ಬ್ರೇಕಿಂಗ್ ನ್ಯೂಸ್
25-03-24 07:06 pm HK NEWS ಕರಾವಳಿ
ಉಡುಪಿ, ಮಾ.25: ಬಾರ್ ನಲ್ಲಿ ಕುಳಿತು ಕುಡಿಯುತ್ತಿದ್ದಾಗ ಕಾಲು ತಾಗಿದೆ ಎಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬನನ್ನು ಅಟ್ಟಾಡಿಸಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಮಣಿಪಾಲ ಸರಳೇಬೆಟ್ಟು ಪ್ರದೇಶದಲ್ಲಿ ನಡೆದಿದೆ.
ಮಣಿಪಾಲ ಎಂಐಟಿ ಕಾಲೇಜಿನ ವಿದ್ಯಾರ್ಥಿ, ಮುಂಬೈ ಮೂಲದ ಆರುಷ್ ಕುಮಾರ್ (21)ಹಲ್ಲೆಗೊಳಗಾದ ಯುವಕ. ಪುಂಡರ ತಂಡವು ಯುವಕನ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸುಮಾರು ಆರು ಮಂದಿ ಸ್ಥಳೀಯ ಯುವಕರು ಹಲ್ಲೆ ನಡೆಸಿದ್ದಾರೆ.

ಮದ್ಯ ಸೇವಿಸುತ್ತಿದ್ದಾಗ ಪುಂಡರ ತಂಡದ ಓರ್ವನಿಗೆ ಕಾಲು ತಾಗಿದ ಹಿನ್ನೆಲೆ ತಗಾದೆ ತೆಗೆದು ಹಲ್ಲೆ ನಡೆಸಿದ್ದಾರೆ. ಬಾರ್ ನಲ್ಲಿ ಹಲ್ಲೆ ನಡೆಸಿದ್ದು ಮಾತ್ರವಲ್ಲದೆ, ಆತನನ್ನು ವಾಸವಿದ್ದ ಅಪಾರ್ಟ್ ಮೆಂಟ್ ವರೆಗೂ ಅಟ್ಟಾಡಿಸಿ ಹಲ್ಲೆ ನಡೆಸಿದ್ದಾರೆ. ಅರುಷ್ ತನ್ನ ಅಪಾರ್ಟ್ ಮೆಂಟ್ ನಲ್ಲಿ ಒಬ್ಬನೇ ತಂಗಿದ್ದ. ಕೊಠಡಿಯ ವರೆಗೂ ಅಟ್ಟಾಡಿಸಿ ರೂಂ ಒಳಗೆ ಹೋಗಲು ಬಿಡದೆ ಎಳೆದು ಹಲ್ಲೆ ನಡೆಸಿದ್ದಾರೆ. ವಿಷಯ ತಿಳಿದು ರಕ್ಷಿಸಲು ಬಂದ ಆರುಷ್ ಸ್ನೇಹಿತರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಆಬಳಿಕ ಯುವಕನ ಮೊಬೈಲ್ ಗೆ ಕರೆ ಮಾಡಿ ಮತ್ತೊಮ್ಮೆ ಹಲ್ಲೆ ನಡೆಸುವುದಾಗಿ ಬೆದರಿಕೆ ಒಡ್ಡಿದ್ದಾರೆ. ಹಲ್ಲೆ ವೀಡಿಯೋ ಆಧರಿಸಿ ಅರುಷ್ ನನ್ನ ಕರೆಸಿ ಮಣಿಪಾಲ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
ಸಿಸಿಟಿವಿ ಹಾಗೂ ಯುವಕರ ಮೊಬೈಲ್ ಸಂಖ್ಯೆ ಮೇಲೆ ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.
#Udupi #Manipal student thrashed for touching his leg in bar, #video goes viral #BREAKING_NEWS pic.twitter.com/4mce0NkEUz
— Headline Karnataka (@hknewsonline) March 25, 2024
Udupi Manipal student thrashed for touching strangers leg in bar, video goes viral
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm