ಬ್ರೇಕಿಂಗ್ ನ್ಯೂಸ್
25-03-24 07:39 pm Mangaluru Correspondent ಕರಾವಳಿ
ಮಂಗಳೂರು, ಮಾ.25: ಇಡೀ ದೇಶಕ್ಕೆ ಇರುವ ದೊಡ್ಡ ಗ್ಯಾರಂಟಿ ಪ್ರಧಾನ ಮಂತ್ರಿ ನರೇಂದ್ರ ಮೋದಿ. ಎಲ್ಲಾ ಗ್ಯಾರಂಟಿಗಳಿಗೂ ಗ್ಯಾರಂಟಿ ಪ್ರಧಾನಿ ಮೋದಿ ಎಂದು ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಹೇಳಿದ್ದಾರೆ.
ಕುದ್ರೋಳಿ ಗೋಕರ್ಣನಾಥ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮ ಮಂದಿ ಕಾಂಗ್ರೆಸಿಗೆ ಗ್ಯಾರಂಟಿ ಯೋಜನೆ ಇದೆ, ನಿಮ್ಮದೇನು ಸ್ಟ್ರಾಟಜಿ ಇದೆಯೆಂಬ ಪ್ರಶ್ನೆಗೆ, ನರೇಂದ್ರ ಮೋದಿಯವರ ಸಾಧನೆಗಳು,10 ವರ್ಷದಲ್ಲಿ ದೇಶದಲ್ಲಿ ಅವರು ಮಾಡಿರುವ ಕೆಲಸ. ಮುಂದಿನ 25 ವರ್ಷಗಳ ಕಾಲ ವಿಕಸಿತ ಭಾರತದ ಕಲ್ಪನೆ, ಎಲ್ಲರೂ ಒಟ್ಟಾಗಿ ಒಂದಾಗಿ ಸೇರಿಕೊಂಡು ದೇಶದ ಅಭಿವೃದ್ಧಿ ಮಾಡಬೇಕು ಎಂಬ ಪರಿಕಲ್ಪನೆ. ಭಾರತ ದೇಶವನ್ನು ನಂಬರ್ ಒನ್ ಮಾಡಬೇಕು ಅನ್ನೋದೇ ನಮ್ಮ ಗ್ಯಾರೆಂಟಿ ಎಂದು ಹೇಳಿದರು.


ಕಾಂಗ್ರೆಸ್ ನ ಗ್ಯಾರೆಂಟಿ ಯಾವ ರೀತಿ ಆಗುತ್ತಿದೆ ಅನ್ನೋದು ಎಲ್ಲರಿಗೂ ಗೊತ್ತಿದೆ. ಕಳೆದ ಒಂದು ವರ್ಷದಿಂದ ಯಾವುದೇ ಅನುದಾನ, ಯಾವುದೇ ಶಿಲಾನ್ಯಾಸ ಮಾಡದ ಮುಖ್ಯಮಂತ್ರಿ ಅಂದ್ರೆ ಅದು ಸಿದ್ದರಾಮಯ್ಯ. ಯಾವುದೇ ಹೊಸ ಯೋಜನೆಗೆ ಶಿಲಾನ್ಯಾಸ ಮಾಡದ ಜಿಲ್ಲಾ ಉಸ್ತುವಾರಿ ಸಚಿವ ಅಂದ್ರೆ ಅದು ದಿನೇಶ್ ಗುಂಡೂರಾವ್. ಗ್ಯಾರಂಟಿಗೆ ದುಡ್ಡು ಕೊಟ್ಟು ಅಭಿವೃದ್ಧಿ ಯೋಜನೆಗಳಿಗೆ ಹಣ ಇಲ್ಲದ ಸ್ಥಿತಿಯಾಗಿದೆ ಎಂದು ಟಾಂಗ್ ಇಟ್ಟಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಬ್ಯಾಂಕಿಂಗ್ ಕ್ಷೇತ್ರಕ್ಕೆ ದೊಡ್ಡ ಕೊಡುಗೆಯನ್ನ ಕೊಟ್ಟಿದೆ. 5 ರಾಷ್ಟ್ರೀಕೃತ ಬ್ಯಾಂಕ್ ಗಳನ್ನ ದೇಶಕ್ಕೆ ಕೊಟ್ಟಿದೆ. ಇಂತಹ ಪ್ರಗತಿಶೀಲ ಜಿಲ್ಲೆಯನ್ನ ಪ್ರತಿನಿಧಿಸುವ ಅವಕಾಶ ಸಿಕ್ಕಿದ್ದೇ ನನ್ನ ಭಾಗ್ಯ. ಪ್ರಧಾನ ಮಂತ್ರಿಗಳ ವಿಕಸಿತ ಭಾರತದ ಕಲ್ಪನೆಯಡಿಯಲ್ಲಿ ದೇಶದ ಅಭಿವೃದ್ಧಿ ಮಾಡುವ ಕೆಲಸ ಮಾಡುತ್ತೇನೆ ಎಂದು ಚೌಟ ಹೇಳಿದರು.
ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ್ಯರ ಹೆಸರಿಡುವ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ, ನಾವು ತುಳುನಾಡಿನ ದೈವ ದೇವರನ್ನ ನಂಬುವಂತಹ ಪಾರ್ಟಿ. ಕೋಟಿ ಚೆನ್ನಯ್ಯರು ನಮ್ಮೆಲ್ಲರಿಗೂ ಪ್ರೇರಣಾ ಶಕ್ತಿ. ನಮ್ಮೆಲ್ಲರಿಗೂ ದೈವೀ ಸ್ವರೂಪವಾದ ಶಕ್ತಿ. ಕೋಟಿ ಚೆನ್ನಯ್ಯರ ಹೆಸರು ಚಿರಸ್ಥಾಯಿಯಾಗಿ ಉಳಿಯಬೇಕು. ಇಡೀ ರಾಜ್ಯದ ಜನರಿಗೆ ಪ್ರೇರಣಾದಾಯಿ ಹೆಸರಾಗಬೇಕು. ಅದಕ್ಕೆ ಬೇಕಾದ ಎಲ್ಲ ವ್ಯವಸ್ಥೆಗಳನ್ನ ಮಾಡುತ್ತೇವೆ.
ರಾಜ್ಯ ಸರಕಾರದಿಂದ ಈ ಪ್ರಸ್ತಾವನೆಯನ್ನ ಈಗಾಗಲೇ ಕೇಂದ್ರಕ್ಕೆ ಕಳುಹಿಸಲಾಗಿದೆ. ಅದನ್ನ ಬೆನ್ನು ಹಿಡಿದು ಕೆಲಸ ಆಗುವಂತೆ ಮಾಡುತ್ತೇನೆ ಎಂದು ಭರವಸೆ ಕೊಟ್ಟರು.
Making India no 1 is our guarantee says BJP Candidate Brijesh Chowta in Mangalore
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm