ಬ್ರೇಕಿಂಗ್ ನ್ಯೂಸ್
26-03-24 12:06 pm Mangalore Correspondent ಕರಾವಳಿ
ಪುತ್ತೂರು, ಮಾ.26: ಕುಕ್ಕೆ ಸುಬ್ರಹ್ಮಣ್ಯ ಬಳಿಯ ಐನೆಕಿದು ಗ್ರಾಮದ ಮನೆಯೊಂದಕ್ಕೆ ಶಂಕಿತ ನಕ್ಸಲರು ಭೇಟಿ ನೀಡಿದ್ದ ಅನುಮಾನದಲ್ಲಿ ಸುಬ್ರಹ್ಮಣ್ಯ ಠಾಣೆ ಪೊಲೀಸರು ನಾಲ್ವರ ವಿರುದ್ಧ ಎಫ್ಐ ಆರ್ ದಾಖಲಿಸಿದ್ದಾರೆ.
ಈ ಬಗ್ಗೆ ನಕ್ಸಲ್ ನಿಗ್ರಹ ದಳ, ಕಾರ್ಕಳ ವಿಭಾಗೀಯ ಎಸ್ ಪಿ ಜಿತೇಂದ್ರ ಮಾಹಿತಿ ನೀಡಿದ್ದಾರೆ, ರೈತ ಅಶೋಕ್ ಎಂಬವರ ಮನೆಗೆ ಬಂದಿದ್ದ ಶಂಕಿತ ನಕ್ಸಲರು ಅವರ ಮನೆಯಿಂದ ಅಕ್ಕಿ, ಮೆಣಸಿನಕಾಯಿ ಹಾಗೂ ಇನ್ನಿತರ ದಿನಸಿ ಪದಾರ್ಥಗಳನ್ನು ಕೊಂಡೊಯ್ದಿದ್ದಾರೆ ಎಂದು ಹೇಳಿದ್ದಾರೆ.
ಶನಿವಾರ ಸಂಜೆ 6.30 ಕ್ಕೆ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಪುರುಷರು ನಮ್ಮ ಮನೆಗೆ ಬಂದಿದ್ದರು. ಓರ್ವ ಮಹಿಳೆ 30-35 ವರ್ಷದ ವಯಸ್ಸಿನವರಾಗಿದ್ದು, ಮತ್ತೋರ್ವ ಮಹಿಳೆಗೆ 40-45 ವರ್ಷ ವಯಸ್ಸಾಗಿತ್ತು. ಅವರು ತಮ್ಮ ಬಳಿ ಬಂದೂಕು ಹೊಂದಿದ್ದರು. ಕನ್ನಡ, ತುಳು ಭಾಷೆಗಳಲ್ಲಿ ಮಾತನಾಡುತ್ತಿದ್ದರು. ಅವರು ತಮ್ಮನ್ನು ನಕ್ಸಲರೆಂದು ಪರಿಚಯಿಸಿಕೊಂಡು, ಬಡವರಿಗೆ ನ್ಯಾಯ ಒದಗಿಸುವುದಕ್ಕಾಗಿ ಕೆಲಸ ಮಾಡುತ್ತಿರುವುದಾಗಿ ಹೇಳಿದರು. ಅಷ್ಟೇ ಅಲ್ಲದೇ ಆಹಾರ ಕೇಳಿಕೊಂಡ ಅವರು ಕೆಲವು ದಿನಸಿ ಪದಾರ್ಥಗಳನ್ನು ಕೇಳಿ ಪಡೆದಿದ್ದಾರೆ. ಭಯದಿಂದ ನಾವು ಅವರು ಕೇಳಿದ್ದನ್ನು ಕೊಟ್ಟೆವು. ತಮ್ಮನ್ನು ಬೆಂಬಲಿಸುವಂತೆ ಕೇಳಿದ ಅವರು ಈ ಮಾಹಿತಿಯನ್ನು ಯಾರಿಗಾದರೂ ನೀಡಿದರೆ ಕೊಲ್ಲುವುದಾಗಿ ಬಂದೂಕು ತೋರಿಸಿ ಬೆದರಿಕೆ ಹಾಕಿ ಸಂಜೆ 7:30 ವೇಳೆಗೆ ಹೊರಟುಹೋದರು ಎಂದು ಅಶೋಕ್ ಹೇಳಿದ್ದಾರೆ.
ಶಂಕಿತ ನಕ್ಸಲರ ವಿರುದ್ಧ ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ ಮತ್ತು 1967ರ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
Mangalore Naxals movement at Inakidu village in kukke subramanya, FIR lodged on four. Three unidentified persons, suspected to be cadres of the Communist Party of India-Maoist (CPI-Maoist), reportedly visited a house near Kukke Subrahmanya in Kadaba taluk (revenue unit) in Dakshina Kannada District of Karnataka on March 23.
13-07-26 10:32 am
HK News Staffer
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
13-07-26 11:51 am
HK News Staffer
ತಮ್ಮ ನೈಜ ಗುರುತನ್ನು ಮರೆಮಾಚಿ ಪಡಿತರ ಚೀಟಿ, ವೋಟರ್...
12-07-26 10:13 pm
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm