mangalore a team of three Naxals visit Inakidu village in kukke subramanya seek for rice. Following reports that Naxals were spotted in Koojumale Kadamakallu areas, the Anti-Naxal Force has arrived and has begun combing operations in three places.
13-07-26 10:32 am
HK News Staffer
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
13-07-26 11:51 am
HK News Staffer
ತಮ್ಮ ನೈಜ ಗುರುತನ್ನು ಮರೆಮಾಚಿ ಪಡಿತರ ಚೀಟಿ, ವೋಟರ್...
12-07-26 10:13 pm
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm