ಬ್ರೇಕಿಂಗ್ ನ್ಯೂಸ್
26-03-24 12:06 pm Mangalore Correspondent ಕರಾವಳಿ
ಪುತ್ತೂರು, ಮಾ.26: ಕುಕ್ಕೆ ಸುಬ್ರಹ್ಮಣ್ಯ ಬಳಿಯ ಐನೆಕಿದು ಗ್ರಾಮದ ಮನೆಯೊಂದಕ್ಕೆ ಶಂಕಿತ ನಕ್ಸಲರು ಭೇಟಿ ನೀಡಿದ್ದ ಅನುಮಾನದಲ್ಲಿ ಸುಬ್ರಹ್ಮಣ್ಯ ಠಾಣೆ ಪೊಲೀಸರು ನಾಲ್ವರ ವಿರುದ್ಧ ಎಫ್ಐ ಆರ್ ದಾಖಲಿಸಿದ್ದಾರೆ.
ಈ ಬಗ್ಗೆ ನಕ್ಸಲ್ ನಿಗ್ರಹ ದಳ, ಕಾರ್ಕಳ ವಿಭಾಗೀಯ ಎಸ್ ಪಿ ಜಿತೇಂದ್ರ ಮಾಹಿತಿ ನೀಡಿದ್ದಾರೆ, ರೈತ ಅಶೋಕ್ ಎಂಬವರ ಮನೆಗೆ ಬಂದಿದ್ದ ಶಂಕಿತ ನಕ್ಸಲರು ಅವರ ಮನೆಯಿಂದ ಅಕ್ಕಿ, ಮೆಣಸಿನಕಾಯಿ ಹಾಗೂ ಇನ್ನಿತರ ದಿನಸಿ ಪದಾರ್ಥಗಳನ್ನು ಕೊಂಡೊಯ್ದಿದ್ದಾರೆ ಎಂದು ಹೇಳಿದ್ದಾರೆ.
ಶನಿವಾರ ಸಂಜೆ 6.30 ಕ್ಕೆ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಪುರುಷರು ನಮ್ಮ ಮನೆಗೆ ಬಂದಿದ್ದರು. ಓರ್ವ ಮಹಿಳೆ 30-35 ವರ್ಷದ ವಯಸ್ಸಿನವರಾಗಿದ್ದು, ಮತ್ತೋರ್ವ ಮಹಿಳೆಗೆ 40-45 ವರ್ಷ ವಯಸ್ಸಾಗಿತ್ತು. ಅವರು ತಮ್ಮ ಬಳಿ ಬಂದೂಕು ಹೊಂದಿದ್ದರು. ಕನ್ನಡ, ತುಳು ಭಾಷೆಗಳಲ್ಲಿ ಮಾತನಾಡುತ್ತಿದ್ದರು. ಅವರು ತಮ್ಮನ್ನು ನಕ್ಸಲರೆಂದು ಪರಿಚಯಿಸಿಕೊಂಡು, ಬಡವರಿಗೆ ನ್ಯಾಯ ಒದಗಿಸುವುದಕ್ಕಾಗಿ ಕೆಲಸ ಮಾಡುತ್ತಿರುವುದಾಗಿ ಹೇಳಿದರು. ಅಷ್ಟೇ ಅಲ್ಲದೇ ಆಹಾರ ಕೇಳಿಕೊಂಡ ಅವರು ಕೆಲವು ದಿನಸಿ ಪದಾರ್ಥಗಳನ್ನು ಕೇಳಿ ಪಡೆದಿದ್ದಾರೆ. ಭಯದಿಂದ ನಾವು ಅವರು ಕೇಳಿದ್ದನ್ನು ಕೊಟ್ಟೆವು. ತಮ್ಮನ್ನು ಬೆಂಬಲಿಸುವಂತೆ ಕೇಳಿದ ಅವರು ಈ ಮಾಹಿತಿಯನ್ನು ಯಾರಿಗಾದರೂ ನೀಡಿದರೆ ಕೊಲ್ಲುವುದಾಗಿ ಬಂದೂಕು ತೋರಿಸಿ ಬೆದರಿಕೆ ಹಾಕಿ ಸಂಜೆ 7:30 ವೇಳೆಗೆ ಹೊರಟುಹೋದರು ಎಂದು ಅಶೋಕ್ ಹೇಳಿದ್ದಾರೆ.
ಶಂಕಿತ ನಕ್ಸಲರ ವಿರುದ್ಧ ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ ಮತ್ತು 1967ರ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
Mangalore Naxals movement at Inakidu village in kukke subramanya, FIR lodged on four. Three unidentified persons, suspected to be cadres of the Communist Party of India-Maoist (CPI-Maoist), reportedly visited a house near Kukke Subrahmanya in Kadaba taluk (revenue unit) in Dakshina Kannada District of Karnataka on March 23.
15-07-25 10:35 am
Bangalore Correspondent
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:32 am
Mangalore Correspondent
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm